ಭೀಕರ ಕಾಳ್ಗಿಚ್ಚಿಗೆ ಲಕ್ಷಾಂತರ ಹೆಕ್ಟೇರ್ ಅರಣ್ಯ ಭಸ್ಮ
ಸಿಡ್ನಿ, ನವೆಂಬರ್ 12: ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಕಾಳ್ಗಿಚ್ಚು ಲಕ್ಷಾಂತರ ಹೆಕ್ಟೇರ್ ಕಾಡನ್ನು ಸುಟ್ಟುಹಾಕಿದೆ. ಘಟನೆಯಲ್ಲಿ ಕನಿಷ್ಠ ಮೂವರು ಬಲಿಯಾಗಿದ್ದಾರೆ.
ಒಂದು ತಿಂಗಳ ಹಿಂದಷ್ಟೇ ಪೂರ್ವ ಆಸ್ಟ್ರೇಲಿಯಾದಲ್ಲಿ ಬೃಹತ್ ಕಾಳ್ಗಿಚ್ಚನ್ನು ನಿಯಂತ್ರಿಸಿ ಭಾರಿ ಅನಾಹುತವನ್ನು ತಪ್ಪಿಸಲಾಗಿತ್ತು. ಆದರೆ ನ್ಯೂಸೌತ್ ವೇಲ್ಸ್ನಲ್ಲಿ ಕಾಳ್ಗಿಚ್ಚನ್ನು ತಡೆಯಲು ಅಧಿಕಾರಿಗಳಿಗೆ ಸಾಧ್ಯವಾಗಲಿಲ್ಲ. ಊಹಿಸಲು ಅಸಾಧ್ಯವಾದ ರೀತಿಯಲ್ಲಿ ಬೀಸುತ್ತಿರುವ ಗಾಳಿ ವೇಗವಾಗಿ ಬೆಂಕಿಯನ್ನು ಹರಡುತ್ತಿದೆ.
2018ರಲ್ಲಿ ಕೂಡ ಇಲ್ಲಿ ಕಾಳ್ಗಿಚ್ಚು ಬಹುತೇಕ ಅರಣ್ಯವನ್ನು ಬಲಿತೆಗೆದುಕೊಂಡಿತ್ತು. ಮೃತಪಟ್ಟ ಮೂವರಲ್ಲಿ ಇಬ್ಬರು, ಬೆಂಕಿಯ ಕೆನ್ನಾಲಿಗೆಯ ನಡುವೆಯೇ ಕಾರನ್ನು ಓಡಿಸಿ ತಪ್ಪಿಸಿಕೊಳ್ಳುವ ದುಸ್ಸಾಹಸದಲ್ಲಿ ಜೀವ ಕಳೆದುಕೊಂಡಿದ್ದಾರೆ.

ನ್ಯೂಸೌತ್ ವೇಲ್ಸ್ನ ನೆರೆಯ ರಾಜ್ಯಗಳು ಮತ್ತು ನ್ಯೂಜಿಲೆಂಡ್ನ ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಿಸುವ ಕಾರ್ಯಕ್ಕೆ ನೆರವಾಗಿದ್ದಾರೆ. ಈ ಪ್ರದೇಶದ ಸುತ್ತಮುತ್ತಲಿನ ಇಡೀ ಪಟ್ಟಣಗಳಲ್ಲಿನ ಜನರನ್ನು ಬೇರೆಡೆ ಸ್ಥಳಾಂತರಿಸಲಾಗಿದ್ದು, ನೂರಾರು ಶಾಲೆಗಳನ್ನು ಮುಚ್ಚಲಾಗಿದೆ. 30 ಡಿಗ್ರಿ ಸೆಲ್ಸಿಯಸ್ಅನ್ನು ಮೀರಿದ ಉಷ್ಣಾಂಶ ಮತ್ತು ರಭಸದ ಗಾಳಿ ಬೆಂಕಿಯನ್ನು ಇನ್ನಷ್ಟು ಹರಡಿಸುವ ಭೀತಿ ಮೂಡಿಸಿದೆ.
ಸಿಡ್ನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 'ಮಹಾ ದುರಂತ' ಘೋಷಿಸಿರುವ ನ್ಯೂಸೌತ್ ವೇಲ್ಸ್, ಎಚ್ಚರಿಕೆ ವಹಿಸುವಂತೆ ಜನರಿಗೆ ಸೂಚನೆ ನೀಡಿದೆ. ಕ್ವೀನ್ಸ್ಲ್ಯಾಂಡ್ನ ಸುಮಾರು 50 ಪ್ರದೇಶಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗೆ ಸೂಕ್ತ ನೀರಿನ ಲಭ್ಯತೆ ಕೊರತೆ ಎದುರಾಗಿದೆ.
ಇದು ದೇಶ ಕಂಡ ಅತ್ಯಂತ ಅಪಾಯಕಾರಿ ಕಾಳ್ಗಿಚ್ಚಿನ ವಾರ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications