ಉದ್ಘಾಟನೆಗೊಂಡ ಕೆಲವೇ ಗಂಟೆಗಳಲ್ಲಿ ಗಾಂಧಿ ಪ್ರತಿಮೆ ಧ್ವಂಸ; ನಾಚಿಕೆಗೇಡು ಎಂದ ಆಸ್ಟ್ರೇಲಿಯಾ ಪ್ರಧಾನಿ
ಸಿಡ್ನಿ, ನವೆಂಬರ್ 16: ಭಾರತ ಸರ್ಕಾರವು ಆಸ್ಟ್ರೇಲಿಯಾಕ್ಕೆ ಉಡುಗೊರೆಯಾಗಿ ನೀಡಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಬೃಹತ್ ಗಾತ್ರದ ಕಂಚಿನ ಪ್ರತಿಮೆಯನ್ನು ಮೆಲ್ಬೋರ್ನ್ ನಗರದಲ್ಲಿ ಧ್ವಂಸಗೊಳಿಸಲಾಗಿದೆ.
ಈ ಘಟನೆಗೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಬೇಸರ ವ್ಯಕ್ತಪಡಿಸಿದ್ದು, ಇದು ತೀರಾ 'ಅವಮಾನಕರ' ಎಂದು ಖಂಡಿಸಿದ್ದಾರೆ. ಇದರಿಂದ ಭಾರತ-ಆಸ್ಟ್ರೇಲಿಯನ್ ಸಮುದಾಯದಲ್ಲಿ ಬೇಸರ ಮೂಡಿಸಿದೆ.
ಭಾರತದ 75 ವರ್ಷಗಳ ಸ್ವಾತಂತ್ರ್ಯದ ಆಚರಣೆಯ ಅಂಗವಾಗಿ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಅವರು ಭಾರತದ ಕಾನ್ಸುಲ್ ಜನರಲ್ ರಾಜ್ಕುಮಾರ್ ಮತ್ತು ಇತರ ಆಸ್ಟ್ರೇಲಿಯಾದ ನಾಯಕರೊಂದಿಗೆ ಶುಕ್ರವಾರ ರೌವಿಲ್ಲೆಯಲ್ಲಿರುವ ಆಸ್ಟ್ರೇಲಿಯಾದ ಭಾರತೀಯ ಸಮುದಾಯ ಕೇಂದ್ರದಲ್ಲಿ ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿದ ಕೆಲವೇ ಗಂಟೆಗಳಲ್ಲಿ ಈ ಘಟನೆ ನಡೆದಿದೆ.

ಗಾಂಧೀಜಿಗೆ ಈ ರೀತಿಯ ಅಗೌರವ ತೋರಿರುವುದು ಬಹಳ ಅವಮಾನಕರ ಮತ್ತು ಅತ್ಯಂತ ನಿರಾಶಾದಾಯಕವಾಗಿದೆ ಎಂದು ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಬೇಸರ ವ್ಯಕ್ತಪಡಿಸಿದ್ದಾರೆ. ವಿಶ್ವದಲ್ಲೇ ಅತ್ಯಂತ ಬಹುಸಂಸ್ಕೃತಿ ಮತ್ತು ವಲಸಿಗರು ಹೆಚ್ಚಾಗಿರುವ ರಾಷ್ಟ್ರವಾಗಿರುವ ಆಸ್ಟ್ರೇಲಿಯಾದಲ್ಲಿ ಸಾಂಸ್ಕೃತಿಕ ಸ್ಮಾರಕಗಳ ಮೇಲಿನ ದಾಳಿಯನ್ನು ಎಂದಿಗೂ ಸಹಿಸಲಾಗದು ಎಂದು ಅವರು ಹೇಳಿದ್ದಾರೆ.
ಹಾಗೆಯೇ, ಈ ಘಟನೆಗೆ ಕಾರಣರಾದವರು ಆಸ್ಟ್ರೇಲಿಯನ್- ಭಾರತೀಯ ಸಮುದಾಯಕ್ಕೆ ಅಗೌರವ ತೋರಿದ್ದಾರೆ. ಇದರಿಂದ ದೇಶವೇ ತಲೆ ತಗ್ಗಿಸುವಂತಾಗಿದೆ ಎಂದು ಅವರು ತಿಳಿಸಿದ್ದಾರೆ.
ಗಾಂಧಿ ಪ್ರತಿಮೆಯನ್ನು ಭಾರತ ಸರ್ಕಾರ ಉಡುಗೊರೆಯಾಗಿ ನೀಡಿತ್ತು. ಈ ಘಟನೆಯಿಂದ ಭಾರತೀಯ ಸಮುದಾಯವು ತುಂಬಾ ಆಘಾತಕ್ಕೊಳಗಾಗಿದೆ ಮತ್ತು ದುಃಖಕ್ಕೊಳಗಾಗಿದೆ. ಜನರು ಇಂತಹ ಕೀಳು ವಿಧ್ವಂಸಕ ಕೃತ್ಯವನ್ನು ಏಕೆ ಮಾಡುತ್ತಾರೆಂದು ನನಗೆ ಅರ್ಥವಾಗುತ್ತಿಲ್ಲ ಎಂದು ವಿಕ್ಟೋರಿಯಾದ ಭಾರತೀಯ ಸಂಘಗಳ ಒಕ್ಕೂಟದ ಅಧ್ಯಕ್ಷ ಸೂರ್ಯ ಪ್ರಕಾಶ್ ಸೋನಿ ಅಸಮಾಧಾನ ಹೊರಹಾಕಿದ್ದಾರೆ.
ರೋವಿಲ್ಲೆ ಕೇಂದ್ರವು ವಿಕ್ಟೋರಿಯಾ ರಾಜ್ಯದಲ್ಲಿ ಮೊದಲ ಭಾರತೀಯ ಸಮುದಾಯ ಕೇಂದ್ರವಾಗಿದೆ ಮತ್ತು 30 ವರ್ಷಗಳ ಪ್ರಯತ್ನದ ನಂತರ ಗಾಂಧಿ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.
ಈ ಬಗ್ಗೆ ಆಸ್ಟ್ರೇಲಿಯಾ ಇಂಡಿಯಾ ಕಮ್ಯುನಿಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಾಸನ್ ಶ್ರೀನಿವಾಸನ್ ಮಾತನಾಡಿ, ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿದ 24 ಗಂಟೆಗಳಲ್ಲಿ ಯಾರೋ ಒಬ್ಬರು ಅದನ್ನು ಧ್ವಂಸಗೊಳಿಸಲು ಪ್ರಯತ್ನಿಸಿರುವುದು ನನಗೆ ಬೇಸರ ತಂದಿದೆ. ಅವರು ಗಾಂಧೀಜಿ ಪ್ರತಿಮೆಯ ತಲೆಯ ಭಾಗಕ್ಕೆ ಹಾನಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ಹೇಳಿದರು.
ವಿಕ್ಟೋರಿಯಾ ರಾಜ್ಯದಲ್ಲಿ ಸುಮಾರು 3,00,000 ಭಾರತೀಯರು ವಾಸಿಸುತ್ತಿದ್ದಾರೆ ಮತ್ತು "ವಿಕ್ಟೋರಿಯಾದಲ್ಲಿ ಇದು ಸಂಭವಿಸುತ್ತದೆ ಎಂದು ನಾನು ಎಂದಿಗೂ ನಿರೀಕ್ಷಿಸಿರಲಿಲ್ಲ," ಎಂದು ಆಕ್ರೋಶ ವ್ಯಕ್ತಪಡಿಸಿದರು.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications