ISWA: ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರೊಂದಿಗೆ ಸಚಿವ ಪ್ರಲ್ಹಾದ್ ಜೋಶಿ ನಿಯೋಗ ಭೇಟಿ
ಪರ್ತ್: ಇಂಡಿಯನ್ ಸೊಸೈಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯಾ (ISWA) ಆಯೋಜಿಸಿದ್ದ ಸಭೆಯಲ್ಲಿ ಇದೇ ಮೊದಲ ಬಾರಿಗೆ ಭಾರತ ಸರ್ಕಾರದ ಸಚಿವರ ನೇತೃತ್ವದ ನಿಯೋಗ ಅನಿವಾಸಿ ಭಾರತೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ.
ISWA ಕಮ್ಯೂನಿಟಿ ಸೆಂಟರ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ ಪ್ರಮುಖ ಜನಪ್ರತಿನಿಧಿಗಳೊಂದಿಗೆ ಅನಿವಾಸಿ ಭಾರತೀಯರು ಹಾಜರಿದ್ದರು.
ಆಸ್ಟ್ರೇಲಿಯಾದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರ ನೇತೃತ್ವದಲ್ಲಿ ನಿಯೋಗವೊಂದು ಭೇಟಿ ನೀಡುತ್ತಿದೆ. ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ಸಚಿವರಾದ ಪ್ರಲ್ಹಾದ್ ಜೋಶಿಯವರ ನೇತೃತ್ವದಲ್ಲಿ ಈ ಭೇಟಿ ನಡೆದಿದೆ.

ಅನಿವಾಸಿ ಭಾರತೀಯರೊಂದಿಗಿನ ಸಭೆ ಅತ್ಯಂತ ಫಲಪ್ರದ ಮತ್ತು ಸಂಬಂಧ ವೃದ್ಧಿ ದೃಷ್ಟಿಯಲ್ಲಿ ಚೇತೋಹಾರಿಯಾಗಿತ್ತು ಎಂದು ಸಚಿವ ಜೋಶಿಯವರು ಟ್ವೀಟ್ ಮಾಡಿದ್ದಾರೆ.
Interacted with Indian Community, the meeting was organized by ISWA, at ISWA Community Centre. Deputy Premier @RogerCookMLA, MLAs Mr. Yaz Mubarakai, Dr. Jagdish Krishnan and Mr. Sam Lim also marked their august presence at the event. pic.twitter.com/USpJKwETBN
— Pralhad Joshi (@JoshiPralhad) July 3, 2022
ವೆಸ್ಟರ್ನ್ ಆಸ್ಟ್ರೇಲಿಯಾದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಅನಿವಾಸಿ ಭಾರತೀಯರಿದ್ದು ISWA ಒಂದು ಪ್ರಬಲ ಸಂಘಟನೆಯಾಗಿ ಬೆಳೆದಿದೆ. ಈ ನಿಟ್ಟಿನಲ್ಲಿ ಇಲ್ಲಿನ ಭೇಟಿ ನಮ್ಮ ಸಹೋದರ ಸಹೋದರಿಯರನ್ನು ನಮ್ಮದೇ ಮನೆಯಲ್ಲಿ ಭೇಟಿ ಮಾಡಿ, ನಮ್ಮದೇ ಮನೆಗೆ ಬಂದ ರೀತಿ ಭಾಸವಾಗುತ್ತಿದೆ ಎಂದು ಜೋಶಿ ಅವರು ಹೇಳಿದ್ದಾರೆ.

ನಿಯೋಗ ಭೇಟಿ ವೇಳೆ ಪ್ರಸ್ತುತಪಡಿಸಿದ ಅದ್ಭುತ ಸಾಂಸ್ಕೃತಿಕ ಕಾರ್ಯಕ್ರಮಗಳು, ಸ್ವಾದಿಷ್ಟ ಆಹಾರ ಹಾಗೂ ಆತ್ಮೀಯ ಸ್ವಾಗತ ತುಂಬಾ ಸಂತೋಷ ನೀಡಿದೆ. ಭವಿಷ್ಯದಲ್ಲಿ ಇಂತಹ ಇನ್ನಷ್ಟು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾನು ಕಾತುರದಿಂದ ಕಾಯುತ್ತಿದ್ದೇನೆ ಎಂದು ಜೋಶಿ ಟ್ವೀಟ್ ನಲ್ಲಿ ಹೇಳಿದ್ದಾರೆ.
ISWA ಸಭೆಯಲ್ಲಿ ಪಶ್ಚಿಮ ಆಸ್ಟ್ರೇಲಿಯಾದ ಉಪ ಪ್ರಧಾನಿ ರೋಜರ್ ಕುಕ್, ಶಾಸಕರಾದ ಯಾಜ್ ಮುಬಾರಕೈ, ಡಾ. ಜಗದೀಶ್ ಕೃಷ್ಣನ್ ಮತ್ತು ಸ್ಯಾಮ್ ಲಿಮ್ ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications