ಅದಾನಿ ವಿರೋಧಿಸಿ ಸಿಡ್ನಿ ಕ್ರಿಕೆಟ್ ಮೈದಾನಕ್ಕಿಳಿದ ಪ್ರತಿಭಟನೆಗಾರರು
ಸಿಡ್ನಿ, ನ. 27: ಸುಮಾರು 268 ದಿನಗಳ ನಂತರ ಏಕದಿನ ಕ್ರಿಕೆಟ್ ಆಡಲು ಸಿಡ್ನಿ ಕ್ರಿಕೆಟ್ ಮೈದಾನಕ್ಕೆ ಟೀಂ ಇಂಡಿಯಾ ಇಳಿದಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಫಿಂಚ್ ಶತಕದ ನೆರವಿನಿಂದ ಬೃಹತ್ ಮೊತ್ತ ದಾಖಲಿಸುತ್ತಿದೆ...
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಯ ಮೊದಲ ಪಂದ್ಯದ ಸಂದರ್ಭದಲ್ಲಿ ಮೈದಾನದೊಳಗೆ ಇಬ್ಬರು ಪ್ರತಿಭಟನಾಕಾರರು ಧುಮುಕಿದ ಘಟನೆ ನಡೆದಿದೆ.
So the two protestors who ran on to the field had a message regarding the Adani project. And Sony cut the feed!
— Venkata Krishna B (@venkatatweets) November 27, 2020
ಆಸ್ಟ್ರೇಲಿಯಾದಲ್ಲಿ ಗಣಿಗಾರಿಕೆ ಯೋಜನೆಗೆ ಮುಂದಾಗಿರುವ ಭಾರತದ ಉದ್ಯಮಿ ಅದಾನಿ ಸಂಸ್ಥೆ ವಿರುದ್ಧ ಪ್ರತಿಭಟನಾ ನಿರತ ಪರಿಸರವಾದಿಗಳು ಎಂದು ತಿಳಿದು ಬಂದಿದೆ.

ಪ್ಲೇಕಾರ್ಡ್ ಹಿಡಿದುಕೊಂಡು ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ಮೈದಾನದೊಳಗೆ ಪ್ರವೇಶಿಸಿದ್ದಾರೆ. ಈ ದೃಶ್ಯ ಟಿವಿ ಲೈವ್ ನಲ್ಲಿ ಪ್ರಸಾರ ಮಾಡದೆ ಸೋನಿ ಸಂಸ್ಥೆ ಕಟ್ ಮಾಡಿದೆ. ಆದರೆ, ಸೋನಿ ಲೈವ್ ಅಪ್ಲಿಕೇಷನ್ ನಲ್ಲಿ ಪ್ರಸಾರವಾಗಿದ್ದು, ಟ್ವಿಟ್ಟರಲ್ಲಿ ಚರ್ಚೆ ಆರಂಭವಾಗಿದೆ.
ಸೀಮನ್ಸ್ ಮೇಲೂ ಒತ್ತಡ
ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನಲ್ಲಿ ಕಲ್ಲಿದ್ದಲು ಗಣಿ ನಿರ್ಮಿಸುವ ಯೋಜನೆಯನ್ನು ಸ್ಥಗಿತಗೊಳಿಸುವಂತೆ, ವಿಳಂಬ ಮಾಡುವಂತೆ ಅಥವಾ ಅಡ್ಡಿಪಡಿಸುವಂತೆ ಜರ್ಮನಿಯ ಪ್ರಮುಖ ಇಂಜಿನಿಯರಿಂಗ್ ಕಂಪನಿಯಾದ ಸಿಮನ್ಸ್ಗೆ ಪರಿಸರವಾದಿಗಳು ಮನವಿ ಮಾಡಿದ್ದಾರೆ.
Pitch Invaders ?? Really ? Wowo ! Hahaha#AUSvsIND #INDvAUS #Sydney #ODI pic.twitter.com/yrFzPhSAvx
— “Raj”ini Siva (@rajsviewfinder1) November 27, 2020
ಅದಾನಿ ಸಮೂಹದ ಕಾರ್ಮಿಚೆಲ್ ಗಣಿಗೆ 20 ದಶಲಕ್ಷ ಡಾಲರ್ ಮೌಲ್ಯದ ರೈಲ್ವೆ ಮೂಲಸೌಕರ್ಯವನ್ನು ಒದಗಿಸುವ ಗುತ್ತಿಗೆಯಿಂದ ಹಿಂದೆ ಸರಿಯುವಂತೆ ಅವರು ಸಿಮನ್ಸ್ಗೆ ಮನವಿ ಮಾಡಿದ್ದಾರೆ.
ಗಣಿಗಾರಿಕೆಯಿಂದ ವಾರ್ಷಿಕವಾಗಿ 8 ರಿಂದ 10 ಮಿಲಿಯನ್ ಟನ್ ಗಳಷ್ಟು ಕಲಿದ್ದಲು ಉತ್ಪಾದನೆ ಹಾಗೂ ಇದರಿಂದ ಹೊರ ಹೊಮ್ಮುವ ಇಂಗಾಲದ ಪ್ರಮಾಣದ ಬಗ್ಗೆ ಪರಿಸರ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸಿ, ಯುವ ಪರಿಸರವಾದಿ ಗ್ರೇಟಾ ಥನ್ ಬರ್ಗ್ ಕೂಡಾ ವ್ಯಾಪಕ ಪ್ರತಿರೋಧ ಒಡ್ಡುತ್ತಿದ್ದಾರೆ.
ಪ್ಲೇಕಾರ್ಡ್ ನಲ್ಲಿ ಏನಿದೆ?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 1 ಬಿಲಿಯನ್ ಆಸ್ಟ್ರೇಲಿಯನ್ ಡಾಲರ್ ಸಾಲವನ್ನು ಅದಾನಿಗೆ ನೀಡಬಾರದು ಎಂದು ಅದಾನಿ ವಿರೋಧಿ ಪರಿಸರವಾದಿಗಳು ಪ್ಲೇಕಾರ್ಡ್ ನಲ್ಲಿ NO 1 Billion Adani loan ಎಂದು ಬರೆಯಲಾಗಿದೆ. ಕ್ವೀನ್ಸ್ ಲ್ಯಾಂಡ್ ನಲ್ಲಿ 1500 ಕ್ಕೂ ಅಧಿಕ ಮಂದಿ ಈ ಯೋಜನೆಯಲ್ಲಿ ತೊಡಗಿದ್ದಾರೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications