ಅದಾನಿ ವಿರೋಧಿಸಿ ಸಿಡ್ನಿ ಕ್ರಿಕೆಟ್ ಮೈದಾನಕ್ಕಿಳಿದ ಪ್ರತಿಭಟನೆಗಾರರು
ಸಿಡ್ನಿ, ನ. 27: ಸುಮಾರು 268 ದಿನಗಳ ನಂತರ ಏಕದಿನ ಕ್ರಿಕೆಟ್ ಆಡಲು ಸಿಡ್ನಿ ಕ್ರಿಕೆಟ್ ಮೈದಾನಕ್ಕೆ ಟೀಂ ಇಂಡಿಯಾ ಇಳಿದಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆರಂಭಿಸಿದ್ದು, ಫಿಂಚ್ ಶತಕದ ನೆರವಿನಿಂದ ಬೃಹತ್ ಮೊತ್ತ ದಾಖಲಿಸುತ್ತಿದೆ...
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಯ ಮೊದಲ ಪಂದ್ಯದ ಸಂದರ್ಭದಲ್ಲಿ ಮೈದಾನದೊಳಗೆ ಇಬ್ಬರು ಪ್ರತಿಭಟನಾಕಾರರು ಧುಮುಕಿದ ಘಟನೆ ನಡೆದಿದೆ.
So the two protestors who ran on to the field had a message regarding the Adani project. And Sony cut the feed!
— Venkata Krishna B (@venkatatweets) November 27, 2020
ಆಸ್ಟ್ರೇಲಿಯಾದಲ್ಲಿ ಗಣಿಗಾರಿಕೆ ಯೋಜನೆಗೆ ಮುಂದಾಗಿರುವ ಭಾರತದ ಉದ್ಯಮಿ ಅದಾನಿ ಸಂಸ್ಥೆ ವಿರುದ್ಧ ಪ್ರತಿಭಟನಾ ನಿರತ ಪರಿಸರವಾದಿಗಳು ಎಂದು ತಿಳಿದು ಬಂದಿದೆ.

ಪ್ಲೇಕಾರ್ಡ್ ಹಿಡಿದುಕೊಂಡು ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ಮೈದಾನದೊಳಗೆ ಪ್ರವೇಶಿಸಿದ್ದಾರೆ. ಈ ದೃಶ್ಯ ಟಿವಿ ಲೈವ್ ನಲ್ಲಿ ಪ್ರಸಾರ ಮಾಡದೆ ಸೋನಿ ಸಂಸ್ಥೆ ಕಟ್ ಮಾಡಿದೆ. ಆದರೆ, ಸೋನಿ ಲೈವ್ ಅಪ್ಲಿಕೇಷನ್ ನಲ್ಲಿ ಪ್ರಸಾರವಾಗಿದ್ದು, ಟ್ವಿಟ್ಟರಲ್ಲಿ ಚರ್ಚೆ ಆರಂಭವಾಗಿದೆ.
ಸೀಮನ್ಸ್ ಮೇಲೂ ಒತ್ತಡ
ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನಲ್ಲಿ ಕಲ್ಲಿದ್ದಲು ಗಣಿ ನಿರ್ಮಿಸುವ ಯೋಜನೆಯನ್ನು ಸ್ಥಗಿತಗೊಳಿಸುವಂತೆ, ವಿಳಂಬ ಮಾಡುವಂತೆ ಅಥವಾ ಅಡ್ಡಿಪಡಿಸುವಂತೆ ಜರ್ಮನಿಯ ಪ್ರಮುಖ ಇಂಜಿನಿಯರಿಂಗ್ ಕಂಪನಿಯಾದ ಸಿಮನ್ಸ್ಗೆ ಪರಿಸರವಾದಿಗಳು ಮನವಿ ಮಾಡಿದ್ದಾರೆ.
Pitch Invaders ?? Really ? Wowo ! Hahaha#AUSvsIND #INDvAUS #Sydney #ODI pic.twitter.com/yrFzPhSAvx
— “Raj”ini Siva (@rajsviewfinder1) November 27, 2020
ಅದಾನಿ ಸಮೂಹದ ಕಾರ್ಮಿಚೆಲ್ ಗಣಿಗೆ 20 ದಶಲಕ್ಷ ಡಾಲರ್ ಮೌಲ್ಯದ ರೈಲ್ವೆ ಮೂಲಸೌಕರ್ಯವನ್ನು ಒದಗಿಸುವ ಗುತ್ತಿಗೆಯಿಂದ ಹಿಂದೆ ಸರಿಯುವಂತೆ ಅವರು ಸಿಮನ್ಸ್ಗೆ ಮನವಿ ಮಾಡಿದ್ದಾರೆ.
ಗಣಿಗಾರಿಕೆಯಿಂದ ವಾರ್ಷಿಕವಾಗಿ 8 ರಿಂದ 10 ಮಿಲಿಯನ್ ಟನ್ ಗಳಷ್ಟು ಕಲಿದ್ದಲು ಉತ್ಪಾದನೆ ಹಾಗೂ ಇದರಿಂದ ಹೊರ ಹೊಮ್ಮುವ ಇಂಗಾಲದ ಪ್ರಮಾಣದ ಬಗ್ಗೆ ಪರಿಸರ ಪ್ರೇಮಿಗಳು ಆಕ್ಷೇಪ ವ್ಯಕ್ತಪಡಿಸಿ, ಯುವ ಪರಿಸರವಾದಿ ಗ್ರೇಟಾ ಥನ್ ಬರ್ಗ್ ಕೂಡಾ ವ್ಯಾಪಕ ಪ್ರತಿರೋಧ ಒಡ್ಡುತ್ತಿದ್ದಾರೆ.
ಪ್ಲೇಕಾರ್ಡ್ ನಲ್ಲಿ ಏನಿದೆ?
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 1 ಬಿಲಿಯನ್ ಆಸ್ಟ್ರೇಲಿಯನ್ ಡಾಲರ್ ಸಾಲವನ್ನು ಅದಾನಿಗೆ ನೀಡಬಾರದು ಎಂದು ಅದಾನಿ ವಿರೋಧಿ ಪರಿಸರವಾದಿಗಳು ಪ್ಲೇಕಾರ್ಡ್ ನಲ್ಲಿ NO 1 Billion Adani loan ಎಂದು ಬರೆಯಲಾಗಿದೆ. ಕ್ವೀನ್ಸ್ ಲ್ಯಾಂಡ್ ನಲ್ಲಿ 1500 ಕ್ಕೂ ಅಧಿಕ ಮಂದಿ ಈ ಯೋಜನೆಯಲ್ಲಿ ತೊಡಗಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications