2022ರವರೆಗೆ ಆಸ್ಟ್ರೇಲಿಯಾಗೆ ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಅವಕಾಶವಿಲ್ಲ
ಕ್ಯಾನ್ಬೆರಾ, ಅಕ್ಟೋಬರ್ 05: ಮುಂದಿನ ವರ್ಷದವರೆಗೆ ಆಸ್ಟ್ರೇಲಿಯಾಗೆ ಪ್ರವೇಶಿಸಲು ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಅವಕಾಶವಿಲ್ಲ ಎಂದು ಅಲ್ಲಿನ ಸರ್ಕಾರ ಹೇಳಿದೆ. ಇಲ್ಲಿನ ವಲಸಿಗರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಪ್ರಧಾನಿ ಮಂಗಳವಾರ ಹೇಳಿದ್ದಾರೆ.
ಇಂದು ಆಸ್ಟ್ರೇಲಿಯಾವು ಕೊರೊನಾ ಲಸಿಕೆಯ ಮಾನದಂಡವನ್ನು ತಲುಪುವ ಸಾಧ್ಯತೆ ಇದೆ. 16 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಶೇ.80ರಷ್ಟು ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಪ್ರಧಾನಿ ಸ್ಕಾಟ್ ಮಾರಿಸನ್ ತಿಳಿಸಿದ್ದಾರೆ.
ಕೊರೊನಾ ನಿರ್ಬಂಧಗಳಿಂದಾಗಿ ಆಸ್ಟ್ರೇಲಿಯಾಗೆ ವಲಸೆ ಬರುವವರ ಸಂಖ್ಯೆ ಕಡಿಮೆಯಾಗಿದೆ. ಕೊರೊನಾ ಸೋಂಕು ಆಸ್ಟ್ರೇಲಿಯಾ ವಿಶ್ವವಿದ್ಯಾಲಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ. ಅದು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳು ಪಾವತಿಸುವ ಶುಲ್ಕದ ಮೇಲೆ ಅವಲಂಬಿತವಾಗಿದೆ. ಆಸ್ಟ್ರೇಲಿಯಾ ಗಡಿಯನ್ನು ತೆರೆದರೆ ಮಾತ್ರ ವಿದ್ಯಾರ್ಥಿಗಳು ಬರಲು ಸಾಧ್ಯ.

ಮುಂದಿನ ವರ್ಷದಿಂದ ಅಂತಾರಾಷ್ಟ್ರೀಯ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ. ಆಸ್ಟ್ರೇಲಿಯಾ ಈಗಾಗಲೇ ಫೈಜರ್, ಆಸ್ಟ್ರಾಜೆನೆಕಾ, ಮಾಡೆರ್ನಾ ಮತ್ತು ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಲಸಿಕೆಗಳನ್ನು ಮಾನ್ಯ ಮಾಡಿತ್ತು.
ಇದೀಗ ಕೊವಿಶೀಲ್ಡ್, ಕೊರೊನಾವ್ಯಾಕ್ಗಳು ಆ ಸಾಲಿಗೆ ಸೇರಿದಂತಾಗಿವೆ. ಕೊವಿಡ್ 19 ಸ್ಥಿತಿಗತಿಯಿಂದಾಗಿ ಅಂತಾರಾಷ್ಟ್ರೀಯ ಪ್ರಯಾಣ ಸ್ಥಗಿತಗೊಂಡಿದ್ದು ಗೊತ್ತೇ ಇದೆ. ಆಸ್ಟ್ರೇಲಿಯಾದ ಹಲವು ಪ್ರಜೆಗಳೂ ಕೂಡ ಭಾರತ ಸೇರಿ ಕೆಲವು ರಾಷ್ಟ್ರಗಳಲ್ಲೇ ಉಳಿದುಕೊಂಡಿದ್ದಾರೆ.
ಅಂಥವರು ತಾವು ಇದ್ದಲ್ಲೇ, ಆಯಾ ದೇಶಗಳ ಕೊವಿಡ್ 19 ಲಸಿಕೆ ಪಡೆಯುತ್ತಿದ್ದಾರೆ. ಅಂಥವರಿಗೆ ಆಸ್ಟ್ರೇಲಿಯಾ ಈಗ ಕೊವಿಶೀಲ್ಡ್ ಮತ್ತು ಕೊರೊನಾವ್ಯಾಕ್ ಲಸಿಕೆಗಳಿಗೂ ಮಾನ್ಯತೆ ನೀಡಿದ್ದರಿಂದ ಅನುಕೂಲವಾಗಲಿದೆ. ಭಾರತದಲ್ಲಿದ್ದು, ಕೊವಿಶೀಲ್ಡ್ ಲಸಿಕೆ ಪಡೆದವರು ಇದೀಗ ತಮ್ಮ ದೇಶಕ್ಕೆ ಹೋಗಬಹುದು.
ಹಾಗೇ, ಆಸ್ಟ್ರೇಲಿಯಾಕ್ಕೆ ಹೋಗುವ ಅಂತಾರಾಷ್ಟ್ರೀಯ ಪ್ರಯಾಣಿಕರು ತಾವು ಟಿಜಿಎ ಅನುಮೋದಿತ ಕೊರೊನಾ ಲಸಿಕೆಯನ್ನು ಪಡೆದಿದ್ದೇವೆ ಎಂಬುದಕ್ಕೆ ಸಾಕ್ಷಿಯನ್ನು ಆಡಳಿತಕ್ಕೆ ಒಪ್ಪಿಸಬೇಕಾಗುತ್ತದೆ. ಕೊವಿಡ್ 19 ಸರ್ಟಿಫಿಕೇಟ್ ಹೊಂದಿರಬೇಕಾಗುತ್ತದೆ ಎಂದು ಆಸ್ಟ್ರೇಲಿಯಾ ಹೈಕಮೀಷನ್ನ ವಕ್ತಾರರೊಬ್ಬರು ತಿಳಿಸಿದ್ದಾರೆ.
ಅಂದಹಾಗೆ, ಈಗ ಆಸ್ಟ್ರೇಲಿಯಾ ಕೊವಿಶೀಲ್ಡ್ ಲಸಿಕೆಯನ್ನು ಮಾನ್ಯ ಮಾಡಿರುವುದರಿಂದ ಆಸ್ಟ್ರೇಲಿಯಾಕ್ಕೆ ಹೋಗಲಿರುವ ಭಾರತದ ಪ್ರವಾಸಿಗರಿಗೆ ಮತ್ತು ಶಿಕ್ಷಣಕ್ಕಾಗಿ ಹೋಗಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಎಷ್ಟರಮಟ್ಟಿಗೆ ಅನುಕೂಲವಾಗಲಿದೆ ಎಂಬುದಿನ್ನೂ ಸ್ಪಷ್ಟವಾಗಿಲ್ಲ.
ಯಾಕೆಂದರೆ ಪ್ರಧಾನಿ ಸ್ಕಾಟ್ ಮಾರಿಸನ್ ಮಾತನಾಡುತ್ತ, ಇದೀಗ ಕೊವಿಶೀಲ್ಡ್ ಮತ್ತು ಕೊರೊನಾವ್ಯಾಕ್ ಲಸಿಕೆಗೆ ಮಾನ್ಯತೆ ನೀಡಿರುವುದು ಒಂದು ಮೈಲಿಗಲ್ಲಾಗಿದೆ. ಇದರಿಂದ ಬೇರೆ ರಾಷ್ಟ್ರಗಳಲ್ಲಿ ಸಿಲುಕಿರುವ ಆಸ್ಟ್ರೇಲಿಯನ್ನರು ಆದಷ್ಟು ಬೇಗನೇ ತಮ್ಮ ಕುಟುಂಬ ಸೇರಿಕೊಳ್ಳಲು ಸಹಾಯವಾಗುತ್ತದೆ ಎಂದು ತಿಳಿಸಿದ್ದಾರೆ.
ಭಾರತದ ಸೀರಂ ಇನ್ಸ್ಟಿಟ್ಯೂಟ್ನ ಕೊವಿಶೀಲ್ಡ್ ಕೊರೊನಾ ಲಸಿಕೆಯನ್ನು ಆಸ್ಟ್ರೇಲಿಯಾ ಮಾನ್ಯ ಮಾಡಿದೆ. ಆನ್ಲೈನ್ ಮೂಲಕ ಭಾರತೀಯ ಮಾಧ್ಯಮಗಳೊಂದಿಗೆ ಮಾತನಾಡಿದ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಈ ವಿಷಯವನ್ನು ದೃಢಪಡಿಸಿದ್ದಾರೆ.
ಆಸ್ಟ್ರೇಲಿಯಾ ಚಿಕಿತ್ಸಕ ಸರಕು ಆಡಳಿತ ಭಾರತದ ಕೊವಿಶೀಲ್ಡ್ ಕೊರೊನಾ ಲಸಿಕೆಗೆ ಮಾನ್ಯತೆ ನೀಡಿದೆ. ಆಸ್ಟ್ರೇಲಿಯಾಕ್ಕೆ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ಸೂಕ್ತ ಕೊರೊನಾ ಲಸಿಕೆ ಪಡೆದಿರಬೇಕು. ಇದೀಗ ಚೀನಾದ ಕೊರೊನಾವ್ಯಾಕ್ ಮತ್ತು ಭಾರತದ ಕೊವಿಶೀಲ್ಡ್ ಲಸಿಕೆಗಳನ್ನೂ ಮಾನ್ಯ ಮಾಡುವಂತೆ ಟಿಜಿಎ ಸಲಹೆ ನೀಡಿದೆ ಎಂದು ಮಾರಿಸನ್ ತಿಳಿಸಿದ್ದಾರೆ.
ಇದೀಗ ಆಸ್ಟ್ರೇಲಿಯಾ ಜನತೆಗೆ ಮತ್ತೆ ಕೊರೊನಾ ಸೋಂಕಿನ ಕುರಿತು ತಂಕ ಶುರುವಾಗಿದೆ. ಕೊರೊನಾ ದೈನಂದಿನ ಪ್ರರಕಣಗಳ ಸಂಖ್ಯೆ ಏರಿಕೆ ಹಿನ್ನೆಲೆಯಲ್ಲಿ ಲಸಿಕೆ ವಿತರಣೆಗೆ ಮತ್ತಷ್ಟು ವೇಗ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಕ್ಟೋರಿಯಾದಲ್ಲಿ ಇದುವರೆಗೆ ಶೇ.49ರಷ್ಟು ಜನರಿಗೆ ಲಸಿಕೆ ನೀಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.ವಿಕ್ಟೋರಿಯಾ ರಾಜ್ಯದಲ್ಲಿ ತಿಂಗಳ ಅಂತ್ಯದ ವೇಳೆಗೆ ಲಾಕ್ಡೌನ್ ನಿಯಮಗಳನ್ನು ಸಡಿಕಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಆಸ್ಟ್ರೇಲಿಯಾದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದ್ದ ಕಾರಣ ಜುಲೈ ತಿಂಗಳಲ್ಲಿ ಮೆಲ್ಬರ್ನ್ನಲ್ಲಿ ಲಾಕ್ಡೌನ್ ಜಾರಿಮಾಡಲಾಗಿತ್ತು. ಆಗ 31 ಸಾವಿರಕ್ಕೂ ಅಧಿಕ ಪ್ರಕರಣಗಳು ಒಂದೇ ದಿನದಲ್ಲಿ ವರದಿಯಾಗುತ್ತಿದ್ದವು, ಅದಕ್ಕೆ ಹೋಲಿಸಿದರೆ ಈಗ ಬಹುತೇಕ ಕಡಿಮೆಯಾಗಿದೆ.
-
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು -
Job Resignation: ಇರೋ ಕೆಲಸಕ್ಕೆ ರಾಜೀನಾಮೆ ಕೊಡುವ ಮೊದಲು ಕೇಳಿಕೊಳ್ಳಬೇಕಾದ 17 ಪ್ರಶ್ನೆಗಳಿವು -
KSRTC: ಕನಕಪುರ-ಬೆಂಗಳೂರು ಬಸ್ ಪ್ರಯಾಣಿಕರಿಗೆ ಶುಭ ಸುದ್ದಿ, 20 ವರ್ಷದ ಬಳಿಕ 4 ಬಸ್ ಸಂಚಾರ -
ಪತಿ ವಿಜಯ್ ದೇವರಕೊಂಡ ಜೊತೆ ಮೊದಲ ಬಾರಿಗೆ ತವರಿಗೆ ಬಂದ ರಶ್ಮಿಕಾ: ತಂದೆಯಿಂದ ಐಷಾರಾಮಿ ಬಂಗಲೆ ಉಡುಗೊರೆ












Click it and Unblock the Notifications