Get Updates
Get notified of breaking news, exclusive insights, and must-see stories!

T. Narasipur Elections: ತ್ರಿವೇಣಿ ಸಂಗಮದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಜಟಾಪಟಿ, ಯಾರ ಕೊರಳಿಗೆ ಗೆಲುವಿನ ಮಾಲೆ?

ಮೈಸೂರು, ಮಾರ್ಚ್ 27: ಕಾವೇರಿ, ಕಪಿಲಾ ಮತ್ತು ಸ್ಪಟಿಕ ಸರೋವರಗಳ ತ್ರಿವೇಣಿ ಸಂಗಮವಾಗಿರುವ ಟಿ.ನರಸೀಪುರ ಕ್ಷೇತ್ರ ಮೈಸೂರು ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು. ಮೂರು ನದಿಗಳ ಸಂಗಮ ಸ್ಥಳವಾದ್ದರಿದಲೇ ಈ ಕ್ಷೇತ್ರಕ್ಕೆ ತಿರುಮಕೂಡಲು ಎಂಬ ಹೆಸರು ಕೂಡ ಇದೆ. ತ್ರಿವೇಣಿ ಸಂಗಮದಲ್ಲಿರುವ ಅಗಸ್ತ್ಯೇಶ್ವರ ದೇವಾಲಯ ಹಾಗೂ ಗುಂಜಾ ನರಸಿಂಹಸ್ವಾಮಿ ದೇವಸ್ಥಾನ ಇಲ್ಲಿನ ಪ್ರಮುಖ ಪ್ರೇಕ್ಷಣಿಕ ಸ್ಥಳವಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಟಿ.ನರಸೀಪುರ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಸದ್ಯ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿರುವ ಜೆಡಿಎಸ್‌ಗೆ ಸೋಲುಣಿಸಲು ಕಾಂಗ್ರೆಸ್‌ ಭರ್ಜರಿ ತಯಾರಿ ಆರಂಭಿಸಿದ್ದರೆ, ಇತ್ತ ಬಿಜೆಪಿ ಕೂಡ ಕ್ಷೇತ್ರದಲ್ಲಿ ಮುನ್ನಲೆಗೆ ಬರುವ ಪ್ರಯತ್ನ ಮಾಡುತ್ತಿದೆ.

t narasipura map

ಟಿ.ನರಸೀಪುರ ಕ್ಷೇತ್ರದ ಪ್ರಸ್ತುತ ರಾಜಕರಣ

ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎಚ್.ಸಿ.ಮಹದೇವಪ್ಪ ಅವರು ಕಳೆದ ಬಾರಿಯ ಸೋಲಿನ ಆಘಾತದಿಂದ ಇನ್ನೂ ಹೊರ ಬಂದಂತೆ ಕಾಣುತ್ತಿಲ್ಲ. ಕಳೆದ ಚುನಾವಣೆಯ ಸೋಲಿನ ಬಳಿಕ ಪಕ್ಷ ಚಟುವಟಿಕೆಯಲ್ಲಿ ಅಷ್ಟೇನು ಕಾಣಿಸಿಕೊಳ್ಳದ ಎಚ್.ಸಿ.ಮಹದೇವಪ್ಪ ತಮ್ಮ ಪುತ್ರ ಸುನೀಲ್ ಬೋಸ್ ಅವರಿಗೆ ಕ್ಷೇತ್ರ ಬಿಟ್ಟುಕೊಡುವ ಯೋಜನೆಯಲ್ಲಿದ್ದರು. ಆದರೆ ಕಾಂಗ್ರೆಸ್‌ ಈಗಾಗಲೇ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ಟಿಕೆಟ್‌ ನೀಡಿದೆ.

ಎಚ್.ಸಿ.ಮಹದೇವಪ್ಪ ಚುನಾವಣೆಗೆ ಇನ್ನೇನು ತಿಂಗಳು ಇರುವಾಗ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದನ್ನು ಗಮನಿಸಿದರೆ ಮತ್ತೆ ತಿ.ನರಸೀಪುರದಲ್ಲಿ ಜೆಡಿಎಸ್‌ಅನ್ನು ಬದಿಗೆ ಸರಿಸಿ ಕಾಂಗ್ರೆಸ್‌ ಪಕ್ಷವನ್ನು ಪ್ರತಿಷ್ಠಾಪಿಸಲೇ ಬೇಕು ಎನ್ನುವ ಹಠಕ್ಕೆ ಬಿದ್ದಂತೆ ಕಾಣಿಸುತ್ತಿದೆ.

h c mahadevappa

ಜೆಡಿಎಸ್‌ನಲ್ಲಿ ಹಾಲಿ ಶಾಸಕ ಅಶ್ವಿನ್ ಕುಮಾರ್ ಅವರಿಗೆ ಟಿಕೆಟ್ ನೀಡಿರುವ ಕಾರಣ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಳೆದ ಚುನಾವಣೆಯ ಗೆಲುವಿನ ಬಳಿಕ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಸಾಧಿಸಿಕೊಂಡ ಅಶ್ವಿನ್ ಕುಮಾರ್ ಸದ್ಯ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಆರಂಭಿಸಿದ್ದಾರೆ. ಯಾವುದೇ ಕಾರಣಕ್ಕೂ ಕ್ಷೇತ್ರ ಕೈತಪ್ಪ ಬಾರದು ಎನ್ನುವ ಪ್ರಯತ್ನದಲ್ಲಿದ್ದಾರೆ.

ಇನ್ನು ಕಳೆದ ಚುನಾವಣೆಯನ್ನು ಗಮನಿಸಿದರೆ ಈ ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನದಲ್ಲಿದೆ. ಆದರೂ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿಯಿಂದ ಕಣಕ್ಕಿಳಿಯಲು ಮಾಜಿ ಶಾಸಕ ಎಲ್.ಎನ್. ಭಾರತಿ ಶಂಕರ್, ನಿಲಸೋಗೆಯ ಬಿಜೆಪಿ ಮುಖಂಡ ದಿ.ಪುಟ್ಟಬಸವಯ್ಯ ಸೋದರ ಸಂಬಂಧಿ ವೈದ್ಯ ಡಾ.ರೇವಣ್ಣ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಬೆಂಬಲಿತ ಕನಕಪುರ ಎಸ್.ಅರವಿಂದ, ಸಾಮ್ರಾಟ್ ಸುಂದರೇಶನ್ ಮತ್ತು ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಪುತ್ರಿ ಪ್ರತಿಮಾ ಪ್ರಸಾದ್ ಹೀಗೆ ಟಿ.ನರಸೀಪುರ ಕ್ಷೇತ್ರದಿಂದ ಬಿಜೆಪಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ.

jds

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಿಂದ ಆಮ್‌ ಆದ್ಮಿ ಪಕ್ಷದ ಅಭ್ಯರ್ಥಿ ಕೂಡ ಸ್ಪರ್ಧಿಸುತ್ತಿದ್ದು, ಸಿದ್ದರಾಜುಗೆ ಆಪ್‌ ಟಿಕೆಟ್‌ ನೀಡಲಾಗಿದೆ.

ಟಿ.ನರಸೀಪುರ ವಿಧಾನಸಭಾ ಚುನಾವಣಾ 2018ರ ಫಲಿತಾಂಶ

2018 ಚುನಾವಣೆಯಲ್ಲಿ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಎಂ. ಅಶ್ವಿನ್ ಕುಮಾರ್ ಸ್ಪರ್ಧಿಸಿದ್ದು, 83,929 ಮತಗಳನ್ನು ಪಡೆದಿದ್ದರು. ಇನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಎಚ್ ಸಿ ಮಹದೇವಪ್ಪ 55,451 ಮತಗಳನ್ನು ಪಡೆದು 28,478 ಮತಗಳ ಅಂತರದಲ್ಲಿ ಸೋಲು ಕಂಡಿದ್ದರು.

ಟಿ.ನರಸೀಪುರ ಕ್ಷೇತ್ರದ ಮತದಾರರ ವಿವರ

ಒಟ್ಟು ಮತದಾರರು - 1,98,434,

ಪುರುಷ ಮತದಾರರು - 98,830

ಮಹಿಳಾ ಮತದಾರರು - 99,591

T. Narasipur Karnataka Elections

ವರ್ಷ ಗೆದ್ದವರು ಮತಗಳು ಸೋತವರು ಮತಗಳು
2018 ಎಂ. ಅಶ್ವಿನ್ ಕುಮಾರ್ (ಜೆಡಿಎಸ್) 83,929 ಡಾ. ಎಚ್.ಸಿ. ಮಹದೇವಪ್ಪ(ಕಾಂಗ್ರೆಸ್) 55,451
2013 ಡಾ. ಎಚ್.ಸಿ. ಮಹದೇವಪ್ಪ(ಕಾಂಗ್ರೆಸ್) 53,219 ಎಂ.ಸಿ. ಸುದರ್ಶನ್ (ಜೆಡಿಎಸ್) 52,896
2008 ಡಾ. ಎಚ್.ಸಿ. ಮಹದೇವಪ್ಪ(ಕಾಂಗ್ರೆಸ್) 42,593 ಎಂ.ಸಿ. ಸುದರ್ಶನ್ (ಜೆಡಿಎಸ್) 28,869

ಜಾತಿವಾರು ವಿವರ

ಎಸ್ಸಿ- 53,205

ಎಸ್ಪಿ- 27,110

ಮುಸ್ಲಿಂ - 12,729 ಹಾಗೂ ಉಳಿದಂತೆ ಇತರ ಸಮುದಾಯದ ಮತಗಳಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+