ಕೇರಳ; 2001ರ ಬಳಿಕ ಹೆಚ್ಚು ಮಹಿಳಾ ಅಭ್ಯರ್ಥಿಗಳು ಆಯ್ಕೆ
ತಿರುವನಂತಪುರಂ, ಮೇ 04; ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಆಡಳಿತಾರೂಢ ಎಲ್ಡಿಎಫ್ 94 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಮತ್ತೊಮ್ಮೆ ಅಧಿಕಾರಕ್ಕೆ ಏರಲಿದೆ. ಈ ಮೂಲಕ ರಾಜ್ಯದಲ್ಲಿ ಹೊಸ ಇತಿಹಾಸ ನಿರ್ಮಾಣ ಮಾಡಿದೆ.
2001ರ ಬಳಿಕ ಇದೇ ಮೊದಲ ಬಾರಿಗೆ ಕೇರಳ ವಿಧಾನಸಭೆಯಲ್ಲಿ ಮಹಿಳಾ ಶಾಸಕಿಯರ ಸಂಖ್ಯೆ ಎರಡು ಅಂಕಿಗೆ ಬಂದಿದೆ. 140 ಸದಸ್ಯ ಬಲದ ವಿಧಾನಸಭೆಗೆ ಏಪ್ರಿಲ್ 6ರಂದು ನಡೆದ ಚುನಾವಣೆಯಲ್ಲಿ 11 ಶಾಸಕಿಯರು ಆಯ್ಕೆಯಾಗಿದ್ದಾರೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ 2021ರ ಚುನಾವಣೆಯಲ್ಲಿ 103 ಮಹಿಳಾ ಅಭ್ಯರ್ಥಿಗಳು ವಿವಿಧ ಪಕ್ಷಗಳಿಂದ ಕಣಕ್ಕಿಳಿದಿದ್ದರು. ಇವರಲ್ಲಿ 11 ಅಭ್ಯರ್ಥಿಗಳು ಜಯಗಳಿಸಿದ್ದಾರೆ.

1996ರಲ್ಲಿ ವಿಧಾನಸಭೆಯಲ್ಲಿ 13 ಮಹಿಳಾ ಶಾಸಕಿಯರು ಇದ್ದರು. 2016ರಲ್ಲಿ ಈ ಸಂಖ್ಯೆ 8ಕ್ಕೆ ಇಳಿಕೆಯಾಗಿತ್ತು. ಈ ಬಾರಿಯ ಚುನಾವಣೆಯಲ್ಲಿ ಎಲ್ಡಿಎಫ್ನ 10 ಮಹಿಳೆಯರು, ಯುಡಿಎಫ್ನಿಂದ ಒಬ್ಬರು ಆಯ್ಕೆಯಾಗಿದ್ದಾರೆ.
ರಾಜ್ಯದ ಆರೋಗ್ಯ ಸಚಿವೆಯಾದ ಕೆಕೆ ಶೈಲಜಾ ಕಣ್ಣೂರು ಜಿಲ್ಲೆಯ ಮಟ್ಟನ್ನೂರು ಕ್ಷೇತ್ರದಿಂದ ದಾಖಲೆಯ 60,963 ಮತಗಳ ಅಂತರದಿಂದ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ.
ವೀಣಾ ಜಾರ್ಜ್, ಸಿ. ಕೆ. ಆಶಾ ಮತ್ತು ಯು. ಪ್ರತಿಭಾ ಅವರು ಸಹ 2ನೇ ಬಾರಿ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದಾರೆ. ಕಾಂಗ್ರೆಸ್ನ ಪಿ. ಕೆ. ಜಯಲಕ್ಷ್ಮೀ, ಉಸ್ಮಾನ್, ಬಿಂದು ಕೃಷ್ಣಾ, ಬಿಜೆಪಿಯ ಶೋಭಾ ಸುರೇಂದ್ರನ್ ಸೋಲು ಕಂಡಿದ್ದಾರೆ.
ಎನ್ಡಿಎ ಮೈತ್ರಿಕೂಟ ಕೇರಳ ವಿಧಾನಸಭೆಗೆ ದಾಖಲೆಯ ಅಂದರೆ 20 ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಒಂದೂ ಸ್ಥಾನದಲ್ಲಿ ಗೆದ್ದಿಲ್ಲ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications