ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪತ್ರಕರ್ತನಿಗೆ ಕೊರೊನಾ ಬಂದ್ರೆ ಹಿರಿಯ ಅಧಿಕಾರಿಗಳಿಗೆ ಕ್ವಾರೆಂಟೈನ್!

|
Google Oneindia Kannada News

ತಿರುವನಂತಪುರಂ, ಏಪ್ರಿಲ್.30: ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಇನ್ನೇನು ಇಳಿಮುಖವಾಯಿತು ಎನ್ನುವಷ್ಟರಲ್ಲೇ ಕೇರಳದಲ್ಲಿ ಆತಂಕ ಹೆಚ್ಚಿದೆ. ಬುಧವಾರ ಪತ್ತೆಯಾದ 10 ಮಂದಿ ಸೋಂಕಿತರ ಪೈಕಿ ಒಬ್ಬ ಪತ್ರಕರ್ತ ಹಾಗೂ ಮೂವರು ವೈದ್ಯಕೀಯ ಸಿಬ್ಬಂದಿ ಸೇರಿದ್ದಾರೆ ಎಂದು ತಿಳಿದು ಬಂದಿದೆ.

Recommended Video

ಬಾಲಿವುಡ್ ದಂತಕಥೆ ರಿಷಿ ಕಪೂರ್ ಇನ್ನಿಲ್ಲ | Rishi Kapoor Filmibeat

ಕೇರಳದ ಕಾಸರಗೂಡಿನಲ್ಲಿ ಬುಧವಾರ ಟಿವಿ ಮಾಧ್ಯಮದ ಒಬ್ಬ ಪತ್ರಕರ್ತನಿಗೆ ನೊವೆಲ್ ಕೊರೊನಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಗುರುವಾರದಿಂದಲೇ ಕಾಸರಗೂಡು ಜಿಲ್ಲಾಧಿಕಾರಿ ಡಿ.ಸಜಿತ್ ಬಾಬು, ಐಜಿ ವಿಜಯ್ ಸಖಾರೆ ಮತ್ತು ಐಜಿ ಅಶೋಕ್ ಯಾದವ್ ಸ್ವಯಂ ದಿಗ್ಬಂಧನದಲ್ಲಿ ಇರಿಸಲಾಗಿದೆ.

ಈ 6 ಮಹಾನಗರಗಳಲ್ಲಿ ಕೊರೊನಾ ನಿಯಂತ್ರಿಸಿದರೆ ಭಾರತ ಗೆದ್ದಂತೆ!ಈ 6 ಮಹಾನಗರಗಳಲ್ಲಿ ಕೊರೊನಾ ನಿಯಂತ್ರಿಸಿದರೆ ಭಾರತ ಗೆದ್ದಂತೆ!

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕಾಸರಗೂಡು ಜಿಲ್ಲೆಯ ಹಿರಿಯ ಅಧಿಕಾರಿಗಳನ್ನು ಸ್ವಯಂ ದಿಗ್ಬಂಧನದಲ್ಲಿ ಇರಿಸಿರುವ ಬಗ್ಗೆ ಸ್ವತಃ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಹಿತಿ ನೀಡಿದ್ದಾರೆ.

3 Senior Officers Gone Into Self-Quarantine After A Journalist Tested COVID-19 Positive

ಮಾಧ್ಯಮದ ಮೊದಲ ವ್ಯಕ್ತಿಗೆ ಕೊರೊನಾ ಸೋಂಕು:

ಬುಧವಾರ ಕಾಸರಗೂಡಿನಲ್ಲಿ ಮೊದಲ ಬಾರಿಗೆ ಟಿವಿ ಮಾಧ್ಯಮದ ಪತ್ರಕರ್ತರೊಬ್ಬರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಸುದ್ದಿ ಸಂಗ್ರಹಕ್ಕಾಗಿ ಅಲೆದಾಡಿದ ಪತ್ರಕರ್ತನ ಬಗ್ಗೆ ಮುನ್ನೆಚ್ಚರಿಕೆ ವಹಿಸುವುದು, ಟ್ರಾವೆಲ್ ಹಿಸ್ಟರಿ ಸಂಗ್ರಹಿಸುವ ಬಗ್ಗೆ ಪಿಣರಾಯಿ ವಿಜಯನ್ ತಿಳಿಸಿದ್ದರು. ಇದರ ಬೆನ್ನಲ್ಲೇ ಗುರುವಾರ ಕಾಸರಗೂಡು ಜಿಲ್ಲಾಧಿಕಾರಿ ಡಿ.ಸಜಿತ್ ಬಾಬು, ಐಜಿ ವಿಜಯ್ ಸಖಾರೆ ಮತ್ತು ಐಜಿ ಅಶೋಕ್ ಯಾದವ್ ಸ್ವಯಂ ದಿಗ್ಬಂಧನದಲ್ಲಿ ಇರಿಸಲಾಗಿದೆ.

English summary
Kerala: 3 Senior Officers Gone Into Self-Quarantine After A Journalist Tested COVID-19 Positive.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X