ಚರ್ಚ್ ರಿಟ್ರೀಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 480 ಮಂದಿ ಮೇಲೆ ಪ್ರಕರಣ ದಾಖಲು
ತಿರುವನಂತಪುರಂ, ಮೇ 06: ಕೇರಳದ ಮುನ್ನಾರ್ನ ಚರ್ಚ್ ಒಂದರಲ್ಲಿ ಕೋವಿಡ್ ನಿಯಮ ಮೀರಿ ರಿಟ್ರೀಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 480 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಿಎಸ್ಐ ಕ್ರೈಸ್ಟ್ ಚರ್ಚ್ ನ ಪಾದ್ರಿಗಳು, ಸಿಬ್ಬಂದಿಗಳು, ಪದಾಧಿಕಾರಿಗಳು ಸೇರಿ 480 ಮಂದಿಯ ವಿರುದ್ಧ ಕೇಸ್ ದಾಖಲಾಗಿದೆ.
ಕೋವಿಡ್-19 ನಿಯಮಗಳನ್ನು ಉಲ್ಲಂಘನೆ ಮಾಡಿ ಕಳೆದ ತಿಂಗಳು ದಕ್ಷಿಣ ಕೇರಳದ ಮುನ್ನಾರ್ ನಲ್ಲಿರುವ ಚರ್ಚ್ ನಲ್ಲಿ ನಡೆದಿದ್ದ ರಿಟ್ರೀಟ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇಡುಕ್ಕಿ ಜಿಲ್ಲಾಧಿಕಾರಿ ಹೆಚ್ ದಿನೇಶನ್ , ಈ ಬಗ್ಗೆ ಮೇ.05 ರಂದು ಈ ಬಗ್ಗೆ ಮಾಹಿತಿ ಪಡೆದಿದ್ದಾರೆ. ದೇವಿಕುಲಮ್ ಉಪ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದರು. "ಚರ್ಚ್ ನಲ್ಲಿ ನಡೆದ ರಿಟ್ರಿಟ್ ಕಾರ್ಯಕ್ರಮ ಕೋವಿಡ್-19 ಶಿಷ್ಟಾಚಾರ (ನಿಯಮ)ಗಳನ್ನು ಉಲ್ಲಂಘನೆ ಮಾಡಲಾಗಿದೆ" ಎಂದು ವರದಿಯಲ್ಲಿ ತಿಳಿಸಲಾಗಿದೆ.
ಪಾದ್ರಿಗಳು ಹಾಗೂ ಪದಾಧಿಕಾರಿಗಳ ವಿರುದ್ಧ ಕೇರಳ ಎಪಿಡಮಿಕ್ ಡಿಸೀಸಸ್ ಆರ್ಡಿನೆನ್ಸ್, 2020 ರ ಪ್ರಕಾರ ಕೇಸ್ ದಾಖಲಿಸಲಾಗಿದೆ. ಈ ಕಾರ್ಯಕ್ರಮದ ಬಗ್ಗೆ ಪೊಲೀಸರಿಗೂ ಯಾವುದೇ ಮಾಹಿತಿ ಇರಲಿಲ್ಲ.
ಈ ಹಿನ್ನೆಲೆಯಲ್ಲಿ ಎಫ್ಐಆರ್ ಒಂದನ್ನು ದಾಖಲಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಡಿವೈಎಸ್ ಪಿ ಆರ್ ಸುರೇಶ್ ಹೇಳಿದ್ದಾರೆ. ಕಾರ್ಯಕ್ರಮ ಆಯೋಜಕರಿಗೂ ಕೋವಿಡ್-19 ಸೋಂಕು ತಗುಲಿದೆ.
ದೇವಿಕುಲಮ್ ತಹಶೀಲ್ದಾರ್ ಸಲ್ಲಿಸಿದ ಪ್ರಾಥಮಿಕ ವರದಿಯ ಆಧಾರದಲ್ಲಿ ಈ ಕೇಸ್ ದಾಖಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications