ನ.17ಕ್ಕೆ ಶಬರಿಮಲೆ ಯಾತ್ರೆ ಆರಂಭ; 10ರಿಂದ 50 ವರ್ಷದ 560 ಮಹಿಳೆಯರ ನೋಂದಣಿ
ತಿರುವನಂತಪುರಂ, ನವೆಂಬರ್ 9: ಇದೇ ತಿಂಗಳ 17ನೇ ತಾರೀಕು ಬಾಗಿಲು ತೆರೆಯುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕಾಗಿ 10ರಿಂದ 50 ವರ್ಷ ವಯೋಮಾನದ 560 ಮಹಿಳೆಯರು ಆನ್ ಲೈನ್ ಮೂಲಕ ನೋಂದಣಿ ಮಾಡಿಕೊಂಡಿದ್ದಾರೆ.
ಮೂರು ದಿನಗಳ ಹಿಂದಷ್ಟೇ ಕೇರಳ ಪೊಲೀಸರು ಪೋರ್ಟಲ್ ಆರಂಭಿಸಿದ್ದು, ಮೂರು ತಿಂಗಳ ಕಾಲ ನಡೆಯುವ ಪುಣ್ಯಕ್ಷೇತ್ರ ದರ್ಶನಕ್ಕೆ ಈ ಮೂಲಕವೇ ನಿಯಂತ್ರಣ ಮಾಡಲಾಗುತ್ತದೆ. 3.5 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು ಈ ವೆಬ್ ಸೈಟ್ ನಲ್ಲಿ ಹೆಸರು ನೋಂದಣಿ ಮಾಡಿದ್ದಾರೆ. ಆ ಪೈಕಿ 560 ಮಹಿಳೆಯರು 10ರಿಂದ 50 ವರ್ಷ ವಯೋಮಾನದವರು.
ದೇವಸ್ಥಾನವನ್ನು ನಿರ್ವಹಣೆ ಮಾಡುತ್ತಿರುವ ತಿರುವಾಂಕೂರ್ ದೇವಸ್ವಂ ಮಂಡಳಿ ಪ್ರಕಾರ, ಕಳೆದ ವರ್ಷ ಈ ರೀತಿಯ ನೋಂದಣಿಯ ಮೂಲಕ 16 ಲಕ್ಷ ಮಂದಿ ದರ್ಶನ ಮಾಡಿದ್ದಾರೆ. ಈ ರೀತಿ ವೈಯಕ್ತಿಕವಾಗಿ ನೋಂದಣಿ ಮಾಡಿದ ನಂತರ ಸರಕಾರ ನೀಡುವ ಗುರುತಿನ ಪತ್ರ ಮತ್ತಿತರ ದಾಖಲೆಗಳನ್ನು ನೀಡಬೇಕಾಗುತ್ತದೆ.

ಪಂಬಾದಲ್ಲಿ ಭಕ್ತರಿಗೆ ಚೀಟಿ ಕೊಡಲಾಗುತ್ತಿದೆ. ಅದರಲ್ಲಿ ದರ್ಶನದ ಸಮಯ ಮತ್ತಿತರ ವಿವರಗಳಿರುತ್ತವೆ. ಆನ್ ಲೈನ್ ನಲ್ಲಿ ನೋಂದಣಿ ಮಾಡುವ ಭಕ್ತರಿಗೆ ಪ್ರತ್ಯೇಕ ಸಾಲಿರುತ್ತದೆ. ಮತ್ತು ಈ ಆನ್ ಲೈನ್ ಸೇವೆ ಉಚಿತವಾಗಿರುತ್ತದೆ.
ಎಲ್ಲ ವಯಸ್ಸಿನ ಮಹಿಳೆಯರು ದೇಗುಲ ಪ್ರವೇಶ ಮಾಡಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ. ಆದರೆ ಪ್ರತಿಭಟನೆ-ಹಿಂಸಾಚಾರದ ಮೂಲಕ ತಡೆಯುತ್ತಿರುವುದರಿಂದ 10ರಿಂದ 50 ವರ್ಷ ವಯೋಮಾನದವರು ಈ ವರೆಗೆ ದೇಗುಲ ಪ್ರವೇಶ ಮಾಡಲು ಸಾಧ್ಯವಾಗಿಲ್ಲ.
ಸುಪ್ರೀಂ ಕೋರ್ಟ್ ಆದೇಶ ಸೆಪ್ಟೆಂಬರ್ ನಲ್ಲಿ ಬಂದಿದ್ದು, ಆ ನಂತರ ಎರಡು ಬಾರಿ ದೇಗುಲದ ಬಾಗಿಲು ತೆರೆಯಲಾಯಿತು. ಕನಿಷ್ಠ ಹದಿನೈದು ಮಹಿಳೆಯರು ದೇಗುಲ ಪ್ರವೇಶಿಸಲು ಮುಂದೆ ಬಂದಿದ್ದರು.
ಶಬರಿಮಲೆ ದೇಗುಲದ ವಾರ್ಷಿಕ ಕ್ಷೇತ್ರ ದರ್ಶನಕ್ಕೆ ಎಂಟು ದಿನಗಳಷ್ಟೇ ಬಾಕಿ ಇದೆ. ನವೆಂಬರ್ 13ರಂದು ಸುಪ್ರೀಂ ಕೋರ್ಟ್ ತೀರ್ಪು ಪರಿಶೀಲನಾ ಅರ್ಜಿ ಕೈಗೆತ್ತಿಕೊಳ್ಳಲಿದೆ. ದೇಗುಲ ಪ್ರವೇಶ ಎಂಬುದು ಭಾವನಾತ್ಮಕ ವಿಚಾರವಾಗಿದ್ದು, ರಾಜಕೀಯ ಪಕ್ಷಗಳ ಮುಖಂಡರು ಇದರ ಲಾಭ ಪಡೆಯಲು ಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಎಲ್ಲ ವಯಸ್ಸಿನ ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ಇನ್ನಷ್ಟು ಕಾಲಾವಕಾಶ ನೀಡಬಹುದು ಎಂಬುದು ಪೊಲೀಸರು ಸೇರಿದಂತೆ ಹಲವರ ಭರವಸೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications