ನಟಿ ಮೇಲಿನ ಲೈಂಗಿಕ ದೌರ್ಜನ್ಯ ಕೇಸ್: ನಟ ದಿಲೀಪ್ ಗೆ ಹಿನ್ನಡೆ
ತಿರುವನಂತಪುರಂ, ಡಿಸೆಂಬರ್ 19: ಕೇರಳ ಮೂಲದ ಬಹುಭಾಷಾ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ಜನಪ್ರಿಯ ನಟ ದಿಲೀಪ್ ಅವರಿಗೆ ಮತ್ತೆ ಹಿನ್ನಡೆಯಾಗಿದೆ. ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ದಿಲೀಪ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಕಳೆದ ಜೂನ್ ತಿಂಗಳಿನಲ್ಲೇ ಈ ಕುರಿತಂತೆ ಹೈಕೋರ್ಟಿನಲ್ಲಿ ದಿಲೀಪ್ ಅವರು ಅರ್ಜಿ ಹಾಕಿದ್ದರು. ಕೇರಳ ಪೊಲೀಸ್ ವಿಶೇಷ ತನಿಖಾ ತಂಡ ನಡೆಸಿರುವ ತನಿಖೆ ಬಗ್ಗೆ ಅಪಸ್ವರ ಎತ್ತಿರುವ ದಿಲೀಪ್, ನಿಷ್ಪಕ್ಷಪಾತ ತನಿಖೆಗೆ ಮನವಿ ಸಲ್ಲಿಸಿ, ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿದ್ದರು.
ಸುಮಾರು 1452 ಪುಟಗಳ ದೋಷರೋಪಣ ಪಟ್ಟಿಯಲ್ಲಿ 345 ಸಾಕ್ಷಿಗಳು, 164 ಹೇಳಿಕೆಗಳನ್ನು ದಾಖಲಿಸಲಾಗಿದೆ. ಒಟ್ಟು 12 ಮಂದಿ ಆರೋಪಿಗಳಿದ್ದು, ದಿಲೀಪ್ ಅವರು 8ನೇ ಆರೋಪಿಯಾಗಿದ್ದು, ದಿಲೀಪ್ ಅವರ ಮಾಜಿ ಪತ್ನಿ, ನಟಿ ಮಂಜು ವಾರಿಯರ್ ಅವರು ಈ ಪ್ರಕರಣದಲ್ಲಿ ಸಾಕ್ಷಿಯಾಗಿದ್ದಾರೆ.

ಫೆಬ್ರವರಿ 17ರಂದು ಎರ್ನಾಕುಲಂ ನಿಂದ ತ್ರಿಶೂರ್ ಮಾರ್ಗದಲ್ಲಿ ನಟಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 10ರಂದು ಕೇರಳ ಪೊಲೀಸರು, ಮಲೆಯಾಳಂ ನಟ ದಿಲೀಪ್ ನನ್ನು ಬಂಧಿಸಿ, ಆಳುವ ಉಪ ಕಾರಾಗೃಹದಲ್ಲಿರಿಸಲಾಗಿದೆ. ದಿಲೀಪ್ ಅವರ ಜಾಮೀನು ಅರ್ಜಿಯು ಅನೇಕ ಬಾರಿಗೆ ತಿರಸ್ಕೃತಗೊಂಡಿದೆ.
ನಟಿ ಅಪಹರಣ, ಲೈಂಗಿಕ ಕಿರುಕುಳದ ಸಂಚು ರೂಪಿಸಿದ್ದು, ಪಲ್ಸರ್ ಸುನಿ ಎಂಬಾತನನ್ನು ಬಳಸಿಕೊಂಡು ಯೋಜನೆಯನ್ನು ಕಾರ್ಯಗತಗೊಳಿಸಿದ ಆರೋಪ ನಟ ದಿಲೀಪ್ ಮೇಲಿದೆ. ಒಮ್ಮೆ ಮಾತ್ರ ಕುಟುಂಬದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಜೈಲಿನಿಂದ ದಿಲೀಪ್ ಹೊರಕ್ಕೆ ಬಂದಿದ್ದರು. ಸದ್ಯ ಷರತ್ತುಬದ್ಧ ಜಾಮೀನು ಪಡೆದಿರುವ ದಿಲೀಪ್ ಅವರು ದುಬೈಗೆ ತೆರಳಲು ಅನುಮತಿ ನೀಡಲಾಗಿತ್ತ. ದುಬೈನಲ್ಲಿ ತಮ್ಮ ಹೋಟೆಲ್ 'ದೆ ಪುಟ್ಟು' ಹೊಸ ಬ್ರ್ಯಾಂಚ್ ಆರಂಭಿಸಲು 6 ದಿನಗಳ ಮಟ್ಟಿಗೆ ದಿಲೀಪ್ ಗೆ ಅಂಗಮಲೆ ಜೆಎಫ್ ಸಿಎಂ ಕೋರ್ಟ್ ಅನುಮತಿ ನೀಡಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications