Breaking: ಕೇರಳದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆ; 300 ಹಂದಿಗಳನ್ನು ಕೊಲ್ಲಲು ನಿರ್ದೇಶನ
ವಯನಾಡ್, ಜುಲೈ 22: ಕೇರಳದಲ್ಲಿ ಮತ್ತೊಮ್ಮೆ ಆಫ್ರಿಕನ್ ಹಂದಿ ಜ್ವರ ಸುದ್ದಿ ಮಾಡಿದೆ. ರಾಜ್ಯದ ವಯನಾಡ್ ಜಿಲ್ಲೆಯ ಮಾನಂತವಾಡಿಯ ಎರಡು ತೋಟಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ಮಾಹಿತಿ ನೀಡಿದ್ದಾರೆ.
ಭೋಪಾಲ್ನಲ್ಲಿ ಇರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ನಲ್ಲಿ ಮಾದರಿಗಳ ಪರೀಕ್ಷೆಗೆ ರವಾನಿಸಲಾಗಿತ್ತು. ಈ ಮಾದರಿ ಪರೀಕ್ಷೆಯಲ್ಲಿ ವಯನಾಡ್ ಜಿಲ್ಲೆಯ ಎರಡು ಫಾರ್ಮ್ಗಳ ಹಂದಿಗಳಲ್ಲಿ ರೋಗ ದೃಢಪಟ್ಟಿದೆ.
ಫಾರ್ಮ್ ಒಂದರಲ್ಲಿ ಹಂದಿಗಳು ಸಾಮೂಹಿಕವಾಗಿ ಸಾವನ್ನಪ್ಪಿದ ಹಿನ್ನೆಲೆ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪಶುಸಂಗೋಪನಾ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ಈಗ ಪರೀಕ್ಷಾ ಫಲಿತಾಂಶದಲ್ಲಿ ಸೋಂಕು ದೃಢಪಟ್ಟಿದೆ. ಎರಡನೇ ಫಾರ್ಮ್ನ 300 ಹಂದಿಗಳನ್ನು ಕೊಲ್ಲಲು ನಿರ್ದೇಶನಗಳನ್ನು ನೀಡಲಾಗಿದೆ," ಎಂದು ಅಧಿಕಾರಿ ಹೇಳಿದರು.
ಕೇರಳದಲ್ಲಿ ಹಂದಿ ಜ್ವರ ಹರಡದಂತೆ ಮುನ್ನೆಚ್ಚರಿಕೆ ಕ್ರಮ: ಕೇರಳದಲ್ಲಿ ಹಂದಿ ಜ್ವರದ ರೋಗ ಹರಡದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬಿಹಾರ ಮತ್ತು ಕೆಲವು ಈಶಾನ್ಯ ರಾಜ್ಯಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಕೇಂದ್ರದ ಎಚ್ಚರಿಕೆ ನೀಡಿತ್ತು.
ಇದರ ನಂತರ ಕೇರಳದಲ್ಲಿ ಈ ತಿಂಗಳ ಆರಂಭದಲ್ಲಿ ಜೈವಿಕ-ಸುರಕ್ಷತಾ ಕ್ರಮಗಳನ್ನು ಬಿಗಿಗೊಳಲಾಗಿತ್ತು. ಏಕೆಂದರೆ ಆಫ್ರಿಕನ್ ಹಂದಿ ಜ್ವರವು ದೇಶೀಯ ಹಂದಿಗಳ ಮೇಲೆ ಪರಿಣಾಮ ಬೀರುವ ಅತ್ಯಂತ ಸಾಂಕ್ರಾಮಿಕ ಮತ್ತು ಮಾರಣಾಂತಿಕ ವೈರಲ್ ಕಾಯಿಲೆಯಾಗಿದೆ.
Recommended Video
-
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications