ಪಂಚ ರಾಜ್ಯಗಳ ಚುನಾವಣೆಯ ಹೊತ್ತಿನಲ್ಲಿ ಕಾಂಗ್ರೆಸ್ಸಿಗೆ ಭಾರೀ ಆಘಾತ
ಶತಮಾನಗಳ ಇತಿಹಾಸವಿರುವ ರಾಷ್ಟ್ರೀಯ ಪಕ್ಷವೊಂದು ದಿನದಿಂದ ದಿನಕ್ಕೆ ಸೊರಗುತ್ತಿರುವುದಕ್ಕೆ ಕಾರಣ ಏನು? ಪಕ್ಷದ ಬಲವೃದ್ದನೆಗೆ ಏನು ಕ್ರಮ ತೆಗೆದುಕೊಳ್ಳಬೇಕು ಎಂದು ಜಿ-23 ಎಂದು ಗುರುತಿಸಿಕೊಂಡಿರುವ ಕಾಂಗ್ರೆಸ್ಸಿನ ಹಿರಿಯ ನಾಯಕರು ಹೈಕಮಾಂಡ್ ಗೆ ಸಾರಿಸಾರಿ ಬುದ್ದಿ ಹೇಳಿದ್ದರು.
ಕೇರಳ ಸೇರಿದಂತೆ ಐದು ರಾಜ್ಯಗಳ ಅಸೆಂಬ್ಲಿ ಚುನಾವಣೆ ಇನ್ನೇನು ಕೆಲವು ದಿನಗಳಲ್ಲಿ ನಡೆಯಲಿದೆ. ಕಾಂಗ್ರೆಸ್ಸಿಗೆ ಗೆಲ್ಲಬಹುದು ಎನ್ನುವ ನಿರೀಕ್ಷೆ ಇರುವ ರಾಜ್ಯವೆಂದರೆ ಅದು ಕೇರಳ. ಯಾಕೆಂದರೆ, ಅಲ್ಲಿ ಒಂದು ಬಾರಿ ಯುಡಿಎಫ್ ಇನ್ನೊಂದು ಬಾರಿ ಎಲ್ ಡಿಎಫ್ ಅಧಿಕಾರಕ್ಕೆ ಬರುವುದು ವಾಡಿಕೆಯಂತೆ ನಡೆದುಕೊಂಡು ಬರುತ್ತಿದೆ.
ಕೇರಳದಲ್ಲಿ ಒಗ್ಗಟ್ಟಾಗಿ ಚುನಾವಣಾ ತಂತ್ರ ರೂಪಿಸಿ ಮತದಾರರ ಬಳಿ ಹೋದರೆ ಕಾಂಗ್ರೆಸ್ ಮೈತ್ರಿಕೂಟ ಮತ್ತೆ ಇಲ್ಲಿ ಅಧಿಕಾರಕ್ಕೇರುವ ಸಾಧ್ಯತೆಯಿಲ್ಲದಿಲ್ಲ. ಆದರೆ, ಸಿಕ್ಕ ಈ ಗೋಲ್ಡನ್ ಚಾನ್ಸ್ ಅನ್ನು ಕಾಂಗ್ರೆಸ್ ತಾನಾಗಿಯೇ ಹಾಳು ಮಾಡಿಕೊಳ್ಳುತ್ತಿದೆಯೇ ಎನ್ನುವ ಪ್ರಶ್ನೆ ಎದ್ದೇಳಲು ಹಲವು ಕಾರಣಗಳಿವೆ.
ಕೇರಳದಲ್ಲಿ ಮಾತ್ರವಲ್ಲ ಇಡೀ ದೇಶದಲ್ಲಿ ಕಾಂಗೆಸ್ಸಿಗೆ ಹಿನ್ನಡೆಯಾಗುತ್ತಿರುವುದಕ್ಕೆ ಕಾರಣ, ಆ ಪಕ್ಷದ ನಾಯಕತ್ವ. ಯಾರು ಪಕ್ಷವನ್ನು ಬಲಪಡಿಸಬೇಕೋ ಅವರ ವಿರುದ್ದವೇ ಹಲವು ಹಿರಿಯ ಮುಖಂಡರು ಅಪಸ್ವರನ್ನು ಎತ್ತುತ್ತಿರುವುದು.

ಸಿಂಧಿಯಾ ಅವರಂತಹ ಯುವನಾಯಕನಿಗೆ ಕಾಂಗ್ರೆಸ್ ಹೈಕಮಾಂಡ್ ಬೆಲೆಕೊಡಲಿಲ್ಲ
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಕಷ್ಟಪಟ್ಟು ಅಧಿಕಾರಕ್ಕೆ ಬಂತು. ಆದರೆ, ಅಲ್ಲಿ ದಿಗ್ವಿಜಯ್ ಸಿಂಗ್, ಕಮಲ್ ನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ಎನ್ನುವ ಬಣಗಳಿದ್ದವು. ಸಿಂಧಿಯಾ ಅವರಂತಹ ಯುವನಾಯಕನಿಗೆ ಕಾಂಗ್ರೆಸ್ ಹೈಕಮಾಂಡ್ ಬೆಲೆಕೊಡಲಿಲ್ಲ. ಇದರ ಫಲಿತಾಂಶ ಅಲ್ಲಿನ ಕಾಂಗ್ರೆಸ್ ಸರಕಾರ ಪತನಗೊಂಡಿದ್ದು ಒಂದು ಕಡೆಯಾದರೆ, ಸಿಂಧಿಯಾ ಅವರನ್ನು ಕಾಂಗ್ರೆಸ್ ಕಳೆದುಕೊಂಡಿತು. ಇದೇ ರೀತಿಯ ಬಣ ರಾಜಕೀಯ ಕೇರಳ ಕಾಂಗ್ರೆಸ್ಸಿನಲ್ಲೂ ನಡೆಯುತ್ತಿದೆ.

ಪಿ.ಸಿ.ಚಾಕೊ ರಾಜೀನಾಮೆ ಪಕ್ಷಕ್ಕೆ ಭಾರೀ ಹೊಡೆತ
ಕೇರಳದಲ್ಲಿ ಏಪ್ರಿಲ್ ಆರರಂದು ಒಂದೇ ಹಂತದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಇಲ್ಲಿ ಕಮ್ಯೂನಿಸ್ಟರಿಗೆ ಪೈಪೋಟಿ ನೀಡಲು ಶಕ್ತವಾಗಿರುವುದು ಕಾಂಗ್ರೆಸ್ ಮೈತ್ರಿಕೂಟ ಮಾತ್ರ. ಬಿಜೆಪಿ ಇಲ್ಲಿ ತನ್ನ ನೆಲೆಯನ್ನು ಭದ್ರಗೊಳಿಸುತ್ತಿದೆಯಾದರೂ, ಎರಡು ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವಷ್ಟು ಇನ್ನೂ ಶಕ್ತವಾಗಿಲ್ಲ. ಪರಿಸ್ಥಿತಿ ಹೀಗಿರುವಾಗ, ಕೇರಳ ಕಾಂಗ್ರೆಸ್ ಘಟಕದ ಅಧ್ಯಕ್ಷ ಪಿ.ಸಿ.ಚಾಕೊ ರಾಜೀನಾಮೆ ನೀಡಿರುವುದು ಪಕ್ಷಕ್ಕೆ ಭಾರೀ ಹೊಡೆತವನ್ನು ನೀಡಿದೆ.

ರಮೇಶ್ ಚಿನ್ನಿತ್ತಾಲ ಮತ್ತು ಉಮ್ಮನ್ ಚಾಂಡಿ ಬಣ
ಚಾಕೊ ಅವರಿಗೆ ಕಾರ್ಯಕರ್ತರ ವಲಯದಲ್ಲಿ ಅಷ್ಟೇನೂ ಹೆಸರಿಲ್ಲದಿದ್ದರೂ, ಅವರು ರಾಜೀನಾಮೆಗೆ ನೀಡಿರುವ ಕಾರಣ, ಪಕ್ಷದಲ್ಲಿನ ಗುಂಪುಗಾರಿಕೆ. ರಮೇಶ್ ಚಿನ್ನಿತ್ತಾಲ ಮತ್ತು ಉಮ್ಮನ್ ಚಾಂಡಿ ಬಣದಿಂದ ಪಕ್ಷಕ್ಕೆ ಮುಜುಗರವಾಗುತ್ತಿದೆ ಎಂದು ಹೇಳಿರುವುದು ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆಯೇ ಹೆಚ್ಚು. ರಾಜಕೀಯ ವಿಶ್ಲೇಷಕರು ಕೂಡಾ ಇದೇ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದಾರೆ.

ಚಾಕೊ ಹೇಳಿಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಸೀರಿಯಸ್ಸಾಗಿ ತೆಗೆದುಕೊಳ್ಳಲಿ
ಇದರ ಜೊತೆಗೆ, ಕಾಂಗ್ರೆಸ್ ಹೈಕಮಾಂಡ್ ಅನ್ನು ಚಾಕೊ ದೂರಿರುವುದು ಪಕ್ಷಕ್ಕಾಗುತ್ತಿರುವ ಹಿನ್ನಡೆ. ಆಂತರಿಕ ಶಿಸ್ತನ್ನು ಕಾಪಾಡಿಕೊಂಡು, ಜನರ ಮುಂದೆ ಹೋಗಿದ್ದಲ್ಲಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಬಹುದು ಎನ್ನುವ ಲೆಕ್ಕಾಚಾರದ ನಡುವೆ, ಸದ್ಯದ ಈ ಬೆಳವಣಿಗೆ ಕಾಂಗ್ರೆಸ್ಸಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ. ಚಾಕೊ ಅವರ ಹೇಳಿಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಇನ್ನಾದರೂ ಸೀರಿಯಸ್ಸಾಗಿ ತೆಗೆದುಕೊಂಡರೆ, ಕೇರಳದಲ್ಲಿ ಗೆಲ್ಲುವ ಆಶಾಭಾವನೆಯನ್ನು ಕಾಂಗ್ರೆಸ್ ಉಳಿಸಿಕೊಳ್ಳಬಹುದು ಎನ್ನುವುದು ಕಾರ್ಯಕರ್ತರ ವಲಯದಲ್ಲಿ ಕೇಳಿ ಬರುತ್ತಿರುವ ಮಾತು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications