ಕಸಗುಡಿಸುತ್ತಿದ್ದಾಕೆ ಈಗ ಅದೇ ಪಂಚಾಯಿತಿಯಲ್ಲಿ ಅಧ್ಯಕ್ಷೆ!
ತಿರುವನಂತಪುರಂ, ಜನವರಿ 2: ಸುಮಾರು ಹತ್ತು ವರ್ಷಗಳಿಂದ ದೂಳು ಹಿಡಿದ ಪಂಚಾಯಿತಿಯ ನೆಲ ಮತ್ತು ಕುರ್ಚಿ ಮೇಜುಗಳನ್ನು ಗುಡಿಸಿ ಸ್ವಚ್ಛಗೊಳಿಸುತ್ತಿದ್ದ ಮಹಿಳೆ ಈಗ ಅದೇ ಪಂಚಾಯಿತಿ ಕಚೇರಿಯ ಅಧ್ಯಕ್ಷರ ಸೀಟಿನ ಮೇಲೆ ಕುಳಿತಿದ್ದಾರೆ. ಅಚ್ಚರಿ ಎನಿಸಿದರೂ ನಿಜ. ದಕ್ಷಿಣ ಕೇರಳದ ಕೊಲ್ಲಂ ಜಿಲ್ಲೆಯಲ್ಲಿನ ಪಟ್ಟಣಪುರಂ ಎಂಬಲ್ಲಿ 46 ವರ್ಷದ ಎ. ಆನಂದವಲ್ಲಿ ಬ್ಲಾಕ್ ಪಂಚಾಯತ್ನ ಅಧ್ಯಕ್ಷೆ ಸ್ಥಾನಕ್ಕೆ ಇತ್ತೀಚೆಗೆ ಆಯ್ಕೆಯಾಗಿದ್ದಾರೆ. ಇದೇ ಕಚೇರಿಯಲ್ಲಿ ಅವರು ಅರೆಕಾಲಿಕ ಸ್ವಚ್ಛತಾ ಕೆಲಸಗಾರರಾಗಿ ದುಡಿಯುತ್ತಿದ್ದರು.
ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸಿಪಿಐಎಂ ಟಿಕೆಟ್ನಿಂದ ಸ್ಪರ್ಧಿಸಿದ್ದ ಆನಂದವಲ್ಲಿ ಅವರು ಕಳೆದ ಬುಧವಾರ ಬ್ಲಾಕ್ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಈ ದಲಿತ ಮಹಿಳೆ ಸುಮಾರು ಒಂದು ದಶಕದಿಂದ ಇಲ್ಲಿ ಕಸಗುಡಿಸಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಿದ್ದರು. ಆದರೆ ಈ ಬಾರಿ ಅವರ ಅದೃಷ್ಟ ಬದಲಾಗಿದೆ.
'ನನ್ನ ಪಕ್ಷ ಮಾತ್ರವೇ ಈ ರೀತಿಯ ಕೆಲಸಗಳನ್ನು ಮಾಡಲು ಸಾಧ್ಯ. ಅದಕ್ಕಾಗಿ ನಾನು ಆಭಾರಿಯಾಗಿದ್ದೇನೆ' ಎಂದು ಬ್ಲಾಕ್ ಅಧ್ಯಕ್ಷೆಯಾಗಿ ಕುರ್ಚಿಯ ಮೇಲೆ ಕುಳಿತ ಬಳಿಕ ಆನಂದಬಾಷ್ಪದೊಂದಿಗೆ ಹೇಳಿದರು.

ಮಾರ್ಕ್ಸ್ವಾದಿ ಬೆಂಬಲಿಗರ ಕುಟುಂಬದಿಂದ ಬಂದ ಆನಂದವಲ್ಲಿ ಅವರು ಹೆಚ್ಚು ಕಲಿತವರಲ್ಲ. ಅವರ ಗಂಡ ವೃತ್ತಿಯಿಂದ ಪೈಂಟರ್. ಜತೆಗೆ ಸಕ್ರಿಯ ಸಿಪಿಐಎಂ ಕಾರ್ಯಕರ್ತ. 2011ರಲ್ಲಿ ಅರೆಕಾಲಿಕ ಕೆಲಸಗಾರ್ತಿಯಾಗಿ ಮಾಸಿಕ 2,000 ರೂ.ಗೆ ಕೆಲಸಕ್ಕೆ ಸೇರಿದ್ದರು. ಈಗ ಅವರಿಗೆ 6,000 ಮಾಸಿಕ ವೇತನ. ಜತೆಗೆ ತಮ್ಮ ಹಳೆಯ ಅರೆಕಾಲಿಕ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications