11.7 ಕೋಟಿ ರೂ ಪಾವತಿ ಸಾಧ್ಯವಿಲ್ಲ ಎಂದ ಪದ್ಮನಾಭಸ್ವಾಮಿ ದೇಗುಲ ಸಮಿತಿ
ನವದೆಹಲಿ, ಫೆಬ್ರುವರಿ 12: ಕೊರೊನಾ ಸೋಂಕಿನ ಕಾರಣದಿಂದಾಗಿ ಭದ್ರತೆ ಹಾಗೂ ನಿರ್ವಹಣಾ ಸಂಬಂಧಿ ವೆಚ್ಚವಾಗಿ ರಾಜ್ಯ ಸರ್ಕಾರಕ್ಕೆ ನೀಡಬೇಕಿದ್ದ 11.7 ಕೋಟಿ ರೂಪಾಯಿಯನ್ನು ನೀಡಲು ಸಾಧ್ಯವಾಗುತ್ತಿಲ್ಲ ಎಂದು ಕೇರಳದ ಪ್ರಸಿದ್ಧ ಐತಿಹಾಸಿಕ ಅನಂತ ಪದ್ಮನಾಭಸ್ವಾಮಿ ದೇಗುಲದ ತಾತ್ಕಾಲಿಕ ಆಡಳಿತ ಸಮಿತಿ ಸುಪ್ರೀಂ ಕೋರ್ಟ್ಗೆ ಶುಕ್ರವಾರ ತಿಳಿಸಿದೆ.
ಕಳೆದ ವರ್ಷ ಜುಲೈನಲ್ಲಿ ದೇವಸ್ಥಾನದ ನಿರ್ವಹಣೆಗೆ ನ್ಯಾಯಾಲಯ ತಾತ್ಕಾಲಿಕ ಸಮಿತಿ ರಚಿಸಿ, ತಿರುವಾಂಕೂರು ರಾಜ ಮನೆತನದವರು ನಿರ್ವಹಣಾ ವ್ಯವಸ್ಥೆ ಮಾಡುವವರೆಗೂ ಸಮಿತಿ ಮುಂದುವರೆಯುವುದಾಗಿ ತಿಳಿಸಿತ್ತು.
ಕೊರೊನಾ ಸೋಂಕಿನ ಕಾರಣದಿಂದಾಗಿ ದೇವಸ್ಥಾನಕ್ಕೆ ದೇಣಿಗೆ ಬಂದಿಲ್ಲ ಎಂದು ಸಮಿತಿ ತಿಳಿಸಿದ್ದು, ಸರ್ಕಾರಕ್ಕೆ ಹಣ ಮರುಪಾವತಿಗೆ ಇನ್ನಷ್ಟು ಕಾಲಾವಕಾಶ ಕೇಳಿದೆ.

ಈ ಬಾರಿ ಯಾವುದೇ ಆದೇಶ ನೀಡುವುದಿಲ್ಲ. ಕೇರಳ ಸರ್ಕಾರ ಈ ಮನವಿ ಪರಿಗಣಿಸಲಿ ಎಂದು ನ್ಯಾಯಾಲಯ ಹೇಳಿದೆ. ದೇವಸ್ಥಾನದ ಹಣಕಾಸು ಪರಿಶೀಲನೆಯು ಸೆಪ್ಟೆಂಬರ್ ನಲ್ಲಿ ನಡೆಯಲಿ ಎಂದು ತಿಳಿಸಿದೆ.
ಕೇರಳದ ಐತಿಹಾಸಿಕ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನ, ನೆಲಮಾಳಿಗೆ ಸಂಪತ್ತು, ದೇಗುಲದ ಆಸ್ತಿ ಹಕ್ಕು ಇಡೀ ದೇಶದ ಗಮನ ಸೆಳೆದ ಪ್ರಕರಣ. ಕಳೆದ ವರ್ಷ ಜುಲೈನಲ್ಲಿ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಜಸ್ಟೀಸ್ ಯು.ಯು ಲಲಿತ್ ಹಾಗೂ ಇಂದು ಮಲ್ಹೋತ್ರ ಅವರನ್ನೊಳಗೊಂಡ ನ್ಯಾಯಪೀಠ ಅನಂತ ಪದ್ಮನಾಭಸ್ವಾಮಿ ದೇಗುಲ ತಿರುವಾಂಕೂರು ರಾಜ ಮನೆತನದ ಸುಪರ್ದಿಗೆ ಸೇರಿದ್ದಾಗಿದೆ ಎಂದು ತೀರ್ಪು ನೀಡಿತ್ತು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications