ತಿರುವನಂತಪುರಂ: ಸಂವಿಧಾನ ವಿರೋಧಿ ಹೇಳಿಕೆ- ಸಚಿವ ಸಾಜಿ ಚೆರಿಯನ್ ರಾಜೀನಾಮೆ
ತಿರುವನಂತಪುರಂ ಜುಲೈ 6: ಭಾರತ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದ ಸಚಿವ ಸಾಜಿ ಚೆರಿಯನ್ ರಾಜೀನಾಮೆ ನೀಡಿದ್ದಾರೆ. ಕೇರಳದ ಮೀನುಗಾರಿಕೆ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಸಚಿವ ಸಾಜಿ ಚೆರಿಯನ್ ರಾಜ್ಯ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ವರದಿಗಳ ಪ್ರಕಾರ, ಸಿಪಿಎಂ ಹಿರಿಯ ನಾಯಕರ ನಿರ್ದೇಶನದಂತೆ ಇಂದು ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಸಾಜಿ ಚೆರಿಯನ್ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ಕುತೂಹಲಕಾರಿ ಅಂದರೆ ಪಿಣರಾಯಿ ವಿಜಯನ್ ಸರ್ಕಾರಕ್ಕೆ ರಾಜೀನಾಮೆ ನೀಡಿದ ಮೊದಲ ಸಚಿವರು.
ವರದಿಗಳ ಪ್ರಕಾರ, ಸಾಜಿ ಚೆರಿಯನ್ ಅವರ ರಾಜೀನಾಮೆಯಲ್ಲಿ ಸಿಪಿಎಂ ರಾಷ್ಟ್ರೀಯ ನಾಯಕತ್ವದ ನಿಲುವು ನಿರ್ಣಾಯಕವಾಗಿದೆ ಎಂದು ಉಲ್ಲೇಖಿಸಲಾಗಿದೆ. ಆದರೆ ಎಲ್ಡಿಎಫ್ನಲ್ಲಿರುವ ಎಲ್ಲಾ ಮಿತ್ರಪಕ್ಷಗಳೂ ಚೆರಿಯನ್ಗೆ ಬೆಂಬಲ ನೀಡಲು ನಿರಾಕರಿಸಿದವು ಎಂದು ತಿಳಿದುಬಂದಿದೆ.

ಅಧಿಕೃತವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಜಿ ಚೆರಿಯನ್ ಅವರು ''ಭಾರತೀಯ ಸಂವಿಧಾನದ ಬಗ್ಗೆ ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದ ಬಗ್ಗೆ ಅಸಹ್ಯ ವ್ಯಕ್ತಪಡಿಸಿದರು. ಪತ್ತನಂತಿಟ್ಟದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ತಮ್ಮ ಭಾಷಣದಲ್ಲಿ ಸಂವಿಧಾನವನ್ನು ಅವಮಾನಿಸಿಲ್ಲ'' ಎಂದು ಪುನರುಚ್ಚರಿಸಿದರು.
ಸಾಜಿ ಚೆರಿಯನ್ ಅವರ ವಿವಾದಾತ್ಮಕ ಭಾಷಣದ ಕುರಿತು ಮಾತೃಭೂಮಿ ಡಾಟ್ ಕಾಮ್ ಮಂಗಳವಾರ ಸುದ್ದಿ ಪ್ರಕಟಿಸಿತು. ಇದರ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಬಿಜೆಪಿ ಸಜಿ ಚೆರಿಯನ್ ಅವರನ್ನು ಟೀಕಿಸಲು ಮುಂದಾದವು. ಅವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಸ್ಥಳೀಯ ಟಿವಿ ಚಾನೆಲ್ಗಳು ಪ್ರಸಾರ ಮಾಡಿದ ದೃಶ್ಯಗಳಲ್ಲಿ, ಸಚಿವರು ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ದೇಶದ ಸಂವಿಧಾನವು ಶೋಷಣೆಯನ್ನು ಮನ್ನಿಸುತ್ತದೆ ಎಂದು ಹೇಳುವುದನ್ನು ಕಾಣಬಹುದು ಮತ್ತು ಅದರಲ್ಲಿ ದೇಶದ ಜನರನ್ನು "ಲೂಟಿ" ಮಾಡಲು ಸಹಾಯ ಮಾಡುವ ರೀತಿಯಲ್ಲಿ ಬರೆಯಲಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ LDF ಕ್ಯಾಬಿನೆಟ್ನಿಂದ ಅವರನ್ನು ತಕ್ಷಣವೇ ತೆಗೆದುಹಾಕಲು ಕೋರಿದ ವಿರೋಧ ಪಕ್ಷಗಳು ಒತ್ತಾಯಿಸಿವೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications