Get Updates
Get notified of breaking news, exclusive insights, and must-see stories!

ಕೇರಳದಲ್ಲಿ ಮತ್ತೆ ಹಕ್ಕಿ ಜ್ವರ ಪತ್ತೆ: ಪಕ್ಷಿಗಳನ್ನು ಕೊಲ್ಲಲು ಆದೇಶ

ತಿರುವನಂತಪುರಂ, ಡಿಸೆಂಬರ್ 10: ಕೇರಳದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿ ಜ್ವರ ದೃಢಪಟ್ಟಿದ್ದು, ಪೀಡಿತ ಭಾಗಗಳಲ್ಲಿ ಪಕ್ಷಿಗಳನ್ನು ಕೊಲ್ಲಲು ಆದೇಶಿಸಲಾಗಿದೆ. ಕೇರಳದ ಅಲ್ಲಪುಳದ ಕುಟ್ಟನಾಡ್ ಪ್ರದೇಶದಲ್ಲಿ ಹಕ್ಕಿ ಜ್ವರದ ಹೊಸ ಪ್ರಕರಣಗಳನ್ನು ಅಧಿಕಾರಿಗಳು ದೃಢಪಡಿಸಿದ್ದು ಪೀಡಿತ ಪ್ರದೇಶಗಳಲ್ಲಿ ಕೋಳಿಗಳು ಮತ್ತು ಬಾತುಕೋಳಿಗಳನ್ನು ಕೊಲ್ಲಲು ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ರಚಿಸಲಾಗಿದೆ.

ಅಲಪ್ಪುಳ ಜಿಲ್ಲೆಯ ಥಕಳಿ ಪಂಚಾಯತ್ ಕುಟ್ಟನಾಡ್ ಪ್ರದೇಶದಲ್ಲಿ ರೈತರೊಬ್ಬರು ಸಾಕಿದ್ದ ಸಾವಿರಾರು ಬಾತುಕೋಳಿಗಳು ಸತ್ತಿರುವುದು ಕಂಡು ಬಂದ ನಂತರ ಭೋಪಾಲ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್‌ಗೆ ಮಾದರಿಗಳನ್ನು ಕಳುಹಿಸಲಾಗಿತ್ತು. ಈ ವರದಿಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ಪೀಡಿತ ಪ್ರದೇಶಗಳಲ್ಲಿ ಬಾತುಕೋಳಿಗಳು ಮತ್ತು ಕೋಳಿಗಳನ್ನು ಕೊಲ್ಲಲು ಪಶುಸಂಗೋಪನೆಯಿಂದ ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ರಚಿಸಲಾಯಿತು. ಪ್ರಕರಣಗಳು ಪತ್ತೆಯಾದ ಪ್ರದೇಶದಿಂದ ಸುಮಾರು ಒಂದು ಕಿ.ಮೀ ವ್ಯಾಪ್ತಿಯಲ್ಲಿ ಇರುವ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು ಮತ್ತು ಇತರ ಪಕ್ಷಿಗಳನ್ನು ಕೊಲ್ಲಲು ಆದೇಶವನ್ನು ನೀಡಲಾಗಿದೆ.

ಸೋಂಕು ಮತ್ತಷ್ಟು ಹರಡುವುದನ್ನು ತಡೆಗಟ್ಟಲು ಹಕ್ಕಿಜ್ವರ ಕಂಡು ಬಂದ ಪ್ರದೇಶದಿಂದ 12 ಕಿ.ಮೀ. ದೂರದವರೆಗೆ ಬಾತುಕೋಳಿಗಳು, ಕೋಳಿಗಳು, ಮೊಟ್ಟೆಗಳು, ಗೊಬ್ಬರ ಮತ್ತು ಇತರ ಕೋಳಿಗಳ ಚಲನೆಯ ಮೇಲೆ ನಿರ್ಬಂಧವನ್ನು ಹೇರಲಾಗಿದೆ. ಕೇರಳದಲ್ಲಿ ಈ ವರ್ಷ ಎರಡನೇ ಬಾರಿಗೆ ಹಕ್ಕಿ ಜ್ವರ ದೃಢಪಟ್ಟಿದೆ.

ಹತ್ತಿರದ ಪ್ರದೇಶಗಳಿಗೆ ವೈರಸ್ ಹರಡುವುದನ್ನು ತಡೆಗಟ್ಟಲು ಥಕಳಿ ಗ್ರಾಮ ಪಂಚಾಯತ್‌ನ ವಾರ್ಡ್ ನಂ 10 ರ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮತ್ತು ಸುತ್ತಮುತ್ತಲಿನ ಎಲ್ಲಾ ಕೋಳಿಗಳು, ಬಾತುಕೋಳಿಗಳು ಮತ್ತು ಇತರ ಸಾಕು ಪಕ್ಷಿಗಳನ್ನು ಕೊಲ್ಲಲು ಆಡಳಿತವು ಆದೇಶಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪೀಡಿತ ಪ್ರದೇಶವನ್ನು ಕಂಟೈನ್‌ಮೆಂಟ್ ಝೋನ್ ಎಂದು ಘೋಷಿಸಲಾಗಿದ್ದು, ಆ ಪ್ರದೇಶದಲ್ಲಿ ವಾಹನ ಮತ್ತು ಜನರ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Bird fever discovery in Kerala: Orders to kill birds

ಅಲ್ಲದೆ ಪೀಡಿತ ಪ್ರದೇಶಗಳಲ್ಲಿ ಮೊಟ್ಟೆ, ಮಾಂಸ ಮತ್ತು ಬಾತುಕೋಳಿ, ಕೋಳಿ, ಕ್ವಿಲ್ ಮತ್ತು ಸಾಕುಪ್ರಾಣಿಗಳ ಗೊಬ್ಬರಗಳ ಬಳಕೆ ಮತ್ತು ಮಾರಾಟವನ್ನು ಜಿಲ್ಲಾಧಿಕಾರಿ ನಿಷೇಧಿಸಿದ್ದಾರೆ. ಚಂಪಕುಳಂ, ನೆಡುಮುಡಿ, ಮುಟ್ಟಾರ್, ವಿಯಪುರಂ, ಕರುವಟ್ಟ, ತ್ರಿಕ್ಕುನ್ನಪುಳ, ಥಕಳಿ, ಪುರಕ್ಕಾಡ್, ಅಂಬಲಪುಳ ದಕ್ಷಿಣ, ಅಂಬಲಪುಳ ಉತ್ತರ, ಎಡತ್ವ ಪಂಚಾಯತ್ ಮತ್ತು ಹರಿಪ್ಪಾಡ್ ಪುರಸಭೆ ವ್ಯಾಪ್ತಿಯಲ್ಲಿ ಈ ನಿರ್ಬಂಧ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Bird fever discovery in Kerala: Orders to kill birds

ಪಶುಸಂಗೋಪನಾ ಇಲಾಖೆಯಿಂದ ಥಕಳಿಯಲ್ಲಿ ಪಕ್ಷಿಗಳನ್ನು ಕೊಂದು ನಾಶಪಡಿಸಲು ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ರಚಿಸಲಾಗಿದೆ. ವಲಸೆ ಹಕ್ಕಿಗಳು ರೋಗಕ್ಕೆ ತುತ್ತಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು ಮೇಲ್ವಿಚಾರಣೆ ಮಾಡಲು ಮತ್ತು ಪರಿಶೀಲಿಸಲು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಅಧಿಕಾರಿಗಳ ಪ್ರಕಾರ, ಜಿಲ್ಲೆಯಲ್ಲಿ ಹಕ್ಕಿಜ್ವರ ತಡೆಗಟ್ಟುವ ಚಟುವಟಿಕೆಗಳ ಕುರಿತು ದೈನಂದಿನ ವರದಿ ಸಲ್ಲಿಸುವಂತೆ ಪಶುಸಂಗೋಪನಾ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಜನವರಿಯಲ್ಲಿ ಕೊಟ್ಟಾಯಂ ಮತ್ತು ಅಲಪ್ಪುಳ ಜಿಲ್ಲೆಗಳಲ್ಲಿ ಹಕ್ಕಿ ಜ್ವರ ಏಕಾಏಕಿ ಸಂಭವಿಸಿತ್ತು. ಕೇರಳ ಸರ್ಕಾರವು ಇದನ್ನು ಏಕಾಏಕಿ ರಾಜ್ಯ ವಿಪತ್ತು ಎಂದು ಘೋಷಿಸಿತು. ಜ್ವರ ಹರಡುವುದನ್ನು ತಡೆಯಲು ಅಧಿಕಾರಿಗಳು ಈ ಪ್ರದೇಶದಲ್ಲಿ ಸುಮಾರು 40,000 ಕೋಳಿ ಪಕ್ಷಿಗಳನ್ನು ಕೊಂದಿದ್ದಾರೆ. ಏಕಾಏಕಿ 12,000 ಕ್ಕೂ ಹೆಚ್ಚು ಪಕ್ಷಿಗಳು ಸಾವನ್ನಪ್ಪಿವೆ. ಈ ವೇಳೆ 10 ವೈದ್ಯರನ್ನೊಳಗೊಂಡ 18 ಸದಸ್ಯರ ಕ್ಷಿಪ್ರ ಪ್ರತಿಕ್ರಿಯೆ ತಂಡವನ್ನು ಅಲಪ್ಪುಳ ಜಿಲ್ಲೆಯಲ್ಲಿ ಕೊಲ್ಲುವ ಪ್ರಕ್ರಿಯೆಯನ್ನು ಕೈಗೊಳ್ಳಲು ನಿಯೋಜಿಸಲಾಗಿತ್ತು.

ವೈದ್ಯಕೀಯ ತಜ್ಞರ ಪ್ರಕಾರ, ಏವಿಯನ್ ಇನ್ಫ್ಲುಯೆನ್ಸ (H5N1) ಅಥವಾ H5N8 ಅನ್ನು ಸಾಮಾನ್ಯವಾಗಿ ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಆದರೂ ಅನೇಕ ಇತರ ತಳಿಗಳು ಪ್ರಚಲಿತವಾಗಿದೆ. ಇದು ಹಿಕ್ಕೆಗಳು, ಲಾಲಾರಸ ಮತ್ತು ಪಕ್ಷಿಗಳ ಸ್ರವಿಸುವಿಕೆಯ ಮೂಲಕ ಹರಡುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಕೇರಳದಲ್ಲಿ ವರದಿಯಾಗಿರುವ H5N8 ವೈರಸ್‌ನಿಂದ ಮನುಷ್ಯರಿಗೆ ಸೋಂಕು ತಗಲುವ ಸಾಧ್ಯತೆ ಕಡಿಮೆ. 2016 ರ ವರದಿಯಲ್ಲಿ WHO "ಇಲ್ಲಿಯವರೆಗೆ, ಇನ್ಫ್ಲುಯೆನ್ಸ A (H5N8) ಸೋಂಕಿನ ಯಾವುದೇ ಮಾನವ ಪ್ರಕರಣಗಳು ಪತ್ತೆಯಾಗಿಲ್ಲ" ಎಂದು ಹೇಳಿದೆ. ಜುಲೈನಲ್ಲಿ, ಹಕ್ಕಿ ಜ್ವರದಿಂದ ಭಾರತದಲ್ಲಿ ಮೊದಲ ಸಾವು ವರದಿಯಾಗಿದೆ. ಹರಿಯಾಣದ 11 ವರ್ಷದ ಬಾಲಕನಿಗೆ ಎಚ್5ಎನ್1 ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+