ಕೇರಳ ಸಿಲ್ವರ್ಲೈನ್ ಆಂದೋಲನದ ಹಿಂದೆ ಉಗ್ರಗಾಮಿ ಗುಂಪು: ಸಿಪಿಐ(ಎಂ) ಪಾಲಿಟ್ ಬ್ಯೂರೋ
ತಿರುವನಂತಪುರಂ, ಏಪ್ರಿಲ್ 22: "ಕಾಂಗ್ರೆಸ್, ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್, ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮತ್ತು ಮುಸ್ಲಿಂ ಉಗ್ರಗಾಮಿ ಗುಂಪುಗಳು ಜೊತೆಯಾಗಿ ಕೇರಳದಲ್ಲಿ ಸಿಲ್ವರ್ಲೈನ್ ವಿರೋಧಿ ಪ್ರತಿಭಟನೆ, ಆಂದೋಲನವನ್ನು ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಮುಸ್ಲಿಂ ಉಗ್ರಗಾಮಿ ಗುಂಪುಗಳು ಕೂಡಾ ಜೊತೆಯಾಗಿದೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯ ಎ. ವಿಜಯರಾಘವನ್ ಆರೋಪ ಮಾಡಿದ್ದಾರೆ.
ತಿರುವನಂತಪುರಂ ಪ್ರೆಸ್ ಕ್ಲಬ್ ಗುರುವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯ ಎ. ವಿಜಯರಾಘವನ್, "ರಾಜ್ಯದ ಅಭಿವೃದ್ಧಿಗೆ ಅಡ್ಡಿಪಡಿಸಲು ಮತ್ತು ಹಿಂಸಾತ್ಮಕ ಮಾರ್ಗಗಳ ಮೂಲಕ ಶಾಂತಿಯನ್ನು ಹಾಳುಮಾಡಲು ಅಪವಿತ್ರ ಸಂಬಂಧವನ್ನು ರಚಿಸಲಾಗಿದೆ," ಎಂದು ಕಾಂಗ್ರೆಸ್, ಬಿಜೆಪಿ, ಯುಡಿಐ ಹಾಗೂ ಕೆಲವು ಮುಸ್ಲಿಂ ಸಂಘಟನೆಗಳ ವಿರುದ್ಧ ಟೀಕೆ ಮಾಡಿದ್ದಾರೆ.
ಈ ವೇಳೆಯ ಪ್ರತಿಭಟನಾಕಾರರ ಮೇಲೆ ಪೋಲೀಸರ ದೌರ್ಜನ್ಯದ ವರದಿಗಳನ್ನು ನಿರಾಕರಿಸಿದ ಸಿಪಿಐ(ಎಂ) ಪಾಲಿಟ್ ಬ್ಯೂರೋ ಸದಸ್ಯ ಎ. ವಿಜಯರಾಘವನ್ ಸಂಘಟಿತ ಪ್ರತಿಭಟನೆಗಳ ಮುಖಾಂತರ ಕಾನೂನು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಕಾನೂನು ಪಾಲಕರು ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರ ಮೇಲೆ ಬಲವಂತವಾಗಿ ಕ್ರಮ ಕೈಗೊಳ್ಳುವುದನ್ನು ನಮ್ಮ ರಾಜ್ಯ ಸರ್ಕಾರ ಎಂದಿಗೂ ಕೂಡಾ ಒಪ್ಪುವುದಿಲ್ಲ ಎಂದು ಆರೋಪಿಸಿದರು.

ಸೆಮಿ ಹೈಸ್ಪೀಡ್ ರೈಲ್ವೇ ಕಾರಿಡಾರ್ ಯೋಜನೆ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಆರಂಭಿಸಿರುವ ಅಭಿಯಾನ ವೇಗ ಪಡೆಯುತ್ತಿದ್ದಂತೆ ವಿವಿಧ ವಲಯಗಳಲ್ಲಿ ಮೂಡಿರುವ ಆತಂಕಗಳು ಕಡಿಮೆಯಾಗಲಿವೆ ಎಂದು ಸಿಪಿಐ(ಎಂ) ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಎಲ್ಡಿಎಫ್ ಸಂಚಾಲಕ ಇ.ಪಿ. ಜಯರಾಜನ್ ಅವರ ಬಗ್ಗೆ ಪ್ರಸ್ತಾಪ ಮಾಡಿದ ಎ. ವಿಜಯರಾಘವನ್ ಯುಡಿಎಫ್ ಘಟಕದ ಬಗ್ಗೆ ಸಿಪಿಐ(ಎಂ) ನ ರಾಜಕೀಯ ನಿಲುವು ಬದಲಾಗದೆ ಉಳಿದಿದೆ ಎಂದು ತಿಳಿಸಿದರು.
ಜಹಾಂಗೀರ್ಪುರಿ ಹಿಂಸಾಚಾರದ ಬಗ್ಗೆ ಉಲ್ಲೇಖ
ದೆಹಲಿಯ ಹಿಂಸಾಚಾರ ಪೀಡಿತ ಜಹಾಂಗೀರ್ಪುರಿಯಲ್ಲಿ ಕೈಗೊಂಡಿರುವ ಕಾರ್ಯಾಚರಣೆಯನ್ನು ಖಂಡಿಸಿದ ಅವರು, ಹಲವಾರು ಕಟ್ಟಡಗಳನ್ನು ಬುಲ್ಡೋಜಿಂಗ್ ಮಾಡುವುದು ಅಂಚಿನಲ್ಲಿರುವ ವರ್ಗಗಳನ್ನು ಬಲಿಪಶುವನ್ನಾಗಿ ಮಾಡುವ ಗುರಿಯನ್ನು ಹೊಂದಿದೆ ಎಂದು ಆರೋಪಿಸಿದರು. ಇನ್ನು ವಿಜಯರಾಘವನ್ ಅವರು ಈ ವಿಚಾರದಲ್ಲಿ ಮೌನ ವಹಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
#WATCH | A clash broke out between Congress workers & police while the political party's members were protesting against the Silver Line project in Kerala's Thiruvananthapuram pic.twitter.com/p5hB0uSojY
— ANI (@ANI) April 21, 2022
ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರು, ಪೊಲೀಸರ ನಡುವೆ ಘರ್ಷಣೆ
ಕೇರಳದಲ್ಲಿ ಪುನರಾರಂಭಗೊಂಡ ಕೇರಳ ಸರ್ಕಾರದ ಮಹತ್ವಾಕಾಂಕ್ಷೆಯ ಸಿಲ್ವರ್ಲೈನ್ ರೈಲು ಕಾರಿಡಾರ್ ಯೋಜನೆಗೆ ಸರ್ವೆ ಕಲ್ಲುಗಳನ್ನು ಹಾಕುವ ವೇಳೆ ಸೋಮವಾರ ರಾಜಧಾನಿ ಜಿಲ್ಲೆಯ ಕಣಿಯಾಪುರಂ ಬಳಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಘರ್ಷಣೆ ಉಂಟಾಗಿದೆ. ಪ್ರತಿಭಟನೆ ತೀವ್ರಗೊಂಡಿದ್ದರಿಂದ ಅಧಿಕಾರಿಗಳು ತಾತ್ಕಾಲಿಕವಾಗಿ ಕಾರ್ಯಾಚರಣೆ ನಿಲ್ಲಿಸಿ ಸ್ಥಳದಿಂದ ತೆರಳಿದ್ದಾರೆ.
ಸರ್ವೆ ಕಲ್ಲು ಹಾಕಲು ಆಗಮಿಸಿದ ಅಧಿಕಾರಿಗಳನ್ನು ಪ್ರತಿಪಕ್ಷ ಕಾಂಗ್ರೆಸ್ ಕಾರ್ಯಕರ್ತರ ನೇತೃತ್ವದಲ್ಲಿ ಸ್ಥಳೀಯರ ಗುಂಪು ತಡೆದಿದೆ. ಅಧಿಕಾರಿಗಳನ್ನು ಕರೆದೊಯ್ದ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರಳುವಂತೆ ಹೇಳಿದಾಗ ಘರ್ಷಣೆ ಉಂಟಾಗಿದೆ. ಪ್ರತಿಭಟನಾಕಾರರು ಸ್ಥಳದಲ್ಲಿ ಜಮಾಯಿಸುವುದನ್ನು ಮುಂದುವರಿಸುತ್ತೇವೆ ಮತ್ತು ಅಧಿಕಾರಿಗಳು ಸರ್ವೆ ಕಲ್ಲುಗಳನ್ನು ಹಾಕಲು ಎಂದಿಗೂ ಅನುಮತಿಸುವುದಿಲ್ಲ ಎಂದು ಹೇಳಿದರು. ಹಾಗೆಯೇ ಪೊಲೀಸರು ಬೂಟಿನಿಂದ ತುಳಿದಿದ್ದಾರೆ. ಸ್ಥಳೀಯರಿಗೆ ಯಾವುದೇ ಮಾಹಿತಿ ನೀಡದೆಯೇ ಸರ್ವೆ ಕಲ್ಲು ಹಾಕಲು ಬಂದಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಆದರೆ ಪೊಲೀಸರು ಪ್ರತಿಭಟನಾಕಾರರ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಯಾವುದೇ ಪ್ರತಿಭಟನಾಕಾರರನ್ನು ಉದ್ದೇಶಪೂರ್ವಕವಾಗಿ ನಾವು ತಳಿಸಿಲ್ಲ. ಅಧಿಕಾರಿಗಳಿಗೆ ರಕ್ಷಣೆ ನೀಡಲು ಮಾತ್ರ ಪ್ರಯತ್ನ ಮಾಡಿದ್ದೇವೆ ಎಂದಿದ್ದಾರೆ. ಸುಮಾರು ಒಂದು ತಿಂಗಳ ಅಂತರದ ನಂತರ ಅಧಿಕಾರಿಗಳು ಸರ್ವೆ ಶಿಲಾನ್ಯಾಸ ಪ್ರಕ್ರಿಯೆಯನ್ನು ಪುನರಾರಂಭಿಸಿದ್ದಾರೆ. ಈ ಯೋಜನೆಯ ವಿರುದ್ಧ ಆರಂಭದಿಂದಲೂ ಕೇರಳದ ಹಲವಾರು ಭಾಗಗಳಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications