ಕೇರಳ ಸರ್ಕಾರ ಮೂಕಪ್ರೇಕ್ಷಕನಾಗಿದೆ; ಬಿಜೆಪಿ ಮುಖಂಡನ ಆಕ್ರೋಶ
ತಿರುವನಂತಪುರಂ, ಸೆಪ್ಟೆಂಬರ್ 6: ಕೇರಳದಲ್ಲಿ ಕೊರೊನಾ ಸೋಂಕು ಈ ಮಟ್ಟದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯ ಸರ್ಕಾರ ಮೂಕಪ್ರೇಕ್ಷಕನಾಗಿ ಉಳಿದಿದೆ ಎಂದು ರಾಜ್ಯ ಬಿಜೆಪಿ ಮುಖಂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ದಾಖಲಾಗುತ್ತಿರುವ ಅರ್ಧದಷ್ಟು ಕೊರೊನಾ ಪ್ರಕರಣಗಳು ಕೇರಳ ರಾಜ್ಯವೊಂದರಿಂದಲೇ ಪತ್ತೆಯಾಗಿವೆ. ಹೀಗಿದ್ದರೂ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಮೂಕಪ್ರೇಕ್ಷಕನಾಗಿ ನೋಡುತ್ತಾ ಇದೆ. ಜನರ ಹಿತಾಸಕ್ತಿಯನ್ನು ಕಾಪಾಡುತ್ತಿಲ್ಲ ಎಂದು ಬಿಜೆಪಿ ಮುಖಂಡ ಕುಮ್ಮನಂ ರಾಜಶೇಖರನ್ ಆಕ್ಷೇಪಣೆ ಮಾಡಿದ್ದಾರೆ.
'ಕೊರೊನಾ ಸೋಂಕಿನ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಈ ಸಮಯದಲ್ಲಿ ಸರ್ಕಾರ ಸುಮ್ಮನೆ ಉಳಿದುಕೊಂಡಿದೆ. ಕೇರಳದ್ದು ಅತಿ ಕರುಣಾಜನಕ ಪರಿಸ್ಥಿತಿ. ರಾಜ್ಯ ಸರ್ಕಾರ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ' ಎಂದು ದೂರಿದ್ದಾರೆ.

'ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಸೂಕ್ತ ನೆರವು ದೊರೆತಿದೆ. ಕೇಂದ್ರ ಸಾಕಷ್ಟು ಹಣವನ್ನು ಕೇರಳದಲ್ಲಿ ಕೊರೊನಾ ನಿರ್ವಹಣೆಗೆ ಬಿಡುಗಡೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಕೊರೊನಾದಿಂದ ಜನರನ್ನು ದೂರವುಳಿಸುವಲ್ಲಿ ಸೋತಿದೆ. ರಾಜ್ಯ ಸರ್ಕಾರ ನಿರ್ಲಕ್ಷ್ಯ ಧೋರಣೆ ವಹಿಸಿದೆ' ಎಂದು ಆಕ್ರೋಶಗೊಂಡಿದ್ದಾರೆ.
'ಇದೇ ಈ ರಾಜ್ಯದ ಸಮಸ್ಯೆ. ಇತರೆ ರಾಜ್ಯಗಳು ಕೊರೊನಾ ನಿಯಂತ್ರಣಕ್ಕೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಕೊರೊನಾ ನಿಯಂತ್ರಣದಲ್ಲಿ ಯಶಸ್ವಿಯಾಗಿವೆ. ಆದರೆ ಕೇರಳದಲ್ಲಿ ದಿನನಿತ್ಯ ಒಂದು ಅಥವಾ ಎರಡು ಶೇಕಡ ಪ್ರಮಾಣದಲ್ಲಿ ಸೋಂಕು ಏರಿಕೆಯಾಗುತ್ತಿದೆ. ಇದು ರಾಜ್ಯ ಸರ್ಕಾರದ ನಿಜವಾದ ಸೋಲು. ಸಾರ್ವಜನಿಕವಾಗಿ ಈ ಸೋಲಿಗೆ ರಾಜ್ಯ ಸರ್ಕಾರ ಕ್ಷಮೆ ಯಾಚಿಸಬೇಕು' ಎಂದು ಆಗ್ರಹಿಸಿದ್ದಾರೆ.
ಕೇರಳದಲ್ಲಿ ಸೋಂಕಿನ ಪುನರುತ್ಪತ್ತಿ ದರ ಏರಿಕೆ; ಹಲವು ರಾಜ್ಯಗಳಲ್ಲಿ ಆಗಸ್ಟ್ ಕೊನೆಯ ವಾರದಲ್ಲಿ ಸೋಂಕಿನ ಪುನರುತ್ಪತ್ತಿ ದರ ಒಂದಕ್ಕಿಂತ ಹೆಚ್ಚಾಗಿರುವುದು ಕಂಡುಬಂದಿದೆ. ಇದರಿಂದ ರಾಷ್ಟ್ರೀಯ ಮಟ್ಟದ ಸರಾಸರಿಯಲ್ಲಿಯೂ ಏರಿಕೆ ದಾಖಲಾಗಿದೆ. ಕೇರಳ ಹಾಗೂ ಮಹಾರಾಷ್ಟ್ರದಲ್ಲಿ ಈ ದರ ಅತಿ ಹೆಚ್ಚಾಗಿದೆ. ಮಿಜೋರಾಂ ಹಾಗೂ ಜಮ್ಮು, ಕಾಶ್ಮೀರದಲ್ಲಿ ಆರ್ ದರ ಹಿಂದಿಗಿಂತ ಏರಿಕೆಯಾಗಿದೆ. ಕೇರಳದಲ್ಲಿ ಆರ್ ದರ 1.33 ಇದೆ. ದೇಶದಲ್ಲೇ ಅತಿ ಹೆಚ್ಚಿನ ಸಕ್ರಿಯ ಪ್ರಕರಣಗಳಿರುವ ರಾಜ್ಯ ಕೇರಳ ಆಗಿದೆ.

ಕೇರಳದಲ್ಲಿ ನಿಫಾ ಆತಂಕ: ಕೇರಳದಲ್ಲಿ ಕೊರೊನಾ ಜೊತೆಜೊತೆಗೆ ನಿಫಾ ಆತಂಕ ಆರಂಭವಾಗಿದೆ. ಕೇರಳದಲ್ಲಿ ನಿಪಾ ವೈರಸ್ ಸೋಂಕಿಗೆ 12 ವರ್ಷ ವಯಸ್ಸಿನ ಬಾಲಕ ಮೃತಪಟ್ಟಿರುವುದನ್ನು ಆರೋಗ್ಯ ಸಚಿವೆ ವೀಣಾ ಜಾರ್ಜ್ ದೃಢಪಡಿಸಿದ್ದಾರೆ. ಇದಾದ ಬಳಿಕ ಕೇಂದ್ರದಿಂದ ತಂಡವೊಂದು ಕೋಯಿಕ್ಕೋಡ್ ಕಡೆಗೆ ಧಾವಿಸಿದೆ.
ಕೋಯಿಕ್ಕಾಡ್ ಜಿಲ್ಲೆಯ ಬಾಲಕಿಗೂ ಈ ವೈರಸ್ ತಗುಲಿರುವುದು ಪತ್ತೆಯಾಗುತ್ತಿದ್ದಂತೆ ಕಣ್ಣೂರು ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲೂ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಆರೋಗ್ಯ ಇಲಾಖೆಯ ವಿಶೇಷ ತಂಡ ಈ ಬಗ್ಗೆ ನಿಗಾವಹಿಸಿದ್ದು, ರೋಗ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಗುರುತಿಸಿ, ಚಿಕಿತ್ಸೆಗೊಳಪಡುವಂತೆ ನಿರ್ದೇಶನ ನೀಡಲಾಗಿದೆ. ಮೃತ ಬಾಲಕನ ಅಂತ್ಯಕ್ರಿಯೆಯನ್ನು ಮಾರ್ಗಸೂಚಿಯಂತೆ ಭಾನುವಾರವೇ ನೆರವೇರಿಸಲಾಗಿದೆ. 2018ರ ಮೇ 19ರಂದು ಕೇರಳದ ಇದೇ ಜಿಲ್ಲೆಯಲ್ಲಿ ಕಾಣಿಸಿಕೊಂಡ ನಿಫಾ ವೈರಸ್ 17 ಜನರನ್ನು ಬಲಿ ತೆಗೆದುಕೊಂಡಿತ್ತು. 2018ರ ಜೂನ್ 1ರಂತೆ 18 ಮಂದಿಗೆ ಮತ್ತೆ ಸೋಂಕು ದೃಢಪಟ್ಟಿತ್ತು.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications