ಕೇರಳದಲ್ಲಿ ಬಿಜೆಪಿಗೆ ಕಿಂಗ್ ಮೇಕರ್ ಆಗಲು ಬೇಕಾದಷ್ಟು ಮತ ಸಿಗಲಿದೆ: ಮೆಟ್ರೋ ಮ್ಯಾನ್ ಶ್ರೀಧರನ್
ಪಾಲಕ್ಕಾಡ್, ಮಾರ್ಚ್ 25: ಕೇರಳದಲ್ಲಿ ಬಿಜೆಪಿ ಬಹುಮತ ಸಿಗಬಹುದು ಅಥವಾ ಕಿಂಗ್ ಮೇಕರ್ ಆಗಲು ಸಾಕಷ್ಟು ಸ್ಥಾನಗಳು ಸಿಗಬಹುದು ಎಂದು ಮೆಟ್ರೋ ಮ್ಯಾನ್ ಇ ಶ್ರೀಧರನ್ ಹೇಳಿದ್ದಾರೆ.
ಶ್ರೀಧರನ್ ತಾವು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಖಂಡಿತವಾಗಿಯೂ ಗೆಲುವು ಸಾಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿಗೆ ಕೇರಳದಲ್ಲಿ ಉತ್ತಮ ಭವಿಷ್ಯವಿದೆ. ಈ ಬಾರಿ ಬಹುಮತ ಪಡೆದುಕೊಂಡು ಕಿಂಗ್ ಮೇಕರ್ ಆಗಲಿದೆ. ಬಿಜೆಪಿಗೆ ಮತ ಹಾಕುವುದರಿಂದ ಕೇರಳದ ಅಭಿವೃದ್ಧಿಗೆ ಸಹಾಯವಾಗಲಿದೆ ಎಂದರು. ಕೇರಳದಲ್ಲಿ ಬಿಜೆಪಿ ಸ್ಥಾನಗಳನ್ನು ಗೆಲ್ಲುವ ಉತ್ತಮ ನಿರೀಕ್ಷೆಯನ್ನು ಹೊಂದಿದೆ. ಇದು ಸಂಪೂರ್ಣ ಬಹುಮತವಾಗಿರಬಹುದು ಅಥವಾ ಪ್ತವೇಶಿಸಲು ಬೇಕಾದ ಸಂಖ್ಯೆಯನ್ನು ಹೊಂದಿರಬಹುದು.

ಪಾಲಕ್ಕಾಡ್ನಲ್ಲಿ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ನಲ್ಲಿ ಭಾಗಿಯಾಗಿದ್ದರು. ಕೇರಳದಲ್ಲಿ ಯಾವುದೇ ಕೈಗಾರಿಕೆಗಳಿಲ್ಲ, ಕೈಗಾರಿಕೆಗಳು ಮಾತ್ರ ರಾಜ್ಯಕ್ಕೆ ಸಂಪತ್ತನ್ನು ತರಬಲ್ಲವು. ಹೆಚ್ಚು ನಿರುದ್ಯೋಗವಿದ್ದು, ಉದ್ಯೋಗ ಸೃಷ್ಟಿಯ ಅಗತ್ಯವಿದೆ ಎಂದರು.
ಶಿಕ್ಷಣ ವ್ಯವಸ್ಥೆ ಗುಣಮಟ್ಟವನ್ನು ಹೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ, ಪಾರದರ್ಶಕ, ಪರಿಣಾಮಕಾರಿ ಮತ್ತು ಭ್ರಷ್ಟಾಚಾರ ರಹಿತ ಸರ್ಕಾರವನ್ನು ತರಲು ನಾನು ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಭಾರತದ 'ಮೆಟ್ರೋ ಮ್ಯಾನ್' ಎಂದೇ ಜನಪ್ರಿಯರಾಗಿರುವ ಶ್ರೀಧರನ್ ಅವರು 2011ರಲ್ಲಿ ದೆಹಲಿ ಮೆಟ್ರೋ(Metro) ಮುಖ್ಯಸ್ಥರಾಗಿ ನಿವೃತ್ತರಾಗಿದ್ದರು. ಇನ್ನು ದೇಶದ ಇತರ ಮೆಟ್ರೋ ಪ್ರಾಜೆಕ್ಟ್ʼಗಳಾದ ಜೈಪುರ, ಲಖನೌ ಮತ್ತು ಕೊಚ್ಚಿಯಲ್ಲಿ ಎಂಜಿನಿಯರ್ ಆಗಿಯೂ ಕೂಡ ಭಾಗಿಯಾಗಿದ್ದಾರೆ. 2001ರಲ್ಲಿ ಇವರಿಗೆ ಪದ್ಮಶ್ರೀ ಹಾಗೂ 2008ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಗೌರವ ಲಭಿಸಿದೆ.
ಕೇರಳ ವಿಧಾನಸಭೆ ಚುನಾವಣೆ 2021ರಲ್ಲಿ ಮತಗಟ್ಟೆಗಳ ಸಂಖ್ಯೆಯನ್ನು 21,498ಕ್ಕೆ ಹೆಚ್ಚಿಸಲಾಗಿದೆ. ಏಪ್ರಿಲ್ 6 ರಂದು ಚುನಾವಣೆ ನಡೆಯಲಿದ್ದು, ಮೇ 2ಕ್ಕೆ ಫಲಿತಾಂಶ ಹೊರಬೀಳಲಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications