ಐದು ವರ್ಷದ ಹಿಂದೆ ಬಿಜೆಪಿ ತೆರೆದ ಖಾತೆಯನ್ನು ಈ ಬಾರಿ ಮುಚ್ಚಿಸುತ್ತೇವೆ: ಪಿಣರಾಯಿ ವಿಜಯನ್
ತಿರುವನಂತಪುರಂ, ಮಾರ್ಚ್ 30: ಚುನಾವಣೆಗೆ ಇನ್ನು ಒಂದು ವಾರ ಬಾಕಿ ಇರುವ ಸಂದರ್ಭದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಟ್ವಿಟ್ಟರ್ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಐದು ವರ್ಷದ ಹಿಂದೆ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುವ ಮೂಲಕ ಬಿಜೆಪಿ ರಾಜ್ಯದಲ್ಲಿ ಮೊದಲ ಬಾರಿ ಸೀಟನ್ನು ಗೆದ್ದಿತ್ತು. ಈ ಬಾರಿ ಬಿಜೆಪಿಯ ಖಾತೆಯನ್ನು ಮುಚ್ಚಿಬಿಡುವುದಾಗಿ ಅವರು ಹೇಳಿದ್ದಾರೆ.
ನೆಮಾಮ್ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದ್ದ ಒಂದೇ ಒಂದು ವಿಧಾನಸಭೆ ಸೀಟಿನ ಕುರಿತು ಮಾತನಾಡಿರುವ ಪಿಣರಾಯಿ, 'ಕಾಂಗ್ರೆಸ್ ಜತೆಗಿನ ಮ್ಯಾಚ್ ಫಿಕ್ಸಿಂಗ್ ಮೂಲಕ ಬಿಜೆಪಿಯು ಕೇರಳದಲ್ಲಿ ತನ್ನ ಮೊಟ್ಟ ಮೊದಲ ಖಾತೆ ತೆರೆದಿತ್ತು. ಆದರೆ ಈ ಬಾರಿ ಅವರ ಖಾತೆಯನ್ನು ಖಂಡಿತವಾಗಿಯೂ ಮುಚ್ಚಿಹಾಕುತ್ತೇವೆ' ಎಂದಿದ್ದಾರೆ.

ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯ ಮತ ಹಂಚಿಕೆಯು ತೀವ್ರವಾಗಿ ಕಡಿಮೆಯಾಗಲಿದೆ ಎಂದು ಪಿಣರಾಯಿ ಭವಿಷ್ಯ ನುಡಿದಿದ್ದಾರೆ.
BJP opened their first ever account in Kerala as a result of match fixing with INC. This time around, we will close their account, for sure. pic.twitter.com/w0uPT2EGyZ
— Pinarayi Vijayan (@vijayanpinarayi) March 30, 2021
ಇದಕ್ಕೂ ಮುನ್ನ ಕೇರಳದ ಪಾಲಕ್ಕಾಡ್ನಲ್ಲಿ ಇ. ಶ್ರೀಧರನ್ ಅವರ ಪರ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಿಣರಾಯಿ ವಿಜಯನ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ಕೇರಳದಲ್ಲಿ ವಿರೋಧಪಕ್ಷ ಯುಡಿಎಫ್ ಮತ್ತು ಆಡಳಿತಾರೂಢ ಎಲ್ಡಿಎಫ್ ನಡುವೆ ಇರುವುದು ಹೆಸರಿನ ವ್ಯತ್ಯಾಸವಷ್ಟೇ. ಈ ಎರಡರ ನಡುವೆ ಹಲವು ವರ್ಷಗಳಿಂದ ಮ್ಯಾಚ್ ಫಿಕ್ಸಿಂಗ್ ನಡೆಯುತ್ತಿದೆ ಎಂದು ಟೀಕಿಸಿದ್ದರು.
ಪಿಣರಾಯಿ ಸರ್ಕಾರದ ಚಿನ್ನ ಕಳ್ಳಸಾಗಣೆ ಹಗರಣದ ಕುರಿತು ಪ್ರಸ್ತಾಪಿಸಿದ್ದ ಮೋದಿ, 'ಕೆಲವು ಬೆಳ್ಳಿ ತುಂಡುಗಳಿಗಾಗಿ ಏಸು ಕ್ರಿಸ್ತನನ್ನು ಜುಡಾಸ್ ವಂಚಿಸಿದ್ದರು. ಅದೇ ರೀತಿ ಚಿನ್ನದ ಕೆಲುವು ತುಣಕುಗಳಿಗಾಗಿ ಕೇರಳವನ್ನು ಎಲ್ಡಿಎಫ್ ವಂಚಿಸಿದೆ' ಎಂದು ವ್ಯಂಗ್ಯವಾಡಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications