ಐದು ವರ್ಷದ ಹಿಂದೆ ಬಿಜೆಪಿ ತೆರೆದ ಖಾತೆಯನ್ನು ಈ ಬಾರಿ ಮುಚ್ಚಿಸುತ್ತೇವೆ: ಪಿಣರಾಯಿ ವಿಜಯನ್
ತಿರುವನಂತಪುರಂ, ಮಾರ್ಚ್ 30: ಚುನಾವಣೆಗೆ ಇನ್ನು ಒಂದು ವಾರ ಬಾಕಿ ಇರುವ ಸಂದರ್ಭದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಟ್ವಿಟ್ಟರ್ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಐದು ವರ್ಷದ ಹಿಂದೆ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಜತೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಳ್ಳುವ ಮೂಲಕ ಬಿಜೆಪಿ ರಾಜ್ಯದಲ್ಲಿ ಮೊದಲ ಬಾರಿ ಸೀಟನ್ನು ಗೆದ್ದಿತ್ತು. ಈ ಬಾರಿ ಬಿಜೆಪಿಯ ಖಾತೆಯನ್ನು ಮುಚ್ಚಿಬಿಡುವುದಾಗಿ ಅವರು ಹೇಳಿದ್ದಾರೆ.
ನೆಮಾಮ್ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿದ್ದ ಒಂದೇ ಒಂದು ವಿಧಾನಸಭೆ ಸೀಟಿನ ಕುರಿತು ಮಾತನಾಡಿರುವ ಪಿಣರಾಯಿ, 'ಕಾಂಗ್ರೆಸ್ ಜತೆಗಿನ ಮ್ಯಾಚ್ ಫಿಕ್ಸಿಂಗ್ ಮೂಲಕ ಬಿಜೆಪಿಯು ಕೇರಳದಲ್ಲಿ ತನ್ನ ಮೊಟ್ಟ ಮೊದಲ ಖಾತೆ ತೆರೆದಿತ್ತು. ಆದರೆ ಈ ಬಾರಿ ಅವರ ಖಾತೆಯನ್ನು ಖಂಡಿತವಾಗಿಯೂ ಮುಚ್ಚಿಹಾಕುತ್ತೇವೆ' ಎಂದಿದ್ದಾರೆ.

ಈ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯ ಮತ ಹಂಚಿಕೆಯು ತೀವ್ರವಾಗಿ ಕಡಿಮೆಯಾಗಲಿದೆ ಎಂದು ಪಿಣರಾಯಿ ಭವಿಷ್ಯ ನುಡಿದಿದ್ದಾರೆ.
BJP opened their first ever account in Kerala as a result of match fixing with INC. This time around, we will close their account, for sure. pic.twitter.com/w0uPT2EGyZ
— Pinarayi Vijayan (@vijayanpinarayi) March 30, 2021
ಇದಕ್ಕೂ ಮುನ್ನ ಕೇರಳದ ಪಾಲಕ್ಕಾಡ್ನಲ್ಲಿ ಇ. ಶ್ರೀಧರನ್ ಅವರ ಪರ ಪ್ರಚಾರ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಿಣರಾಯಿ ವಿಜಯನ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದರು. ಕೇರಳದಲ್ಲಿ ವಿರೋಧಪಕ್ಷ ಯುಡಿಎಫ್ ಮತ್ತು ಆಡಳಿತಾರೂಢ ಎಲ್ಡಿಎಫ್ ನಡುವೆ ಇರುವುದು ಹೆಸರಿನ ವ್ಯತ್ಯಾಸವಷ್ಟೇ. ಈ ಎರಡರ ನಡುವೆ ಹಲವು ವರ್ಷಗಳಿಂದ ಮ್ಯಾಚ್ ಫಿಕ್ಸಿಂಗ್ ನಡೆಯುತ್ತಿದೆ ಎಂದು ಟೀಕಿಸಿದ್ದರು.
ಪಿಣರಾಯಿ ಸರ್ಕಾರದ ಚಿನ್ನ ಕಳ್ಳಸಾಗಣೆ ಹಗರಣದ ಕುರಿತು ಪ್ರಸ್ತಾಪಿಸಿದ್ದ ಮೋದಿ, 'ಕೆಲವು ಬೆಳ್ಳಿ ತುಂಡುಗಳಿಗಾಗಿ ಏಸು ಕ್ರಿಸ್ತನನ್ನು ಜುಡಾಸ್ ವಂಚಿಸಿದ್ದರು. ಅದೇ ರೀತಿ ಚಿನ್ನದ ಕೆಲುವು ತುಣಕುಗಳಿಗಾಗಿ ಕೇರಳವನ್ನು ಎಲ್ಡಿಎಫ್ ವಂಚಿಸಿದೆ' ಎಂದು ವ್ಯಂಗ್ಯವಾಡಿದ್ದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications