ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಎನ್ಡಿಎ ಅಭ್ಯರ್ಥಿ ಘೋಷಣೆ
ವಯನಾಡು(ಕೇರಳ), ಏಪ್ರಿಲ್ 01: ಕೇರಳದ ವಯಾನಾಡ್ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ಅಧ್ಯಕ್ಷ ರಾಹುಲ್ಗಾಂಧಿ ಅವರು ಸ್ಪರ್ಧಿಸುವುದಾಗಿ ಘೋಷಿಸಿದ ಬಳಿಕ ಎನ್ಡಿಎ ಕೂಡಾ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ರಾಹುಲ್ ವಿರುದ್ಧ ಯಾರು ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲಕ್ಕೆ ಸೋಮವಾರದಂದು ತೆರೆ ಎಳೆಯಲಾಗಿದೆ.
ವಯಾನಾಡ್ನಲ್ಲಿ ರಾಹುಲ್ಗಾಂಧಿಗೆ ಪ್ರತಿಸ್ಪರ್ಧಿಯಾಗಿ ಎನ್ಡಿಎ ಅಭ್ಯರ್ಥಿ ತುಷಾರ್ವೆಳ್ಳಪಲ್ಲಿ ಅವರನು ಕಣಕ್ಕಿಳಿಸಲಾಗಿದೆ. ತುಷಾರ್ಅವರು ಭಾರತ್ ಧರ್ಮ ಜನ ಸೇನಾದ ಅಧ್ಯಕ್ಷರಾಗಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಚಿತ್ರರಂಗದ ಸೂಪರ್ ಸ್ಟಾರ್ ನಟ ಸುರೇಶ್ ಗೋಪಿ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮುಂದಾಗಿರುವ ಸುದ್ದಿ ಬಂದಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಶ್ರೀಧರನ್ ಪಿಳ್ಳೈ ಅವರು ಪಕ್ಷ ಬಯಸಿದರೆ ಕಣಕ್ಕಿಳಿಯಲು ಸಿದ್ಧ ಎಂದು ಘೋಷಿಸಿದ್ದರು.

ಆದರೆ, ತುಷಾರ್ಅವರನ್ನು ವಯಾನಾಡ್ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಹೆಮ್ಮೆಯೆನಿಸುತ್ತದೆ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ತುಷಾರ್ಅವರು ಕ್ರಿಯಾತ್ಮಕ ಯುವ ನಾಯಕ. ಬಿಜೆಪಿಯ ಮೊದಲ ಆದ್ಯತೆಯಾಗಿರುವ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯದೆಡೆಗಿನ ಬದ್ಧತೆಯನ್ನು ಅವರು ಪ್ರತಿಬಿಂಬಿಸುತ್ತಾರೆ ಎಂದು ಅಮಿತ್ ಟ್ವೀಟ್ ಮಾಡಿದ್ದಾರೆ.
ಯಾರು ಕುಬೇರರು, ಯಾರು ಕುಚೇಲರು? ಆಸ್ತಿಪಾಸ್ತಿ ವಿವರ ಬೇಕೆ?
ಇದಕ್ಕೂ ಮುನ್ನ ಬಿಡಿಜೆಎಸ್ ನಿಂದ ಈ ಕ್ಷೇತ್ರಕ್ಕೆ ಉಪಾಧ್ಯಕ್ಷ ಪೈಲಿ ವಾತಿಯಾಟ್ಟು ಅವರ ಹೆಸರು ನಿಗದಿಯಾಗಿತ್ತು. ಆದರೆ, ರಾಹುಲ್ ಗಾಂಧಿ ಉಮೇದುವಾರಿಕೆ ಪಕ್ಕಾ ಆದ ಬಳಿಕ ಅಭ್ಯರ್ಥಿಯನ್ನು ಬದಲಾಯಿಸಲಾಗಿದೆ.
ಈ ಕ್ಷೇತ್ರದಲ್ಲಿ ಶೇ 50 ರಷ್ಟು ಮುಸ್ಲಿಮರು ಮಿಕ್ಕಂತೆ ಕ್ರೈಸ್ತರು ಅಲ್ಪಸಂಖ್ಯಾತರಿದ್ದು, ಬಿಜೆಪಿಗೆ ಅಸ್ತಿತ್ವ ಇಲ್ಲವಾಗಿದೆ. ರಾಹುಲ್ ಗಾಂಧಿಗೆ ಸಿಪಿಐ ಅಭ್ಯರ್ಥಿ ಸಿ.ಪಿ ಸುನೀರ್ ಅವರು ಪ್ರಬಲ ಪೈಪೋಟಿ ನೀಡುವ ಸಾಧ್ಯತೆಯಿದೆ.












Click it and Unblock the Notifications