ಸುರೇಂದ್ರನ್ಗೆ ಮಂಜೇಶ್ವರದಲ್ಲಿ ಬಿಜೆಪಿ ಗೆಲುವಿನ ಸುಳಿವು ಸಿಕ್ಕಿದೆ?
ಮಂಜೇಶ್ವರ, ಮಾರ್ಚ್ 24: ಕೇರಳ ಚುನಾವಣೆಯಲ್ಲಿ ಎಲ್ಡಿಎಫ್ ಮತ್ತೊಮ್ಮೆ ಗೆಲುವು ಸಾಧಿಸುವ ಸಾಧ್ಯತೆಯಿದೆ ಬಹುತೇಕ ಎಲ್ಲಾ ಸಮೀಕ್ಷೆಗಳು ಹೇಳಿವೆ. ಬಿಜೆಪಿ ಒಂದು ಸ್ಥಾನಗಳಿಸಿದರೆ ಹೆಚ್ಚು ಅಬ್ಬಬ್ಬಾ ಎಂದರೆ 2 ಸ್ಥಾನ ಗಳಿಸಬಹುದು ಎಂದು ಸಮೀಕ್ಷೆಗಳು ತಿಳಿಸಿವೆ. ಈ ನಡುವೆ ಇತ್ತೀಚಿನ ಸಮೀಕ್ಷೆಯಲ್ಲಿ ಮಂಜೇಶ್ವರದಲ್ಲಿ ಕೆ ಸುರೇಂದ್ರನ್ ಅವರಿಗೆ ಗೆಲುವು ಎಂದು ವರದಿ ಬಂದಿರುವುದು ಬಿಜೆಪಿಗೆ ಭಾರಿ ಹುಮ್ಮಸ್ಸು ತಂದಿದೆ.
ಮನೋರಮಾ ನ್ಯೂಸ್-ವಿಎಂಆರ್ ಸರಣಿ ಸಮೀಕ್ಷೆಯಲ್ಲಿ ಮಂಜೇಶ್ವರದಲ್ಲಿ ಬಿಜೆಪಿಗೆ ಗೆಲುವು ಜೊತೆಗೆ ಪಥನಂತಿಟ್ಟದ ಕೊನ್ನಿ ಕ್ಷೇತ್ರದಲ್ಲಿ ಮುನ್ನಡೆ ಪಡೆಯಲಿದ್ದಾರೆ ಎಂಬ ವರದಿ ಬಂದಿದೆ. ಇದರ ಬೆನ್ನಲ್ಲೇ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುವುದು ಪಕ್ಷದ ಅಧ್ಯಕ್ಷ ಕೆ ಸುರೇಂದ್ರನ್ ಅವರಿಗೆ ಗೆಲುವಿನ ಸುಳಿವು ನೀಡಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 89 ಮತಗಳ ಅಂತರದಿಂದ ಸುರೇಂದ್ರನ್ ಅವರು ಇದೇ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ಮುಸ್ಲಿಂ ಲೀಗ್ ಅಭ್ಯರ್ಥಿ ಪಿಬಿ ಅಬ್ದುಲ್ ರಜಾಕ್ ಅವರು 56,870 ಮತಗಳಿಸಿದ್ದರೆ, ಸುರೇಂದ್ರನ್ 56,781 ಮತ ಪಡೆದು ಎರಡನೇ ಸ್ಥಾನಕ್ಕೆ ತೃಪ್ತಿಪಡಬೇಕಾಯಿತು. ಬಹುಜನ ಸಮಾಜವಾದಿ ಪಕ್ಷದ ಅಭ್ಯರ್ಥಿ ಕೆ ಸುಂದರ 467 ಮತಗಳನ್ನು ಪಡೆದಿದ್ದರು. 2016ರಲ್ಲಿ ಸುರೇಂದ್ರನ್ ಸೋಲಿಗೆ ಪರೋಕ್ಷವಾಗಿ ಕಾರಣವಾಗಿದ್ದ ಸುಂದರ ಈ ಬಾರಿ ನಾಮಪತ್ರ ಹಿಂಪಡೆದುಕೊಂಡಿದ್ದಲ್ಲದೆ, ಎನ್ಡಿಎ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಘೋಷಿಸಿದ್ದಾರೆ.

ಸುರೇಂದ್ರನ್ ಅವರು ಶಬರಿಮಲೆ ಸಂಪ್ರದಾಯ, ಕಟ್ಟುಪಾಡುಗಳನ್ನು ಕಾಪಾಡಲು ನಡೆಸಿದ ಹೋರಾಟಕ್ಕೆ ಬೆಂಬಲ ಸಿಗಬೇಕಿದೆ. ಅವರ ಗೆಲುವಿಗೆ ನಾನು ಅಡ್ಡಿಯಾಗಲಾರೆ ಎಂದು ತಮ್ಮ ಯಕ್ಷಗಾನ ಮಿತ್ರ ಮಂಡಳಿ ಸದಸ್ಯರ ಬೆಂಬಲವೂ ಸುರೇಂದ್ರನ್ ಅವರಿಗೆ ಸಿಗಲಿದೆ ಎಂದಿದ್ದಾರೆ.
ಕೇರಳದ 140 ಸ್ಥಾನಗಳಿಗೆ ಏಪ್ರಿಲ್ 6 ರಂದು ಮತದಾನ ನಡೆಯಲಿದ್ದು, ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

140 ಸ್ಥಾನಗಳ ವಿಧಾನಸಭೆಯ ಬಲಾಬಲ: ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ 93 ಸ್ಥಾನ, ಕಾಂಗ್ರೆಸ್ ನೇತೃತ್ವ ಯುಡಿಎಫ್ 42 ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ 1 ಸ್ಥಾನ ಹೊಂದಿದೆ. ಯಾವುದೇ ಪಕ್ಷವು ಅಧಿಕಾರ ಸ್ಥಾಪಿಸಲು ಮ್ಯಾಜಿಕ್ ನಂಬರ್ 71 ದಾಟಬೇಕಾಗುತ್ತದೆ. 2016ರಲ್ಲಿ ಎಲ್ ಡಿ ಎಫ್ 91, ಯುಡಿಎಫ್ 47, ಕಾಂಗ್ರೆಸ್ 1, ಇತರೆ 1 ಎಂದು ಫಲಿತಾಂಶ ಬಂದಿತ್ತು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications