Breaking: ಕೇರಳದ ಪಯ್ಯನ್ನೂರಿನ ಆರ್ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ
ತಿರುವನಂತಪುರ, ಜುಲೈ 12: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ಮಂಗಳವಾರ ಮುಂಜಾನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ.
ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆ ಸಮೀಪದಲ್ಲಿಯೇ ಈ ದಾಳಿ ನಡೆದಿದೆ. ಬಾಂಬ್ ದಾಳಿಯ ಪರಿಣಾಮವಾಗಿ ಯಾವುದೇ ವ್ಯಕ್ತಿಗಳು ಗಾಯಗೊಂಡ ಬಗ್ಗೆ ವರದಿಯಾಗಿಲ್ಲ.
ಕೇರಳ ಬಿಜೆಪಿ ನಾಯಕ ಟಾಮ್ ವಡಕ್ಕನ್ ಬಾಂಬ್ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ಆಡಳಿತದ ವೈಫಲ್ಯದ ಬಗ್ಗೆ ಕಿಡಿಕಾರಿದ್ದಾರೆ. ಇಂತಹ ದಾಳಿಗಳನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿದ್ದಾರೆ.

ಈ ಘಟನೆಗೆ ಪೊಲೀಸರು ಸಹಕರಿಸಿದ್ದಾರೆ ಎಂದು ಆರೋಪಿಸಿರುವ ವಡಕ್ಕನ್, ಪೊಲೀಸ್ 100 ಮೀಟರ್ ದೂರದಲ್ಲಿದ್ದರೂ ಈ ರೀತಿಯ ಘಟನೆ ನಡೆದಿದೆ. ಕಣ್ಣೂರಿನಂತಹ ಸೂಕ್ಷ್ಮ ಜಿಲ್ಲೆಯಲ್ಲಿ ಕಚೇರಿಗಳಿಗೆ ವಿಶೇಷವಾಗಿ ರಕ್ಷಣೆ ನೀಡಬೇಕು. ಆದರೆ ರಾಜ್ಯ ಸರ್ಕಾರ ಅದರ ಬಗ್ಗೆ ಯೋಚನೆ ಮಾಡಲ್ಲ, ಅವರ ನಿರ್ಲಕ್ಷ್ಯ ದಾಳಿಕೋರರಿಗೆ ಸಹಕಾರಿಯಾಗಿದೆ ಎಂದರು. ರಾಜ್ಯದಲ್ಲಿ ಯಾವುದೇ ರಾಜಕೀಯ ಕಚೇರಿಗೆ ಹಾನಿಯಾದರೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಹೇಳಿದರು.

Recommended Video
"ಸಾಮಾಜಿಕ ಸಂಘಟನೆಗಳ ಮೇಲೆ ಬಾಂಬ್ ಎಸೆಯುವ ಮಟ್ಟಕ್ಕೆ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಆಘಾತಕಾರಿ ಮತ್ತು ದುರದೃಷ್ಟಕರವಾಗಿದೆ ಮತ್ತು ನಾಗರಿಕ ಸಮಾಜದಲ್ಲಿ ಅದು ಇಂತಹ ಘಟನೆ ನಡೆಯಬಾರದು. ಈ ಹಿಂದೆಯೂ ಸಹ ಆರ್ ಎಸ್ಎಸ್ ಕಾರ್ಯಕರ್ತರ ಮೇಲೆ ದಾಳಿಗಳು ನಡೆದಿವೆ. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡವರ ಮೇಲೆ ದಾಳಿ ಮಾಡಲಾಗುತ್ತಿದೆ. ಕಾನೂನು ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಸರಿಯಾಗಿ ನಿಭಾಯಿಸಬೇಕು. ಈ ಘಟನೆಗೆ ಪೊಲೀಸರು ಮತ್ತು ರಾಜ್ಯ ಆಡಳಿತವು ಜವಾಬ್ದಾರರಾಗಿರುತ್ತಾರೆ" ಎಂದು ಬಿಜೆಪಿ ನಾಯಕ ಟಾಮ್ ವಡಕ್ಕನ್ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications