'ಶಾಲೆಗಳಲ್ಲಿ ಹುಡುಗ ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುವುದು ಅಪಾಯಕಾರಿ': ಕೇರಳದಲ್ಲಿ ವಿವಾದ
ತಿರುವನಂತಪುರಂ ಆಗಸ್ಟ್ 19: ಕೇರಳ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪ್ರಧಾನ ಕಾರ್ಯದರ್ಶಿ ಪಿಎಂಎ ಸಲಾಂ ಅವರು ಶಾಲಾ ತರಗತಿಗಳಲ್ಲಿ ಹುಡುಗರು ಮತ್ತು ಹುಡುಗಿಯರು ಒಟ್ಟಿಗೆ ಕುಳಿತುಕೊಳ್ಳುವುದು "ಅಪಾಯಕಾರಿ" ಎಂದು ಹೇಳುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ.
"ಇದು ಅಪಾಯಕಾರಿ. ಹುಡುಗಿಯರು ಮತ್ತು ಹುಡುಗರು ತರಗತಿಯಲ್ಲಿ ಒಟ್ಟಿಗೆ ಕುಳಿತುಕೊಳ್ಳುವ ಅವಶ್ಯಕತೆ ಏನಿದೆ? ನೀವು ಅವರನ್ನು ಏಕೆ ಒತ್ತಾಯಿಸುತ್ತಿದ್ದೀರಿ ಅಥವಾ ಯಾಕೆ ಅಂತಹ ಅವಕಾಶಗಳನ್ನು ಸೃಷ್ಟಿಸುತ್ತಿದ್ದೀರಿ? ಇದು ಸಮಸ್ಯೆಗಳಿಗೆ ಕಾರಣವಾಗುತ್ತದೆ. ವಿದ್ಯಾರ್ಥಿಗಳು ಅಧ್ಯಯನದಿಂದ ವಿಮುಖರಾಗುತ್ತಾರೆ" ಎಂದು ಕೇರಳ ಸರ್ಕಾರದ ವಿರುದ್ಧ ಸಲಾಂ ಹೇಳಿದರು.
"ಲಿಂಗ ತಟಸ್ಥತೆಯು (Gender neutrality) ಧಾರ್ಮಿಕ ವಿಷಯವಲ್ಲ. ಆದರೆ, ನೈತಿಕ ಸಮಸ್ಯೆಯಾಗಿದೆ. ಸರ್ಕಾರವು ವಿದ್ಯಾರ್ಥಿಗಳ ಮೇಲೆ ಲಿಂಗ-ತಟಸ್ಥ ಸಮವಸ್ತ್ರವನ್ನು ಒತ್ತಾಯಿಸಲು ಪ್ರಯತ್ನಿಸುತ್ತಿದೆ. ಲಿಂಗ ತಟಸ್ಥತೆಯು ವಿದ್ಯಾರ್ಥಿಗಳನ್ನು ದಾರಿ ತಪ್ಪಿಸುತ್ತದೆ. ಇದನ್ನು ಹಿಂಪಡೆಯಲು ನಾವು ಸರ್ಕಾರವನ್ನು ಕೇಳುತ್ತೇವೆ" ಎಂದು ಅವರು ಹೇಳಿದರು.

ಈ ಹಿಂದೆ, ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ 'ಲಿಂಗ-ತಟಸ್ಥ ಕಲ್ಪನೆಗಳನ್ನು ಹೇರುವ' ಕ್ರಮದಿಂದ ಹಿಂದೆ ಸರಿಯುವಂತೆ ಮುಸ್ಲಿಂ ಸಂಘಟನೆಗಳು ಸರ್ಕಾರವನ್ನು ಕೋರಿದ್ದವು. ಎಡ ನೇತೃತ್ವದ ಸರ್ಕಾರವು ಶಿಕ್ಷಣ ಸಂಸ್ಥೆಗಳಲ್ಲಿ ಉದಾರವಾದಿ ಸಿದ್ಧಾಂತವನ್ನು ಜಾರಿಗೆ ತರಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದರು.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications