ಸಂಗೀತಗಾರ ಬಾಲಭಾಸ್ಕರ್ ಸಾವು ಪ್ರಕರಣ ಸಿಬಿಐ ತನಿಖೆಗೆ
ತಿರುವನಂತಪುರಂ, ಜುಲೈ 31: ಸತತ 7 ದಿನಗಳ ಜೀವನ್ಮರಣ ಹೋರಾಟ ನಡೆಸಿ ಮೃತಪಟ್ಟಿದ್ದ ಗಾಯಕ, ಪಿಟೀಲುವಾದಕ, ಸಂಗೀತಗಾರ ಬಾಲಭಾಸ್ಕರ್(40) ಅವರ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿದೆ.
2018ರ ಈ ಅಪಘಾತ ಪ್ರಕರಣದ ಬಗ್ಗೆ ಅನೇಕ ಸಂಶಯಗಳು ಕೇಳಿ ಬಂದಿತ್ತು. ಅಭಿಮಾನಿಗಳು ಹಲವು ಸಂಘಟನೆಗಳು ಈ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ತಂಡಕ್ಕೆ ವಹಿಸುವಂತೆ ಕೇರಳ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರಂತೆ, ಈ ಪ್ರಕರಣವನ್ನು ಸಿಬಿಐಗೆ ನೀಡುತ್ತಿರುವುದಾಗಿ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಸೆಪ್ಟೆಂಬರ್ 25, 2018ರಂದು ತಿರುವನಂತಪುರಂ ಹೆದ್ದಾರಿಯ ಪಕ್ಕದಲ್ಲಿದ್ದ ಮರವೊಂದಕ್ಕೆ ಬಾಲಭಾಸ್ಕರ್ ಅವರ ಕುಟುಂಬವಿದ್ದ ಕಾರು ಅಪ್ಪಳಿಸಿತ್ತು. ಈ ದುರ್ಘಟನೆಯಲ್ಲಿ ಬಾಲಭಾಸ್ಕರ್, ಬಾಲಭಾಸ್ಕರ್ ಅವರ ಪತ್ನಿ ಲಕ್ಷ್ಮಿ, ಕಾರು ಚಾಲಕ ಅರ್ಜುನ್ ಅವರಿಗೆ ತೀವ್ರ ಗಾಯಗಳಾಗಿತ್ತು. ದಂಪತಿಯ ಎರಡು ವರ್ಷ ವಯಸ್ಸಿನ ಮಗು ತೇಜಸ್ವಿನಿ ಮೃತಪಟ್ಟಿದ್ದಳು.

ತ್ರಿಸ್ಸೂರ್ ದೇಗುಲಕ್ಕೆ ಭೇಟಿ ನೀಡಿ ಬರುತ್ತಿದ್ದರು
ಬಾಲಭಾಸ್ಕರ್ ಅವರು ತ್ರಿಸ್ಸೂರ್ ದೇಗುಲಕ್ಕೆ ಭೇಟಿ ನೀಡಿ, ವಾಪಸ್ ಬರುವಾಗ ಈ ದುರ್ಘಟನೆ ನಡೆದಿತ್ತು. ಮುಂಜಾನೆ ನಿದ್ರೆ ರಹಿತ ಪಯಣದಿಂದ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಮಂಗಳಾಪುರಂ ಪೊಲೀಸರು ಹೇಳಿದ್ದಾರೆ.
12 ವರ್ಷ ವಯಸ್ಸಿನಿಂದಲೇ ಸಂಗೀತ ಕ್ಷೇತ್ರದಲ್ಲಿ ಮಿಂಚಿದ್ದ ಬಾಲ ಭಾಸ್ಕರ್ ಅವರು, ಮಾಂಗಲ್ಯ ಪಲ್ಲಕ್ಕು ಎಂಬ ಮಲಯಾಳಂ ಸಿನಿಮಾಕ್ಕೆ ತಮ್ಮ 17ನೇ ವಯಸ್ಸಿನಲ್ಲೆ ಸಂಗೀತ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದರು. ಬಾಲಭಾಸ್ಕರ್ ಅವರ ಫ್ಯೂಷನ್ ಸಂಗೀತಕ್ಕೆ ಸಾಕಷ್ಟು ಅಭಿಮಾನಿಗಳು ಹುಟ್ಟುಕೊಂಡಿದ್ದರು.

ಬಾಲಪ್ರತಿಭೆಯಾಗಿ ಬೆಳಕಿಗೆ ಬಂದವರು
17ನೇ ವಯಸ್ಸಿಗೆ ಸ್ವತಂತ್ರವಾಗಿ ಸಿನಿಮಾವೊಂದಕ್ಕೆ ಸಂಗೀತ ನಿರ್ದೇಶನ ಮಾಡಿದ ಬಾಲಭಾಸ್ಕರ್ ಅವರು ಬಾಲಪ್ರತಿಭೆಯಾಗಿ ಬೆಳಕಿಗೆ ಬಂದವರು. ಡಾ. ಕೆ.ಜೆ ಯೇಸುದಾಸ್, ಹರಿಹರನ್, ಸುರೇಶ್ ವಾಡ್ಕರ್, ಕೆಎಸ್ ಚಿತ್ರಾ, ಸುಜಾತಾ, ಶ್ರೀನಿವಾಸ್, ಕಾರ್ತಿಕ್, ವಿಜಯ್ ಪ್ರಕಾಶ್ ಸೇರಿದಂತೆ ಹತ್ತು ಹಲವು ಸಂಗೀತ ದಿಗ್ಗಜರು, ಸಂಗೀತಗಾರರ ಜತೆ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದರು.

ಕೊಡಗು ಸಂತ್ರಸ್ತರ ನೆರವಿಗೆ ಸ್ಪಂದಿಸಿದ್ದರು
ಜಲ ಪ್ರಳಯದಿಂದ ತತ್ತರಿಸಿರುವ ಕೇರಳ ಕೊಡಗು ಸಂತ್ರಸ್ತರ ನೆರವಿಗೆ ಸ್ಪಂದಿಸಿದ್ದ ಬಾಲಭಾಸ್ಕರ್ ಅವರು ವಿವಿಧೆಡೆ ಸಂಗೀತ ಕಾರ್ಯಕ್ರಮ ಆಯೋಜನೆಗೆ ಮುಂದಾಗಿದ್ದರು. ವಿಸ್ಮಯಂ ಎಂಬ ಹೆಸರಿನಲ್ಲಿ ಮ್ಯೂಸಿಕ್ ಫ್ಯೂಷನ್ ಕಾರ್ಯಕ್ರಮವನ್ನು ವಿಕೆ ಕನ್ವೆಂನ್ಷನ್ ಹಾಲ್ ನಲ್ಲಿ ಆಯೋಜಿಸಲಾಗಿತ್ತು. ಸಂತ್ರಸ್ತ ನೆರವಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಾ ಬಂದಿದ್ದರು.

ವೈವಿಧ್ಯಮಯ ಆಲ್ಬಂಗಳನ್ನು ಹೊರತಂದಿದ್ದರು
ಬಾಲ ಪ್ರತಿಭೆ ಬಾಲಭಾಸ್ಕರ್ ಅವರಿಗೆ ಕೇಂದ್ರ ಸಂಗೀತ ನಾಟಕ ಅಕಾಡೆಮಿಯಿಂದ ಪಿಟೀಲು ವಾದನಕ್ಕಾಗಿ ಬಿಸ್ಮಿಲ್ಲಾ ಖಾನ್ ಯುವ ಸಂಗೀತಗಾರ ಪುರಸ್ಕಾರ ಲಭಿಸಿತ್ತು. ಗಾಯಕ, ಪೀಟಲು ವಾದಕ, ಸಂಗೀತ ಸಂಯೋಜಕರಾಗಿ ಫ್ಯೂಷನ್ ಸಂಗೀತವನ್ನು ಹೆಚ್ಚೆಚ್ಚು ಜನಪ್ರಿಯಗೊಳಿಸಲು ಮನಸ್ಸು ಮಾಡಿದರು. ಅನೇಕ ಕೀರ್ತನೆಗಳು, ಸಂಸ್ಕೃತ ಭಾಷಾ ಪ್ರಚಾರ, ರಾಕ್, ಜಾಜ್, ಹಿಪ್ ಹಾಪ್ ಸಂಗೀತ ಹೀಗೆ ವೈವಿಧ್ಯಮಯ ಆಲ್ಬಂಗಳನ್ನು ಹೊರತಂದಿದ್ದರು.

ದುರಂತ ಅಂತ್ಯ ಕಂಡಿದ್ದ ಬಾಲಭಾಸ್ಕರ್
ಸಿಕೆ ಉನ್ನಿ ಹಾಗೂ ಶಾಂತಕುಮಾರಿ ಅವರ ಪುತ್ರನಾಗಿ ಜನಿಸಿದ ಬಾಲಭಾಸ್ಕರ್ ಅವರು ತಮ್ಮ ಬಹುಕಾಲದ ಗೆಳತಿ ಲಕ್ಷ್ಮಿಯನ್ನು 2000ರಲ್ಲಿ ಮದುವೆಯಾಗಿದ್ದರು. ದೀರ್ಘಕಾಲದ ನಂತರ 2016ರಲ್ಲಿ ಹೆಣ್ಣು ಮಗು ಜನಿಸಿತ್ತು. ಆದರೆ, ಸೆಪ್ಟೆಂಬರ್ 25, 2018ರ ದುರಂತದಲ್ಲಿ ಅಪ್ಪ-ಮಗಳು ಮೃತರಾಗಿದ್ದು, ಲಕ್ಷ್ಮಿ ಸೇರಿದಂತೆ ಕುಟುಂಬವರ್ಗ, ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಬಾಲಭಾಸ್ಕರ್ ಅವರು ತ್ರಿಸ್ಸೂರ್ ದೇಗುಲಕ್ಕೆ ಭೇಟಿ ನೀಡಿ, ವಾಪಸ್ ಬರುವಾಗ ಈ ದುರ್ಘಟನೆ ನಡೆದಿತ್ತು. ಮುಂಜಾನೆ ನಿದ್ರೆ ರಹಿತ ಪಯಣದಿಂದ ಚಾಲಕನ ನಿಯಂತ್ರಣ ತಪ್ಪಿ ಈ ಅನಾಹುತ ಸಂಭವಿಸಿರುವ ಸಾಧ್ಯತೆಯಿದೆ ಎಂದು ಮಂಗಳಾಪುರಂ ಪೊಲೀಸರು ಹೇಳಿದ್ದರು.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications