ಕೇರಳದಲ್ಲಿ ಸಿಎಂ ಯಡಿಯೂರಪ್ಪ ಕಾರಿಗೆ ಮುತ್ತಿಗೆ
ಕಣ್ಣೂರು, ಡಿಸೆಂಬರ್ 24: ಕೇರಳಕ್ಕೆ ತೆರಳಿರುವ ಸಿಎಂ ಯಡಿಯೂರಪ್ಪ ಗೆ ಸಿಎಎ, ಎನ್ಆರ್ಸಿ ಪ್ರತಿಭಟನೆಯ ಬಿಸಿ ತಾಗಿದೆ.
ಕಣ್ಣೂರಿನಲ್ಲಿ ಯಡಿಯೂರಪ್ಪ ಕಾರಿಗೆ ಮುತ್ತಿಗೆ ಹಾಕಿದ ಸಿಪಿಎಂ ಕಾರ್ಯಕರ್ತರು ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಸಿಎಎ ಪ್ರತಿಭಟನಾಕಾರರ ಮೇಲೆ ಮಂಗಳೂರಿನಲ್ಲಿ ಗೋಲಿಬಾರ್ ಆದ ಘಟನೆಗೆ ಖಂಡಿಸಿ ಪ್ರತಿಭಟನಾಕಾರರು ಯಡಿಯೂರಪ್ಪ ಕಾರಿಗೆ ಮುತ್ತಿಗೆ ಹಾಕಿದ್ದರು.
ಕಣ್ಣೂರಿನ ಸಮೀಪದ ತಳಿಪರಂಬ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ತೆರಳಿದ್ದರು. ಅಲ್ಲಿ ವಿಶೇಷ ಪೂಜೆ ಮುಗಿಸಿ ವಾಪಸ್ಸಾಗುವ ವೇಳೆ ಅವರ ಕಾರನ್ನು ಅಡ್ಡಗಟ್ಟಿದ ಪ್ರತಿಭಟನಾಕಾರರ ಗುಂಪು ಸಿಎಂ ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು.

ಯಡಿಯೂರಪ್ಪ ಅವರ ಕಾರಿಗೆ ಪ್ರತಿಭಟನಾಕಾರನೊಬ್ಬ ಅಡ್ಡ ಮಲಗಿ ಕಾರನ್ನು ತಡೆದ, ಚಾಲಕ ಚಾಕಚಕ್ಯತೆಯಿಂದ ಆತನನ್ನು ತಪ್ಪಿಸಿ ಮುಂದೆ ವಾಹನ ಮುಂದೆ ಚಲಾಯಿಸಿ ಪ್ರತಿಭಟನಾಕಾರರನ್ನು ಬೆನ್ನು ತಪ್ಪಿಸಿಕೊಂಡರು.
CPI(M)s youth wing, unleashes a cowardly attack on K'taka CM Shri @BSYBJP . It was the driver's evasive action that helped the CM escape from further brutality.
— BJP KERALAM (@BJP4Keralam) December 24, 2019
State police didn't take any precautions even after getting security threats in advance.@Tejasvi_Surya @amitmalviya pic.twitter.com/drWFJ0PzTX
ನಿನ್ನೆ ರಾತ್ರಿ ಯಡಿಯೂರಪ್ಪ ಕೇರಳಕ್ಕೆ ತಲುಪಿದಾಗಲೂ ಸಹ ಕೆಲವರು ಬಂದು ಪ್ರತಿಭಟನೆ ನಡೆಸಿದರು. ಅವರನ್ನು ಪೊಲೀಸರು ಬಂಧಿಸಿದ್ದರು.
ಯಡಿಯೂರಪ್ಪ ಅವರು ನಾಳೆಯೂ ಕೇರಳದ ಕೆಲವು ದೇವಸ್ಥಾನಗಳಿಗೆ ತೆರಳುವವರಿದ್ದರು. ಪ್ರತಿಭಟನೆಗಳು ಹೆಚ್ಚಾದ ಕಾರಣ ಯಡಿಯೂರಪ್ಪ ಅವರು ಇಂದೇ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications