ಕೇರಳದಲ್ಲಿ ಸಿಎಂ ಯಡಿಯೂರಪ್ಪ ಕಾರಿಗೆ ಮುತ್ತಿಗೆ
ಕಣ್ಣೂರು, ಡಿಸೆಂಬರ್ 24: ಕೇರಳಕ್ಕೆ ತೆರಳಿರುವ ಸಿಎಂ ಯಡಿಯೂರಪ್ಪ ಗೆ ಸಿಎಎ, ಎನ್ಆರ್ಸಿ ಪ್ರತಿಭಟನೆಯ ಬಿಸಿ ತಾಗಿದೆ.
ಕಣ್ಣೂರಿನಲ್ಲಿ ಯಡಿಯೂರಪ್ಪ ಕಾರಿಗೆ ಮುತ್ತಿಗೆ ಹಾಕಿದ ಸಿಪಿಎಂ ಕಾರ್ಯಕರ್ತರು ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಸಿಎಎ ಪ್ರತಿಭಟನಾಕಾರರ ಮೇಲೆ ಮಂಗಳೂರಿನಲ್ಲಿ ಗೋಲಿಬಾರ್ ಆದ ಘಟನೆಗೆ ಖಂಡಿಸಿ ಪ್ರತಿಭಟನಾಕಾರರು ಯಡಿಯೂರಪ್ಪ ಕಾರಿಗೆ ಮುತ್ತಿಗೆ ಹಾಕಿದ್ದರು.
ಕಣ್ಣೂರಿನ ಸಮೀಪದ ತಳಿಪರಂಬ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ತೆರಳಿದ್ದರು. ಅಲ್ಲಿ ವಿಶೇಷ ಪೂಜೆ ಮುಗಿಸಿ ವಾಪಸ್ಸಾಗುವ ವೇಳೆ ಅವರ ಕಾರನ್ನು ಅಡ್ಡಗಟ್ಟಿದ ಪ್ರತಿಭಟನಾಕಾರರ ಗುಂಪು ಸಿಎಂ ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದರು.

ಯಡಿಯೂರಪ್ಪ ಅವರ ಕಾರಿಗೆ ಪ್ರತಿಭಟನಾಕಾರನೊಬ್ಬ ಅಡ್ಡ ಮಲಗಿ ಕಾರನ್ನು ತಡೆದ, ಚಾಲಕ ಚಾಕಚಕ್ಯತೆಯಿಂದ ಆತನನ್ನು ತಪ್ಪಿಸಿ ಮುಂದೆ ವಾಹನ ಮುಂದೆ ಚಲಾಯಿಸಿ ಪ್ರತಿಭಟನಾಕಾರರನ್ನು ಬೆನ್ನು ತಪ್ಪಿಸಿಕೊಂಡರು.
CPI(M)s youth wing, unleashes a cowardly attack on K'taka CM Shri @BSYBJP . It was the driver's evasive action that helped the CM escape from further brutality.
— BJP KERALAM (@BJP4Keralam) December 24, 2019
State police didn't take any precautions even after getting security threats in advance.@Tejasvi_Surya @amitmalviya pic.twitter.com/drWFJ0PzTX
ನಿನ್ನೆ ರಾತ್ರಿ ಯಡಿಯೂರಪ್ಪ ಕೇರಳಕ್ಕೆ ತಲುಪಿದಾಗಲೂ ಸಹ ಕೆಲವರು ಬಂದು ಪ್ರತಿಭಟನೆ ನಡೆಸಿದರು. ಅವರನ್ನು ಪೊಲೀಸರು ಬಂಧಿಸಿದ್ದರು.
ಯಡಿಯೂರಪ್ಪ ಅವರು ನಾಳೆಯೂ ಕೇರಳದ ಕೆಲವು ದೇವಸ್ಥಾನಗಳಿಗೆ ತೆರಳುವವರಿದ್ದರು. ಪ್ರತಿಭಟನೆಗಳು ಹೆಚ್ಚಾದ ಕಾರಣ ಯಡಿಯೂರಪ್ಪ ಅವರು ಇಂದೇ ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ.
-
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications