ವಯನಾಡಿನಲ್ಲಿ ರಾಹುಲ್ vs ರಾಹುಲ್ vs ರಾಹುಲ್ ಗಾಂಧಿ
ವಯನಾಡು, ಏಪ್ರಿಲ್ 07: ಕರ್ನಾಟಕದ ಮಂಡ್ಯದಲ್ಲಿ ಒಂದೇ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆ ಬಗ್ಗೆ ಗೊತ್ತಿರಬಹುದು. ಈಗ ರೀತಿ ಪ್ರಸಂಗ ಈಗ ದೇವರನಾಡು ಕೇರಳದ ಕುತೂಹಲಕಾರಿ ಕಣ ವಯನಾಡಿನಲ್ಲಿ ನಡೆದಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಇನ್ನಿಬ್ಬರು ರಾಹುಲ್ ಹೆಸರಿನವರು ಸ್ಪರ್ಧಿಸುತ್ತಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಕರ್ನಾಟಕದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಅಂಬರೀಷ್ ವಿರುದ್ಧ ಇನ್ನು ಮೂವರು ಸುಮಲತಾ ಸ್ಪರ್ಧಿಸಿದ್ದಾರೆ.
ಉತ್ತರಪ್ರದೇಶದ ಅಮೇಥಿ ಅಲ್ಲದೆ ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇತ್ತೀಚೆಗೆ ನಾಮಪತ್ರ ಸಲ್ಲಿಸಿದ್ದರು. ರಾಹುಲ್ ನಾಮಪತ್ರ ಸಲ್ಲಿಸಿದ ಕೆಲ ಗಂಟೆಗಳಲ್ಲೇ ರಾಹುಲ್ ಹೆಸರಿನ ಇನ್ನಿಬ್ಬರು ಕೂಡ ನಾಮಪತ್ರ ಸಲ್ಲಿಸಿದ್ದಾರೆ. ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದರೆ ಅವರ ಎದುರು ಸ್ಪರ್ಧಿಸಲು ಈ ಮೊದಲೇ ಇವರಿಬ್ಬರು ನಿರ್ಧರಿಸಿದ್ದರು ಎಂದು ತಿಳಿದು ಬಂದಿದೆ.

ಕೇರಳ ವಿಶ್ವವಿದ್ಯಾಲಯದಲ್ಲಿ ಜಾನಪದ ಸಂಗೀತ ವಿಷಯದ ಸಂಶೋಧನಾ ವಿದ್ಯಾರ್ಥಿಯಾಗಿರುವ ಎರುಮೆಲಿ ನಿವಾಸಿ, 33 ವರ್ಷ ವಯಸ್ಸಿನ ರಾಹುಲ್ ಗಾಂಧಿ ಕೆ.ಇ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಶೇಷ ವೆಂದರೆ ರಾಹುಲ್ ಗಾಂಧಿ ಕೆ. ಇ ಅವರ ಕಿರಿಯ ಸೋದರನ ಹೆಸರು ರಾಜೀವ್ ಗಾಂಧಿ ಕೆ.ಇ.
ಮತ್ತೊಬ್ಬ ಅಭ್ಯರ್ಥಿ ರಾಹುಲ್ ಗಾಂಧಿ ಅವರು ಅಖಿಲ ಭಾರತ ಮಕ್ಕಳ್ ಘಟಕದ ಬೆಂಬಲದಿಂದ ನಾಮಪತ್ರ ಸಲ್ಲಿಸಿದ್ದಾರೆ.
ಇವರ ಜೊತೆಗೆ 40 ವರ್ಷ ವಯಸ್ಸಿನ ಸಂಸ್ಕೃತ ಟೀಚರ್ ಕೆ.ಎಂ. ಶಿವಪ್ರಸಾದ್ ಗಾಂಧಿ ಎಂಬುವವರು ಪಕ್ಷೇತರ ಅಭ್ಯರ್ಥಿಯೂ ಇದ್ದಾರೆ. ಇವರೆಲ್ಲರ ವಿರುದ್ಧ ಸೋಲಾರ್ ಹಗರಣದ ಪ್ರಮುಖ ಆರೋಪಿ ಸರಿತಾ ಎಸ್ನಾಯರ್ ಸ್ಪರ್ಧಿಸುತ್ತಿದ್ದಾರೆ. ಅಂತಿಮವಾಗಿ ವಯನಾಡು ಲೋಕಸಭೆ ಕ್ಷೇತ್ರದಲ್ಲಿ 25 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications