ಕೊರೊನಾ ತಡೆಗಟ್ಟಲು ಕೇರಳ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ
ತಿರುವನಂತಪುರಂ, ಮಾರ್ಚ್ 28: ಕೊರೊನಾ ಮಹಾಮಾರಿಯನ್ನು ತಡೆಯಲೇಬೇಕು ಎಂದು ಪಣತೊಟ್ಟಿರುವ ಕೇರಳ ಸರ್ಕಾರ ಇದೀಗ ಮತ್ತೊಂದು ಹೆಜ್ಜೆ ಮುಂದೆ ಇಟ್ಟಿದೆ.
Recommended Video
Anantha Padmanabha Swamy Temple, Kerala : Mystery Behind The Last Door | Oneindia Kannada
ಕಮ್ಯುನಿಟಿ ಆಹಾರ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಅವಶ್ಯ ಇರುವವರ ಮನೆ ಬಾಗಿಲಿಗೆ ಉಚಿತವಾಗಿ ಆಹಾರ ಪೂರೈಸುವ ಯೋಜನೆಯನ್ನು ಕೇರಳ ಸರ್ಕಾರ ಆರಂಭಿಸಿದೆ.
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಯೋಜನೆ ಘೋಷಿಸಿದ್ದಾರೆ. ಸದ್ಯ 941 ಪಂಚಾಯತ್ಗಳಲ್ಲಿ ಸಮುದಾಯ ಅಡುಗೆ ಕೇಂದ್ರಗಳನ್ನು ಸ್ಥಾಪಿಸಲು ಅನುಮತಿ ನೀಡಲಾಗಿದೆ.

ಕೇರಳದಲ್ಲಿ ಲಾಕ್ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಿರುವುದರಿಂದ ದುರ್ಬಲವರ್ಗದವರು, ಬಡವರು, ನಿರ್ಗತಿಕರಿಗೆ ಆಹಾರ ಸಮಸ್ಯೆಯಾಗಿದೆ ಎಂಬ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ.
ಆರ್ಥಿಕವಾಗಿ ದುರ್ಬಲರಾಗರುವವರಿಗೆ ಉಚಿತವಾಗಿ ಅಹಾರ ನೀಡಲಾಗುತ್ತಿದೆ. ಸಾರ್ವಜನಿಕರೂ ಇದರ ಪ್ರಯೋಜನೆ ಪಡೆಯಬಹುದಾಗಿದ್ದು, ಅವರಿಗೆ ಸಸ್ಯಾಹಾರಿ ಊಟಕ್ಕೆ ₹ 20 ನಿಗದಿಪಡಿಸಲಾಗಿದೆ.












Click it and Unblock the Notifications