ಕೇರಳದ ಕೊರೊನಾ ಜಾಗೃತಿ ವಿಡಿಯೋ ಹಂಚಿಕೊಂಡ ತರೂರ್
ತಿರುವನಂತಪುರಂ, ಮಾರ್ಚ್ 17: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಕೊರೊನಾವೈರಸ್ ಪೀಡಿತರನ್ನು ಸಂಭಾಳಿಸಿದ ರಾಜ್ಯ ಎನಿಸಿಕೊಂಡಿರುವ ಕೇರಳ ತನ್ನ ಜನತೆಗೆ ವಿಶಿಷ್ಟ ರೀತಿಯಲ್ಲಿ ವೈರಸ್ ಬಗ್ಗೆ ಜಾಗೃತಿ ಮೂಡಿಸುತ್ತಿದೆ.
Recommended Video
ಜಾಗತಿಕ ಸಾಂಕ್ರಾಮಿಕ ಪಿಡುಗು ಕೊರೊನಾವೈರಸ್ ಹರಡುವುದನ್ನು ತಡೆಗಟ್ಟುವುದು, ಕೊವಿಡ್19 ಪೀಡಿತರ ಚಿಕಿತ್ಸೆ ಬಗ್ಗೆ ಕೇರಳ ಹೇಗೆ ಜಾಗೃತಿ ಮೂಡಿಸುತ್ತಿದೆ ಎಂಬುದನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್ ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ.
ಕೇರಳದಲ್ಲಿ ಯಂತ್ರಮಾನವ(Robots) ಬಳಸಿ ಜನತೆಗೆ ವೈರಸ್ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ವಿಡಿಯೋವೊಂದನ್ನು ಶಶಿ ತರೂರ್ ಹಂಚಿಕೊಂಡಿದ್ದಾರೆ.

ಆರಂಭದಿಂದಲೂ ಸೂಕ್ತ ಪರೀಕ್ಷೆ, ಜಾಗೃತಿ ಅಭಿಯಾನ, ರೋಗ ಪೀಡಿತರಿಗೆ ಚಿಕಿತ್ಸೆ ನೀಡುತ್ತಾ ಬಂದಿರುವ ಕೇರಳ ಮೊದಲ ಮೂವರು ಸೋಂಕಿತರು ಗುಣಮುಖರಾಗುವಂತೆ ಮಾಡುವಲ್ಲಿ ಯಶಸ್ವಿಯಾಗಿದೆ. ಒಂದೆಡೆ ಮಾಸ್ಕ್ ಗಳನ್ನು ಕೇವಲ 2 ರುಗೆ ಮಾರಾಟ ಮಾಡುವ ಮೂಲಕ ಕೊಚ್ಚಿಯ ಮೆಡಿಕಲ್ ಶಾಪ್ ನೆರವಾಗುತ್ತಿದೆ. ಇನ್ನೊಂದೆಡೆ ಮಧ್ಯಾಹ್ನದ ಬಿಸಿಯೂಟ ತಪ್ಪಿಸಿಕೊಂಡಿರುವ ವಿದ್ಯಾರ್ಥಿಗಳ ಮನೆಗೆ ಸರ್ಕಾರವೇ ಊಟ ಒದಗಿಸುತ್ತಿದೆ.
Robots dispensing sanitiser & #COVID2019 advice. In Kerala!! pic.twitter.com/TlBETlxXel
— Shashi Tharoor (@ShashiTharoor) March 17, 2020
ಪ್ರಸ್ತುತ ಕೇರಳದಲ್ಲಿ ಒಟ್ಟು 24 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸದಾಗಿ ಮೂರು ಪ್ರಕರಣಗಳೊಂದಿಗೆ ದೇಶದಲ್ಲಿ ಒಟ್ಟಾರೆ ಈ ಸೋಂಕು ತಗುಲಿದವರ ಸಂಖ್ಯೆ 126ಕ್ಕೆ ಏರಿಕೆ ಆಗಿದೆ. ಮಾರ್ಚ್ 17ರ ಈ ಸಮಯಕ್ಕೆ ಭಾರತದಲ್ಲಿ ಮೂವರು ಕೊವಿಡ್19ಕ್ಕೆ ಬಲಿಯಾಗಿದ್ದಾರೆ.
ಈ ನಡುವೆ ಕೊವಿಡ್ 19 ಲಸಿಕೆಯನ್ನು ಮನುಷ್ಯರ ಮೇಲೆ ಪ್ರಯೋಗಿಸುವ ಕ್ಲಿನಿಕಲ್ ಟ್ರಯಲ್ ಆರಂಭವಾಗಿದೆ ಎಂದು ಅಮೆರಿಕ ಘೋಷಿಸಿದೆ. ಕೊವಿಡ್ 19ಗೆ ಚುಚ್ಚುಮದ್ದು ಸಿಕ್ಕರೂ ಎಲ್ಲೆಡೆ ಲಭ್ಯವಾಗಲು ಇನ್ನೂ ಕೆಲ ತಿಂಗಳುಗಳು ಹಿಡಿಯಲಿದೆ.
ಕೊರೊನಾವೈರಸ್ ಹರಡದಂತೆ ಎಲ್ಲೆಡೆ ಸ್ವಚ್ಛತೆ ಅಭಿಯಾನ
ವಿಶ್ವದೆಲ್ಲೆಡೆ 182, 438 ಪ್ರಕರಣಗಳು ದಾಖಲಾಗಿದ್ದು, ಸಾವಿನ ಸಂಖ್ಯೆ 7,157 ದಾಟಿದೆ. ಚೀನಾದಲ್ಲಿ 3213 ಮಂದಿ ಮೃತರಾಗಿದ್ದಾರೆ. ಎರಡನೇ ಸ್ಥಾನದಲ್ಲಿರುವ ಇಟಲಿಯಲ್ಲಿ 2158 ಸಾವನ್ನಪ್ಪಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications