ಕೋವಿಡ್ ನಿರ್ವಹಣೆಯಲ್ಲಿ ಮತ್ತೆ ದೇಶಕ್ಕೆ ಮಾದರಿಯಾದ ಪಿಣರಾಯಿ ಸರಕಾರ
ತಿರುವನಂತಪುರಂ, ಮೇ 13: ಕೊರೊನಾ ಮೊದಲನೇ ಅಲೆಯಿಂದಲೇ ತಮ್ಮದೇ ವಿಶಿಷ್ಟ ಕಾರ್ಯತಂತ್ರ/ಮಾರ್ಗಸೂಚಿಯಿಂದ ಸುದ್ದಿ ಮಾಡಿದ್ದ ಕೇರಳ, ಈಗ, ಲಸಿಕೆ ಬಳಕೆಯಲ್ಲೂ ದೇಶದ ಇತರ ರಾಜ್ಯಗಳಿಗೆ ಮಾದರಿಯಾಗಿದೆ.
Recommended Video
ಕೆಲವು ದಿನಗಳ ಹಿಂದೆ ಲಸಿಕೆ ಸದ್ಬಳಕೆ ವಿಚಾರದಲ್ಲಿ ಪ್ರಧಾನಿ ಮೋದಿಯಿಂದ ಮೆಚ್ಚುಗೆ ಪಡೆದಿದ್ದ ಕೇರಳ ಸರಕಾರ, ಲಸಿಕೆ ಜೀರೋ ವೇಸ್ಟೇಜ್ ಮೂಲಕ ನಾಡಿಗೆ ಮಾದರಿಯಾಗಿದೆ.
ಇಷ್ಟೇ ಅಲ್ಲದೇ, ರಾಜ್ಯಕ್ಕೆ ನಿಗದಿಯಾಗಿದ್ದ ಕೋಟಾದಲ್ಲಿ ಹೆಚ್ಚುವರಿಯಾಗಿ ಉಳಿಕೆಯಾದ ಒಂದು ಲಕ್ಷ ರೆಮ್ಡಿಸಿವಿರ್ ಲಸಿಕೆಯನ್ನು ಕೇಂದ್ರ ಸರಕಾರಕ್ಕೆ ಹಿಂದಿರುಗಿಸಿದೆ. ಆ ಮೂಲಕ, ಲಸಿಕೆ ಅಭಾವವಿರುವ ರಾಜ್ಯಗಳಿಗೆ ಹೆಚ್ಚುವರಿಯಾಗಿ ಕೇರಳದ ಕೋಟಾದಿಂದ ಉಪಯೋಗವಾಗಲಿದೆ.

"ಕೇರಳ ಸರಕಾರ ನಮ್ಮಲ್ಲಿ ಹೆಚ್ಚುವರಿಯಾಗಿ ಉಳಿದಿರುವ ಒಂದು ಲಕ್ಷ ಲಸಿಕೆಯನ್ನು ಕೇಂದ್ರ ಸರಕಾರಕ್ಕೆ ಹಿಂದಿರುಗಿಸಿದ್ದೇವೆ. ಆ ಮೂಲಕ, ಅಭಾವವಿರುವ ರಾಜ್ಯಗಳಿಗೆ ಇದರಿಂದ ಉಪಯೋಗವಾಗಲಿ" ಎಂದು ರಾಜ್ಯದ ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ತಿಂಗಳ ಮೇ ಹದಿನಾರರವರೆಗೆ ಬೇಕಾಗುವಷ್ಟು ರೆಮ್ಡಿಸಿವಿರ್ ಲಸಿಕೆಯನ್ನು ಎಲ್ಲಾ ರಾಜ್ಯಗಳಿಗೆ ಹಂಚಲಾಗಿತ್ತು. ಏಪ್ರಿಲ್ 21-ಮೇ 16ರ ಅವಧಿಗೆ 53ಲಕ್ಷ ಲಸಿಕೆಯನ್ನು ಕೇಂದ್ರ ಸರಕಾರ ರಾಜ್ಯಗಳಿಗೆ ಹಂಚಿತ್ತು.
ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಈ ಲಸಿಕೆಯ ಅಭಾವ ಕಾಡುತ್ತಿತ್ತು. ಜೊತೆಗೆ, ಕಾಳಸಂತೆಯಲ್ಲೂ ಇದು ಮಾರಾಟವಾಗಿತ್ತು. ಬೇರೆ ರಾಜ್ಯಗಳ ಪರಿಸ್ಥಿತಿ ಹೀಗಿರುವಾಗ, ಪಿಣರಾಯಿ ವಿಜಯನ್ ಸರಕಾರದ ಕಾರ್ಯವೈಖರಿ ಇತರರಿಗೂ ಮಾದರಿಯಾಗುವಂತದ್ದು.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications