ಬಾವಲಿಗಳ ಸಾಮೂಹಿಕ ಸಾವು: ಕೇರಳದಲ್ಲಿ ಹೆಚ್ಚಾಗಿದೆ ಭಯ!
ಕೇರಳ, ಮಾರ್ಚ್ 11: ಕೇರಳದ ಕೋಯಿಕ್ಕೋಡ್ ಜಿಲ್ಲೆಯ ಕರಸ್ಸೇರಿ ಪಂಚಾಯತಿ ವ್ಯಾಪ್ತಿಗೆ ಬರುವ ಕಾರಿಮೂಲದಲ್ಲಿ ಡಜನ್ ಗಟ್ಟಲೆ ಬಾವಲಿಗಳು ಸತ್ತುಬಿದ್ದಿವೆ. ಏಕಾಏಕಿ ಸಾಮೂಹಿಕವಾಗಿ ಬಾವಲಿಗಳು ಮೃತಪಟ್ಟಿರುವುದರಿಂದ ಜನ ಬೆಚ್ಚಿಬಿದ್ದಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳು ಸ್ಯಾಂಪಲ್ ಗಳನ್ನು ಸಂಗ್ರಹಿಸಿದ್ದಾರೆ. ಬಾವಲಿಗಳ ಸಾಮೂಹಿಕ ಸಾವಿಗೆ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.
ಕಳೆದ ವಾರವಷ್ಟೇ ಇದೇ ಕೋಯಿಕ್ಕೋಡ್ ಜಿಲ್ಲೆಯ ಒಂದು ಕೋಳಿ ಫಾರಂ ಮತ್ತು ಒಂದು ಖಾಸಗಿ ನರ್ಸರಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿತ್ತು. ಪರಿಣಾಮ, H5N1 ವೈರಾಣುಗಳನ್ನು ತಡೆಗಟ್ಟಲು 12 ಸಾವಿರ ಕೋಳಿಗಳನ್ನು ಹತ್ಯೆ ಮಾಡಲಾಗಿತ್ತು. ಇದಾದ ಬೆನ್ನಲ್ಲೇ ಬಾವಲಿಗಳು ಸತ್ತು ಬಿದ್ದಿವೆ.

ಎರಡು ವರ್ಷಗಳ ಹಿಂದೆ ಅಂದ್ರೆ 2018 ರಲ್ಲಿ ಕೊಯಿಕ್ಕೋಡ್ ನಲ್ಲಿ ಬಾವಲಿಗಳಿಂದ ಹರಡುವ ನಿಫಾ ವೈರಸ್ ಜ್ವರ ಹಬ್ಬಿತ್ತು. ನಿಫಾ ವೈರಸ್ ನಿಂದಾಗಿ ಕೋಯಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ 18 ಮಂದಿ ಸಾವನ್ನಪ್ಪಿದ್ದರು.
ಈಗ ಬಾವಲಿಗಳ ಸಾಮೂಹಿಕ ಸಾವಿನಿಂದ ಮತ್ತೆಲ್ಲಿ ನಿಫಾ ವೈರಸ್ ಹರಡುತ್ತೋ ಎಂಬ ಭೀತಿ ಜನರಲ್ಲಿ ಕಾಡುತ್ತಿದೆ. ಮೊದಲೇ ಕೇರಳದಲ್ಲಿ ಇಲ್ಲಿಯವರೆಗೂ 14 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಈಗಾಗಲೇ ಕೇರಳದ ನಾಲ್ಕು ಜಿಲ್ಲೆಗಳಲ್ಲಿ 'ಹೆಲ್ತ್ ಎಮರ್ಜೆನ್ಸಿ' ಡಿಕ್ಲೇರ್ ಆಗಿದೆ. ಅದರ ಮಧ್ಯೆ ಬಾವಲಿಗಳು ಸತ್ತು ಬಿದ್ದಿರುವುದರಿಂದ ಜನರು ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications