''ಶ್ರೀಧರನ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ್ದು ಬಹುದೊಡ್ದ ಜೋಕ್''
ಪಾಲಕ್ಕಾಡ್, ಮಾರ್ಚ್ 29: ಕೇರಳ ವಿಧಾನಸಭೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕ್ಷೇತ್ರಗಳ ಪೈಕಿ ಪಾಲಕ್ಕಾಡ್ ಕ್ಷೇತ್ರವೂ ಒಂದು. ಎನ್ಡಿಎ ಅಭ್ಯರ್ಥಿಯಾಗಿ ಇ ಶ್ರೀಧರನ್ ಅವರನ್ನು ಕಣಕ್ಕಿಳಿಸುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಲಾಗಿದೆ. ಆದರೆ, ಇದು ಈ ಚುನಾವಣೆಯಲ್ಲಿ ದೊಡ್ಡ ಹಾಸ್ಯದ ಸಂಗತಿ ಎಂದು ಪತ್ರಕರ್ತ, ಚಿತ್ರಕರ್ಮಿ ರೆಂಜಿ ಪನಿಕಾರ್ ಅಭಿಪ್ರಾಯಪಟ್ಟಿದ್ದಾರೆ.
''ಯಾರನ್ನಾದರೂ ಅತಿಯಾಗಿ ಉಬ್ಬಿಸಿ ನಂತರ ಟುಸ್ ಎನಿಸುವಂತೆ ಮಾಡುವುದಾದರೆ ಅದು ಮೆಟ್ರೋ ಮ್ಯಾನ್ ಇ ಶ್ರೀಧರನ್ ಅವರ ಪರಿಸ್ಥಿತಿಯನ್ನು ಉದಾಹರಿಸಬಹುದು'' ಎಂದು ರೆಂಜಿ ಹೇಳಿದ್ದಾರೆ.
ಅವರು ಯಾವುದೇ ಅದ್ಭುತಗಳನ್ನು ಸೃಷ್ಟಿಸಿಲ್ಲ, ಅಂಕಿ ಅಂಶಗಳು ಅಭಿವೃದ್ಧಿ ಕನಸು ಕಟ್ಟಬಹುದು, ನಿಜವಾಗಿಸುವುದು ಸುಲಭವಲ್ಲ, ನನ್ನ ಮನಸ್ಸು ಇನ್ನೂ ಅವರನ್ನು ಗೆಲ್ಲುವ ಅಭ್ಯರ್ಥಿಯಾಗಿ ಕಾಣಲು ಸಮ್ಮತಿಸುತ್ತಿಲ್ಲ. ಇ ಶ್ರೀಧರನ್ ಸುತ್ತಾ ಭ್ರಮಾಲೋಕ ಸೃಷ್ಟಿಸಲಾಗುತ್ತಿದೆ ಎಂದು ಪನಿಕಾರ್ ವಿಶ್ಲೇಷಿಸಿದ್ದಾರೆ.

ಪಾಲಕ್ಕಾಡ್ ಕ್ಷೇತ್ರದಲ್ಲಿ ಎನ್ಡಿಎ ತನ್ನ ಪ್ರಭಾವವನ್ನು ಉಳಿಸಿಕೊಳ್ಳಬೇಕಾದರೆ ರಾಜಕೀಯ ಅರಿತ ಅಭ್ಯರ್ಥಿಯ ಅಗತ್ಯವಿತ್ತು. ಶ್ರೀಧರನ್ ಗೆಲ್ಲಬಹುದು ಅಥವಾ ಸಿಎಂ ಆಗಬಹುದು ಆದರೆ, ನನ್ನ ಅಭಿಪ್ರಾಯ ಮಾತ್ರ ಬದಲಾಗಲ್ಲ. ವಾಸ್ತವವನ್ನು ಅರಿತವರಿಗೆ ಇಂಥ ಅಭ್ಯರ್ಥಿಗಳು ಹಾಸ್ಯಾಸ್ಪದವಾಗಿ ಕಾಣುತ್ತಾರೆ ಎಂದಿದ್ದಾರೆ.
ಕೇರಳದಲ್ಲಿ 140 ಕ್ಷೇತ್ರಗಳ ಪೈಕಿ ಬಿಜೆಪಿ 115 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಮಿಕ್ಕ 25 ಸ್ಥಾನಗಳು ನಾಲ್ಕು ಮಿತ್ರಪಕ್ಷಗಳಿಗೆ ಹಂಚಿಕೆಯಾಗಿದೆ. ಏಪ್ರಿಲ್ 6 ರಂದು ಕೇರಳದಲ್ಲಿ 140 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಮಲಪ್ಪುರಂ ಉಪ ಚುನಾವಣೆಗೂ ಅಂದೇ ಮತದಾನ ನಿಗದಿಯಾಗಿದೆ. ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.
2020ರಲ್ಲಿ 140 ಸ್ಥಾನಗಳ ವಿಧಾನಸಭೆಯ ಬಲಾಬಲ: ಸಿಪಿಐ (ಎಂ) ನೇತೃತ್ವದ ಎಲ್ ಡಿ ಎಫ್ 93 ಸ್ಥಾನ, ಕಾಂಗ್ರೆಸ್ ನೇತೃತ್ವ ಯುಡಿಎಫ್ 42 ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ 1 ಸ್ಥಾನ ಹೊಂದಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications