ಶಬರಿಮಲೆ ಪ್ರತಿಭಟನೆ: ದೇಗುಲಕ್ಕೆ ಹೋಗದೆ ವಾಪಸ್ಸಾದ ಇಬ್ಬರು ಮಹಿಳೆಯರು

ತಿರುವನಂತಪುರಂ, ಜನವರಿ 16: ಐವತ್ತು ವರ್ಷಕ್ಕಿಂತ ಕೆಳಗಿನ ಇಬ್ಬರು ಮಹಿಳೆಯರು ಅಯ್ಯಪ್ಪಸ್ವಾಮಿ ದೇಗುವ ಪ್ರವೇಶಿಸಲು ಯತ್ನಿಸಿದ ಘಟನೆ ಇಂದು(ಜನವರಿ16) ಬೆಳಗಿನ ಜಾವ ನಡೆದಿದೆ.

ಆದರೆ ನೀಲಿಮಾಲ ಬೆಟ್ಟದಲ್ಲಿ ಮಹಿಳೆಯರನ್ನು ತಡೆದು ಅಲ್ಲಿಯೇ ಪ್ರತಿಭಟನೆ ಆರಂಭಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಣ್ಣೂರಿನ ರೇಶ್ಮಾ ನಿಶಾಂತ್ ಮತ್ತು ಕೊಲ್ಲಮ್ ನ ಶನಿಲಾ ಅವರು ಅಯ್ಯಪ್ಪ ದೇವಸ್ಥಾನಕ್ಕೆ ಹೋಗಲು ಯತ್ನಿಸಿದ್ದರು. ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ಪಾಂಬಾ ತಲುಪಿದ್ದ ಇವರಿಬ್ಬರೂ ಪೊಲೀಸರ ರಕ್ಷಣೆಯೊಂದಿಗೆ ಅಯ್ಯಪ್ಪನ ಸನ್ನಿಧಿಗೆ ಹೋಗಲು 4.30ಕ್ಕೆ ಬೆಟ್ಟ ಹತ್ತಲು ಆರಂಭಿಸಿದ್ದರು.

Early Morning Clashes At Sabarimala As 2 Women Attempt To Enter Temple

ನೀಲಿಮಾಗೆ ತಲುಪಿದಾಗ ಅಯ್ಯಪ್ಪನ ದರ್ಶನ ಮಾಡಿ ಹಿಂತಿರುಗುತ್ತಿದ್ದ ಇಬ್ಬರು ಇಬ್ಬರನ್ನೂ ತಡೆದು ಅಯ್ಯಪ್ಪನ ಭಜನೆ ಮತ್ತು ಮಂತ್ರವನ್ನು ಪಠಿಸಲಾರಂಭಿಸಿದರು.

ಶಬರಿಮಲೆಗೆ ಇಬ್ಬರು ಮಹಿಳೆಯರು ಹೋಗಲು ಯತ್ನಿಸುತ್ತಿದ್ದಾರೆ ಎಂಬ ವಿಷಯ ಹರಡುತ್ತಿದ್ದಂತೆ ಪಂಬಾ ಮತ್ತು ಸನ್ನಿಧಾನದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇಂದು ನಸುಕಿನ ಜಾವ 7 ಮಂದಿ ಮಹಿಳೆಯರು ಬೆಟ್ಟ ಹತ್ತಲೆಂದು ಬಂದಾಗ ಅವರನ್ನು ತಂಡ ತಂಡವಾಗಿ ಹೋಗುವಂತೆ ಮತ್ತು ರಕ್ಷಣೆ ಭದ್ರತೆ ನೀಡುವುದಾಗಿ ಪೊಲೀಸರು ಭರವಸೆ ನೀಡಿದ್ದರು.

ತಕ್ಷಣವೇ ಶಬರಿಮಲೆ ಕರ್ಮ ಸಮಿತಿಯ ಸದಸ್ಯರು ಒಟ್ಟು ಸೇರಿ ಮಹಿಳೆಯರು ಮುಂದೆ ಪ್ರಯಾಣ ಬೆಳೆಸದಂತೆ ತಡೆದು ಪ್ರತಿಭಟನೆ ನಡೆಸಲು ಆರಂಭಿಸಿದರು. ಆಗ ಇಬ್ಬರೂ ರಸ್ತೆಯಲ್ಲಿಯೇ ಕುಳಿತು ಪ್ರತಿಭಟನಾಕಾರರನ್ನು ತೆರವುಗೊಳಿಸಿ ತಮಗೆ ಅಯ್ಯಪ್ಪನ ಸನ್ನಿಧಿಗೆ ತೆರಳಲು ಅನುವು ಮಾಡಿಕೊಡಬೇಕೆಂದು ಪಟ್ಟು ಹಿಡಿದರು.

28 ವರ್ಷದ ಶನಲಾ ಸಾಜೇಶ್ ಮತ್ತು 30 ವರ್ಷದ ರೇಷ್ಮಾ ನಿಶಾಂತ್ ಅವರನ್ನು ಪಂಬಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+