ಪುನರ್ವಸತಿ ಕೇಂದ್ರದಲ್ಲಿ ವಿಷಾಹಾರ ಸೇವನೆ: 30 ನಿರಾಶ್ರಿತರು ಅಸ್ವಸ್ಥ
ಕಲ್ಪಟ್ಟ, ಆಗಸ್ಟ್ 12: ಪ್ರವಾಹದಿಂದ ತತ್ತರಿಸಿರುವ ಕೇರಳದಲ್ಲಿ ಮತ್ತೊಂದು ಸಮಸ್ಯೆ ಎದುರಾಗಿದೆ. ವಯನಾಡಿನ ಪುನರ್ವಸತಿ ಕೇಂದ್ರದಲ್ಲಿ ವಿಷಯುಕ್ತ ಆಹಾರ ಸೇವಿಸಿ 30 ಮಂದಿ ಅಸ್ವಸ್ಥರಾಗಿದ್ದಾರೆ. ಇದು ಅಲ್ಲಿನ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ನಿರಾಶ್ರಿತರಲ್ಲಿ ಭೀತಿ ಮೂಡಿಸಿದೆ.
ವಯನಾಡ್ ಜಿಲ್ಲೆಯ ನಿರ್ವಾರಂ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಸ್ಥಾಪಿಸಲಾಗಿರುವ ಪುನರ್ವಸತಿ ಕೇಂದ್ರದಲ್ಲಿ ಈ ದುರಂತ ನಡೆದಿದೆ. ವಿಷಯುಕ್ತ ಆಹಾರ ಸೇವಿಸಿದ 30 ಮಂದಿಯ ಆರೋಗ್ಯ ಹದಗೆಟ್ಟಿದೆ. ಅವರನ್ನು ಮಾನಂತವಾಡಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಲಯಾಳ ಮನೋರಮಾ ಪತ್ರಿಕೆ ವರದಿ ಮಾಡಿದೆ.
ಕೇರಳದಲ್ಲಿ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 85ಕ್ಕೆ ಏರಿದೆ. 2,50,638 ಮಂದಿ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ಒಟ್ಟು 1,326 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ವಯನಾಡು ಜಿಲ್ಲೆಯ ಪ್ರವಾಹ ಪೀಡಿತ ಸ್ಥಳಗಳಿಗೆ ಸೋಮವಾರ ಭೇಟಿ ನೀಡಿ ಜನರಿಗೆ ಸಾಂತ್ವನ ಹೇಳಿದರು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರವಾಹಪೀಡಿತ ವಯನಾಡು ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಮಂಗಳವಾರ ಭೇಟಿ ನೀಡಲಿದ್ದಾರೆ.

'ನಾನು ಪ್ರಧಾನಿಯೊಂದಿಗೆ ಮಾತನಾಡಿದ್ದು, ಪ್ರವಾಹ ಸಂತ್ರಸ್ತರ ಅನುಕೂಲಕ್ಕೆ ಕೇಂದ್ರ ಸರ್ಕಾರ ಸಂಪೂರ್ಣ ಸಹಕಾರ ನೀಡಬೇಕು ಎಂದು ಒತ್ತಾಯಿಸಿದ್ದೇನೆ. ಉಳಿದದ್ದು ಅವರಿಗೆ ಬಿಟ್ಟಿದ್ದು' ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications