ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ಮೆಟ್ರೋ ಮ್ಯಾನ್ ಶ್ರೀಧರನ್
ತಿರುವನಂತಪುರಂ, ಫೆ. 26: ಮೆಟ್ರೋ ಮ್ಯಾನ್ ಎಂದೇ ಖ್ಯಾತರಾಗಿರುವ ಇ ಶ್ರೀಧರನ್ ಅವರು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಸೇರ್ಪಡೆಯಾಗಿದ್ದಾರೆ. ಕೇಂದ್ರ ಸಚಿವ ಆರ್ ಕೆ ಸಿಂಗ್, ಪ್ರಹ್ಲಾದ್ ಜೋಶಿ ಅವರು ಶ್ರೀಧರನ್ ಅವರನ್ನು ಸ್ವಾಗತಿಸಿದ್ದಾರೆ.
ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದರೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು, ಸಾಲದ ಸುಳಿಯಿಂದ ರಾಜ್ಯ ಹೊರ ಬರಲು ಬೇಕಾದ ಮಾರ್ಗಗಳನ್ನು ಕಂಡುಕೊಳ್ಳಲಾಗುವುದು ಎಂದು ಶ್ರೀಧರನ್ ಹೇಳಿದ್ದಾರೆ.
ಎಡಪಕ್ಷದಿಂದ ಬಿಜೆಪಿಗೆ 98 ಮಂದಿ
ಶ್ರೀಧರನ್ ಸೇರ್ಪಡೆ ಬೆನ್ನಲ್ಲೇ ಎಡಪಕ್ಷದಿಂದ ಸುಮಾರು 98 ಸದಸ್ಯರು ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಸ್ಥಳೀಯ ಘಟಕಗಳಲ್ಲಿ ಬಲ ಹೆಚ್ಚಳಗೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಈ ಬಗ್ಗೆ ಹೆಚಿನ ಮಾಹಿತಿ ನೀಡಿದ ಬಿಜೆಪಿ ಮುಖಂಡ ವಿವಿ ರಾಜೇಶ್, ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಸೂಕ್ತ ಸ್ಥಾನಮಾನ ನೀಡಲಾಗುತ್ತದೆ. ಸ್ಥಳೀಯ ಕಮ್ಯೂನಿಸ್ಟ್ ಪಾರ್ಟಿ ಕಚೇರಿಯನ್ನು ಬಿಜೆಪಿ ಕಚೇರಿಯಾಗಿ ಶೀಘ್ರದಲ್ಲೇ ಬದಲಾಯಿಸಲಾಗುವುದು ಎಂದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಮುಕುಲ್ ಪ್ರಭಾಕರನ್ ಅವರ ನೇತೃತ್ವದಲ್ಲಿ 98 ಮಂದಿ ಸಿಪಿಐ (ಎಂ) ಸದಸ್ಯರು ಬಿಜೆಪಿಗೆ ಸೇರಿದ್ದಾರೆ.
ಪ್ರತಿಯೊಬ್ಬ ಮಲಯಾಳಿಗಳ ಮೇಲೆ 1.2 ಲಕ್ಷ ಸಾಲದ ಹೊರೆ ಇದೆಯೆಂದರೆ ಸರ್ಕಾರ ಯಾವ ರೀತಿ ದಿವಾಳಯಾಗಿದೆ ಎಂಬುದನ್ನು ಯೋಚಿಸಿ, ಇದಕ್ಕೆ ತಕ್ಷಣವೇ ಪರಿಹಾರ ಕಂಡುಕೊಳ್ಳಬೇಕಿದೆ. ಇದಕ್ಕಾಗಿ ಬಿಜೆಪಿ ಅಧಿಕಾರಕ್ಕೆ ಬರುವುದು ಮುಖ್ಯವಾಗಿದೆ ಎಂದರು.
ಎಲ್ ಡಿ ಎಫ್, ಕಾಂಗ್ರೆಸ್ ನೇತೃತ್ವದ ಯುಡಿಎಫ್ ಹಲವು ವರ್ಷಗಳಿಂದ ಆಡಳಿತ ನಡೆಸುತ್ತಿದ್ದು ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ. ಬಿಜೆಪಿ ಬಯಸಿದರೆ ನಾನು ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ ಎಂದರು ಹೇಳಿದರು. ಸಿಎಂ ಆಗಲು ಕೂಡಾ ಸಿದ್ಧ, ನನ್ನ ಕನಸಿನ ಕೇರಳಕ್ಕಾಗಿ ನಾನು ರೂಪಿಸಿರುವ ಯೋಜನೆಗಳು ಸಾಕಾರಗೊಳ್ಳಬೇಕಾದರೆ ಉನ್ನತ ಹುದ್ದೆಯಲ್ಲಿರಬೇಕಾಗುತ್ತದೆ. ನನ್ನ ವೃತ್ತಿಗೆ ಸಂಬಂಸಿದ ನಿಗದಿತ ಕಾರ್ಯಕ್ರಮಗಳೆಲ್ಲವೂ ಈ ತಿಂಗಳು ಮುಕ್ತಾಯವಾಗಲಿದ್ದು, ರಾಜಕೀಯದ ಹಾದಿಯ ಮೂಲಕ ಕೇರಳದ ಅಭಿವೃದ್ಧಿಗಾಗಿ ಪುನರ್ ನಿರ್ಮಾಣಕ್ಕಾಗಿ ಶ್ರಮಿಸಲು ಬಯಸಿದ್ದೇನೆ ಎಂದು ಹೇಳಿದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications