ರಾಹುಲ್ ಗಾಂಧಿ ವಿರುದ್ಧ ಅವಹೇಳನಾಕಾರಿ ಪದ ಬಳಸಿದ ಮಾಜಿ ಸಂಸದ
ಇಡುಕ್ಕಿ, ಮಾರ್ಚ್ 30: ಕೇರಳದ ಇಡುಕ್ಕಿ ಲೋಕಸಭೆ ಕ್ಷೇತ್ರದ ಮಾಜಿ ಸಂಸದ ಜಾಯ್ಸ್ ಜಾರ್ಜ್ ವಯನಾಡು ಕ್ಷೇತ್ರದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಾಕಾರಿ ಪದ ಬಳಸುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ಮಹಿಳೆಯರು ರಾಹುಲ್ ಗಾಂಧಿ ಕುರಿತು ಬಹಳ ಜಾಗ್ರತೆಯಿಂದ ಇರಬೇಕು ಎಂದು ಅವರು ಹೇಳಿರುವುದು ಕಾಂಗ್ರೆಸ್ಸಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಉಡುಂಬಂಚೊಲ ಕ್ಷೇತ್ರದ ಎಲ್ಡಿಎಫ್ ಅಭ್ಯರ್ಥಿ, ಸಚಿವ ಎಂಎಂ ಮಣಿ ಪರ ಎರೆಟ್ಟಯಾರ್ನಲ್ಲಿ ಪ್ರಚಾರ ನಡೆಸುತ್ತಿದ್ದ ಜಾಯ್ಸ್ ಜಾರ್ಜ್, 'ರಾಹುಲ್ ಗಾಂಧಿ ಮಹಿಳಾ ಕಾಲೇಜುಗಳಿಗೆ ಮಾತ್ರವೇ ಭೇಟಿ ನೀಡುತ್ತಾರೆ. ತಮ್ಮ ಸ್ನಾಯುಗಳನ್ನು ಹೇಗೆ ಬಾಗಿಸಬೇಕು ಎಂದು ಅವರು ಯುವತಿಯರಿಗೆ ಹೇಳಿಕೊಡುತ್ತಾರೆ' ಎಂದಿದ್ದಾರೆ. ರಾಹುಲ್ ಗಾಂಧಿ ಅವಿವಾಹಿತರಾಗಿರುವುದರಿಂದ ತೊಂದರೆ ಸೃಷ್ಟಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.
ರಾಹುಲ್ ಗಾಂಧಿ ಒಬ್ಬ ಬ್ಯಾಚುಲರ್. ಅವರು ಕಾಲೇಜು ಕ್ಯಾಂಪಸ್ಗಳಲ್ಲಿ ಯುವತಿಯರ ಜತೆ ಮಾತ್ರ ಸಂವಾದ ನಡೆಸಲು ಹೋಗುತ್ತಾರೆ. ಅವರೊಬ್ಬ ತೊಂದರೆ ಸೃಷ್ಟಿಗಾರ. ಹೀಗಾಗಿ ಮಹಿಳೆಯರು ಅವರ ಬಗ್ಗೆ ಎಚ್ಚರವಾಗಿರಬೇಕು ಎಂದು ಜಾಯ್ಸ್ ಹೇಳಿದ್ದಾರೆ.

ಈ ಹೇಳಿಕೆ ಕಾಂಗ್ರೆಸ್ಸಿಗರನ್ನು ಕೆರಳಿಸಿದೆ. ಜಾಯ್ಸ್ ಅವರು ತಮ್ಮದೇ ನಡತೆಯನ್ನು ತಪ್ಪಾಗಿ ಬೇರೆಯವರಿಗೂ ಅನ್ವಯಿಸಿರಬಹುದು ಎಂದು ಇಡುಕ್ಕಿ ಸಂಸದ ಡೀನ್ ಕುರಿಯಾಕೊಸೆ ಟೀಕಿಸಿದ್ದಾರೆ. 'ಜಾಯ್ಸ್ ಒಬ್ಬ ಅಶ್ಲೀಲ ಮನಸಿನ ಕೊಳಕು ವ್ಯಕ್ತಿ. ಈ ಮಟ್ಟದಲ್ಲಿ ರಾಹುಲ್ ಗಾಂಧಿ ಅವರನ್ನು ಟೀಕಿಸಲು ಅವರಿಗೆ ಯಾವ ಅರ್ಹತೆ ಇದೆ?' ಎಂದು ಅವರು ಪ್ರಶ್ನಿಸಿದ್ದಾರೆ.
ಮಣಿ ಅವರನ್ನು ಓಲೈಸಲು ಜಾಯ್ಸ್ ಪ್ರಯತ್ನಿಸುತ್ತಿದ್ದಾರೆ. ಮಣಿ ಕೂಡ ಈ ಹಿಂದೆ ಹೀಗೆಯೇ ಕೀಳು ಭಾಷೆಗಳನ್ನು ಬಳಸಿದ್ದರು. ಜಾಯ್ಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Recommended Video
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications