ಕೇರಳ: ಬಿಷಪ್ ವಿರುದ್ಧ ಪ್ರತಿಭಟಿಸಿದ್ದ ಕ್ರೈಸ್ತ ಸನ್ಯಾಸಿನಿಯರ ವರ್ಗಾವಣೆ
ತಿರುವನಂತಪುರಂ, ಜನವರಿ 16: ಅತ್ಯಾಚಾರ ಆರೋಪ ಹೊತ್ತಿರುವ ಕ್ಯಾಥೊಲಿಕ್ ಬಿಷಪ್ ಜಲಂಧರ್ ಫ್ರಾಂಕೊ ಮುಳಕ್ಕಲ್ ಅವರ ವಿರುದ್ಧ ಪ್ರತಿಭಟನೆ ಮಾಡಿದ್ದ ನಾಲ್ವರು ಕ್ರೈಸ್ತ ಸನ್ಯಾಸಿನಿಯರನ್ನು ಬೇರೆ ಚರ್ಚ್ಗೆ ವರ್ಗಾವಣೆ ಮಾಡಲಾಗಿದೆ.
ಕ್ಯಾಥೊಲಿಕ್ ಚರ್ಚ್ ಆ ನಾಲ್ಕು ಕ್ರೈಸ್ತ ಸನ್ಯಾಸಿನಿಯರನ್ನು ತನ್ನ ಕುರವಿಲಂಗದ್ ಚರ್ಚ್ನಿಂದ ವರ್ಗಾವಣೆ ಮಾಡಿದೆ. ಇದೇ ಅತ್ಯಾಚಾರ ವಿರುದ್ಧ ಪ್ರತಿಭಟನೆಯಲ್ಲಿ ಮುನ್ನೆಲೆಯಲ್ಲಿರುವ ಕ್ರೈಸ್ತ ಸನ್ಯಾಸಿನಿ ಲ್ಯೂಸಿ ಕಲಪುರ ಅವರಿಗೆ ಎಚ್ಚರಿಕೆ ನೀಡಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.
ಕ್ರೈಸ್ತ ಸನ್ಯಾಸಿನಿ ಅಲ್ಪಿ ಪಲ್ಲಸೆರ್ಲಿ, ಅನುಪಮಾ ಕೆಲಮಂಗಲತುವೇಲಿಯಿಲ್, ಜೋಸೆಫೈನ್ ವೆಲ್ಲೂನಿಕ್ಕಲ್, ಅಂಕಿತಾ ಉರಂಬಿಲ್ ಅವರುಗಳು ಕಳೆದ ವರ್ಷ ಕೇರಳ ಹೈಕೋರ್ಟ್ ಎದುರು ಫ್ರಾಂಕೊ ಮುಲಕ್ಕಲ್ ವಿರುದ್ಧ ಪ್ರತಿಭಟನೆ ಮಾಡಿ ಅವರ ಬಂಧನಕ್ಕೆ ಒತ್ತಾಯಿಸಿದ್ದರು.

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧ ಪ್ರತಿಭಟನೆಯಲ್ಲಿ ಮುನ್ನಲೆಯಲ್ಲಿರುವ ಲ್ಯೂಸಿ ಕಲಪುರ ಅವರಿಗೆ ಕೆಲವು ದಿನಗಳ ಹಿಂದಷ್ಟೆ ಕ್ಯಾಥೊಲಿಕ್ ಚರ್ಚ್ ಎಚ್ಚರಿಕೆ ನೀಡಿತ್ತು. ಅವರು ಈ ಪ್ರಕರಣದ ಬಗ್ಗೆ ಟಿವಿ ಚರ್ಚೆಯಲ್ಲಿ ಭಾಗವಹಿಸಿದ್ದರು, ಪತ್ರಿಕೆಗಳಿಗೆ ಲೇಖನಗಳನ್ನು ಬರೆದಿದ್ದರು. ಹಾಗಾಗಿ ಅವರಿಗೆ ಚರ್ಚ್ ಎಚ್ಚರಿಕೆ ರವಾನಿಸಿತ್ತು.
ಅನುಪಮ ಅವರನ್ನು ಪಂಜಾಬ್ಗೆ ಹೋಗಲು ನಿರ್ದೇಶನ ನೀಡಲಾಗಿದೆ. ಅಂಕಿತಾ ಅವರಿಗೆ ಕಣ್ಣೂರಿಗೆ ವರ್ಗಾಯಿಸಲಾಗಿದೆ , ಆಲ್ಫಿ ಅವರನ್ನು ಬಿಹಾರಕ್ಕೆ, ಜೊಸೆಫೈನ್ ಅವರನ್ನು ಜಾರ್ಖಂಡ್ಗೆ ವರ್ಗ ಮಾಡಲಾಗಿದೆ. ಫ್ರಾಂಕೊ ಮುಲಕ್ಕಲ್ ವಿರುದ್ಧದ ದನಿಗಳನ್ನು ಹತ್ತಿಕ್ಕಲು ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಬಿಷಪ್ ಫ್ರಾಂಕೊ ಮುಲಕ್ಕಲ್ ಅವರು 2014 ರಿಂದ 2016 ರವರೆಗೆ ಕ್ರೈಸ್ತ ಸನ್ಯಾಸಿನಿ ಒಬ್ಬರ ಮೇಲೆ ಸತತ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಇದೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಮೂರು ವಾರಗಳ ಕಾಲ ಜೈಲು ವಾಸ ಸಹ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
ಈ ಪ್ರಕರಣವು ಕೇರಳ ಸೇರಿದಂತೆ ರಾಷ್ಟ್ರದಾದ್ಯಂತ ಚರ್ಚೆ ಹುಟ್ಟುಹಾಕಿತ್ತು. ಕೇರಳದಲ್ಲಿ ಬಿಷಪ್ ಫ್ರಾಂಕೊ ಪರ ಮತ್ತು ವಿರೋಧ ಪ್ರತಿಭಟನೆಗಳು ನಡೆದಿದ್ದವು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications