ಕೇರಳ: ಬಿಷಪ್ ವಿರುದ್ಧ ಪ್ರತಿಭಟಿಸಿದ್ದ ಕ್ರೈಸ್ತ ಸನ್ಯಾಸಿನಿಯರ ವರ್ಗಾವಣೆ
ತಿರುವನಂತಪುರಂ, ಜನವರಿ 16: ಅತ್ಯಾಚಾರ ಆರೋಪ ಹೊತ್ತಿರುವ ಕ್ಯಾಥೊಲಿಕ್ ಬಿಷಪ್ ಜಲಂಧರ್ ಫ್ರಾಂಕೊ ಮುಳಕ್ಕಲ್ ಅವರ ವಿರುದ್ಧ ಪ್ರತಿಭಟನೆ ಮಾಡಿದ್ದ ನಾಲ್ವರು ಕ್ರೈಸ್ತ ಸನ್ಯಾಸಿನಿಯರನ್ನು ಬೇರೆ ಚರ್ಚ್ಗೆ ವರ್ಗಾವಣೆ ಮಾಡಲಾಗಿದೆ.
ಕ್ಯಾಥೊಲಿಕ್ ಚರ್ಚ್ ಆ ನಾಲ್ಕು ಕ್ರೈಸ್ತ ಸನ್ಯಾಸಿನಿಯರನ್ನು ತನ್ನ ಕುರವಿಲಂಗದ್ ಚರ್ಚ್ನಿಂದ ವರ್ಗಾವಣೆ ಮಾಡಿದೆ. ಇದೇ ಅತ್ಯಾಚಾರ ವಿರುದ್ಧ ಪ್ರತಿಭಟನೆಯಲ್ಲಿ ಮುನ್ನೆಲೆಯಲ್ಲಿರುವ ಕ್ರೈಸ್ತ ಸನ್ಯಾಸಿನಿ ಲ್ಯೂಸಿ ಕಲಪುರ ಅವರಿಗೆ ಎಚ್ಚರಿಕೆ ನೀಡಿದ ಕೆಲವೇ ದಿನಗಳಲ್ಲಿ ಈ ಘಟನೆ ನಡೆದಿದೆ.
ಕ್ರೈಸ್ತ ಸನ್ಯಾಸಿನಿ ಅಲ್ಪಿ ಪಲ್ಲಸೆರ್ಲಿ, ಅನುಪಮಾ ಕೆಲಮಂಗಲತುವೇಲಿಯಿಲ್, ಜೋಸೆಫೈನ್ ವೆಲ್ಲೂನಿಕ್ಕಲ್, ಅಂಕಿತಾ ಉರಂಬಿಲ್ ಅವರುಗಳು ಕಳೆದ ವರ್ಷ ಕೇರಳ ಹೈಕೋರ್ಟ್ ಎದುರು ಫ್ರಾಂಕೊ ಮುಲಕ್ಕಲ್ ವಿರುದ್ಧ ಪ್ರತಿಭಟನೆ ಮಾಡಿ ಅವರ ಬಂಧನಕ್ಕೆ ಒತ್ತಾಯಿಸಿದ್ದರು.

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ಧ ಪ್ರತಿಭಟನೆಯಲ್ಲಿ ಮುನ್ನಲೆಯಲ್ಲಿರುವ ಲ್ಯೂಸಿ ಕಲಪುರ ಅವರಿಗೆ ಕೆಲವು ದಿನಗಳ ಹಿಂದಷ್ಟೆ ಕ್ಯಾಥೊಲಿಕ್ ಚರ್ಚ್ ಎಚ್ಚರಿಕೆ ನೀಡಿತ್ತು. ಅವರು ಈ ಪ್ರಕರಣದ ಬಗ್ಗೆ ಟಿವಿ ಚರ್ಚೆಯಲ್ಲಿ ಭಾಗವಹಿಸಿದ್ದರು, ಪತ್ರಿಕೆಗಳಿಗೆ ಲೇಖನಗಳನ್ನು ಬರೆದಿದ್ದರು. ಹಾಗಾಗಿ ಅವರಿಗೆ ಚರ್ಚ್ ಎಚ್ಚರಿಕೆ ರವಾನಿಸಿತ್ತು.
ಅನುಪಮ ಅವರನ್ನು ಪಂಜಾಬ್ಗೆ ಹೋಗಲು ನಿರ್ದೇಶನ ನೀಡಲಾಗಿದೆ. ಅಂಕಿತಾ ಅವರಿಗೆ ಕಣ್ಣೂರಿಗೆ ವರ್ಗಾಯಿಸಲಾಗಿದೆ , ಆಲ್ಫಿ ಅವರನ್ನು ಬಿಹಾರಕ್ಕೆ, ಜೊಸೆಫೈನ್ ಅವರನ್ನು ಜಾರ್ಖಂಡ್ಗೆ ವರ್ಗ ಮಾಡಲಾಗಿದೆ. ಫ್ರಾಂಕೊ ಮುಲಕ್ಕಲ್ ವಿರುದ್ಧದ ದನಿಗಳನ್ನು ಹತ್ತಿಕ್ಕಲು ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಬಿಷಪ್ ಫ್ರಾಂಕೊ ಮುಲಕ್ಕಲ್ ಅವರು 2014 ರಿಂದ 2016 ರವರೆಗೆ ಕ್ರೈಸ್ತ ಸನ್ಯಾಸಿನಿ ಒಬ್ಬರ ಮೇಲೆ ಸತತ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಇದೆ. ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅವರು ಮೂರು ವಾರಗಳ ಕಾಲ ಜೈಲು ವಾಸ ಸಹ ಅನುಭವಿಸಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.
ಈ ಪ್ರಕರಣವು ಕೇರಳ ಸೇರಿದಂತೆ ರಾಷ್ಟ್ರದಾದ್ಯಂತ ಚರ್ಚೆ ಹುಟ್ಟುಹಾಕಿತ್ತು. ಕೇರಳದಲ್ಲಿ ಬಿಷಪ್ ಫ್ರಾಂಕೊ ಪರ ಮತ್ತು ವಿರೋಧ ಪ್ರತಿಭಟನೆಗಳು ನಡೆದಿದ್ದವು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications