ಶಬರಿಮಲೆ ದೇವಾಲಯದಲ್ಲಿ ಭಾರೀ ಅಪಚಾರ: ಕ್ಷಮೆಯಾಚಿಸಿದ ಪೊಲೀಸ್
Recommended Video

ತಿರುವನಂತಪುರಂ, ಡಿ 19: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಇದುವರೆಗಿನ ಇತಿಹಾಸದಲ್ಲಿ ಎಂದೂ ನಡೆಯದ ಅಪಚಾರ ನಡೆದಿದ್ದು, ಆದ ಘಟನೆಗೆ ಪೊಲೀಸ್ ಮುಖ್ಯಸ್ಥರು ಭಕ್ತರಲ್ಲಿ ಕ್ಷಮೆಯಾಚಿಸಿದ್ದಾರೆ.
ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಸಂಬಂಧ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ನಂತರ, ಭಕ್ತರ ಭಾರೀ ಪ್ರತಿಭಟನೆ ಮತ್ತು ವಿರೋಧದ ನಡುವೆ, ಹಲವು ಮಹಿಳೆಯರು ದೇವಾಲಯ ಪ್ರವೇಶಕ್ಕೆ ಪ್ರಯತ್ನಿಸಿದ್ದರು.
ಎರಡು ತಿಂಗಳ ಮಕರವಿಳಕ್ಕು ಋತುವಿನ ಪೂಜೆಗಾಗಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ನವೆಂಬರ್ ಹದಿನಾರರಂದು ತೆರೆದಿತ್ತು. ಈ ಹಿಂದೆ, ತೀವ್ರ ಹೋರಾಟದ ನಂತರ ಮುಂಬೈನ ಹಾಜೀ ಆಲಿದರ್ಗಾಗೆ ಪ್ರವೇಶಿಸಿದ್ದ ಭೂಮಾತಾ ಬ್ರಿಗೇಡಿನ ತೃಪ್ತಿ ದೇಸಾಯಿ, ಶಬರಿಮಲೆ ದೇವಾಲಯಕ್ಕೂ ಪ್ರವೇಶಿಸಲು ಆಗಮಿಸಿದ್ದರು.
ಆದರೆ, ಅಯ್ಯಪ್ಪ ಭಕ್ತರ ಭಾರೀ ಪ್ರತಿಭಟನೆಯಿಂದ ತೃಪ್ತಿ ದೇವಾಲಯ ಪ್ರವೇಶಿಸಲು ಸಾಧ್ಯವಾಗದೇ ವಾಪಸ್ ತೆರಳಿದ್ದರು. ಇದಕ್ಕೂ ಮುನ್ನ ರೆಹನಾ ಫಾತಿಮಾ ಮತ್ತು ಮತ್ತಿಬ್ಬರು ದೇವಾಲಯ ಪ್ರವೇಶಿಸಲು ಸಾಧ್ಯವಾಗದೇ ಹಿಂದಿರುಗಿದ್ದರು.
ಈ ಎಲ್ಲಾ ಘಟನೆಗಳ ನಡುವೆ, ಮಂಗಳವಾರ (ಡಿ 18) ನಡೆದ ಎರಡು ವಿದ್ಯಮಾನಗಳು ದೇವಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಡೆದು, ಭಕ್ತರ ಆಕ್ರೋಶದ ನಂತರ ಪೊಲೀಸರು ಕ್ಷಮೆಯಾಚಿಸಿದ ಘಟನೆ ನಡೆದಿದೆ.

ನಾಲ್ವರು ತೃತೀಯ ಲಿಂಗಿಗಳು
ನಾಲ್ವರು ತೃತೀಯ ಲಿಂಗಿಗಳು ಶಬರಿಮಲೆ ದೇವಾಲಯ ಪ್ರವೇಶಿಸಲು ಸೋಮವಾರವೇ ಪಂಪಾ ಬಳಿ ಆಗಮಿಸಿದ್ದರು. ಲಿಂಗದ ಗೊಂದಲದಿಂದ ದೇವಾಲಯ ಪ್ರವೇಶಿಸಲು ಅನುಮತಿ ನಿರಾಕರಿಸಲಾಗಿತ್ತು. ಕಪ್ಪುಸೀರೆ ಉಟ್ಟುಕೊಂಡು ಬಂದಿದ್ದ ಇವರನ್ನು ದೇವಾಲಯದ ಒಳಗೆ ಪ್ರವೇಶಿಸಲು ಬಿಡಬಾರದೆಂದು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆಯೊಡ್ದಿದ್ದರು.

ನಮ್ಮ ಜೀವನ ಸಾರ್ಥಕವಾಯಿತೆಂದು ಧನ್ಯವಾದ
ಕೊನೆಗೆ, ಅನನ್ಯ, ತೃಪ್ತಿ, ರೆಂಜುಮೋಳ್ ಹಾಗೂ ಅವಂತಿಕಾ ಎಂಬ ತೃತೀಯ ಲಿಂಗಿಗಳು ಶಬರಿಮಲೆಯ ಸಂಪ್ರದಾಯದಂತೆ ಕಪ್ಪು ಸೀರೆ ಧರಿಸಿ, ಇರುಮುಡಿ ಹೊತ್ತು ಶಬರಿಮಲೆ ಬೆಟ್ಟ ಹತ್ತಿ, ಹದಿನೆಂಟು ಮೆಟ್ಟಲುಗಳ ಮೂಲಕ, ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಅಯ್ಯಪ್ಪನ ದರ್ಶನ ಮಾಡಿದ ಈ ನಾಲ್ವರು, ನಮ್ಮ ಜೀವನ ಸಾರ್ಥಕವಾಯಿತೆಂದು ಧನ್ಯವಾದ ಅರ್ಪಿಸಿದ್ದಾರೆ.

ದೇಗುಲದ ಪ್ರಧಾನ ಅರ್ಚಕರ (ತಂತ್ರಿಗಳು)
ದೇಗುಲದ ಪ್ರಧಾನ ಅರ್ಚಕರ (ತಂತ್ರಿಗಳು) ಅನುಮತಿಯ ಮೇರೆಗೆ ತೃತೀಯ ಲಿಂಗಿಗಳು ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಇವರಿಗೆ, ಬಂದೋಬಸ್ತ್ ನೀಡುವ ವೇಳೆ, ಪೊಲೀಸರಿಂದ ಅಪಚಾರ ನಡೆದಿದೆ ಎಂದು ಆ ವೇಳೆ ಭಕ್ತರು ಭಾರೀ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದೇ ಮೊದಲ ಬಾರಿಗೆ ಪೊಲೀಸರು ಬೂಟು, ಲಾಟಿ ಹಾಗೂ ಬೆಲ್ಟ್ ಧರಿಸಿ ಮೇಲು ಸೆತುವೆ ಬಳಿ ತೆರಳುವ ಮೂಲಕ ಆಚಾರ ಉಲ್ಲಂಘಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಪೊಲೀಸರು ಬೂಟು ಧರಿಸಿರುವುದು ಭಕ್ತರ ಅಸಮಾಧಾನಕ್ಕೆ ಕಾರಣ
ಗರ್ಭಗುಡಿಯ ಅನತಿ ದೂರದವರೆಗೂ ಪೊಲೀಸರು ಬೂಟು ಧರಿಸಿರುವುದು ಭಕ್ತರ ಅಸಮಾಧಾನಕ್ಕೆ ಕಾರಣವಾಗಿದೆ. ನಮ್ಮ ಭಾವನೆಗಳ ಜೊತೆ ಆಟವಾಡುತ್ತಿದ್ದೀರಾ ಎನ್ನುವ ಕೂಗು, ನಂತರ ಭಾರೀ ಪ್ರತಿಭಟನೆಗೆ ತಿರುಗುತ್ತಿದ್ದಂತೆಯೇ, ಕರ್ತವ್ಯದಲ್ಲಿದ್ದ ವಿಶೇಷ ಪೊಲೀಸ್ ಅಧಿಕಾರಿ ಜಯದೇವನ್, 'ಪೊಲೀಸರಿಂದ ತಪ್ಪಾಗಿದೆ', ದಯವಿಟ್ಟು ಪ್ರತಿಭಟನೆ ಹಿಂದಕ್ಕೆ ಪಡೆಯಿರಿ ಎಂದು ಕ್ಷಮೆಯಾಚಿಸಿ, ದೇವಾಲಯದ ಆವರಣದಿಂದ ಪೊಲೀಸರನ್ನು ವಾಪಸ್ ಕಳುಹಿಸಿದ್ದಾರೆ.

ಪುಣೆಯಿಂದ ಕೊಚ್ಚಿನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ತೃಪ್ತಿ ದೇಸಾಯಿ
ಈ ಹಿಂದೆ, ಅಯ್ಯಪ್ಪನ ದರ್ಶನಕ್ಕೆ ಪುಣೆಯಿಂದ ಕೊಚ್ಚಿನ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ತೃಪ್ತಿ ದೇಸಾಯಿಗೆ ಅಯ್ಯಪ್ಪ ಭಕ್ತರು ದಿಗ್ಬಂಧನ ಹಾಕಿದ್ದರು. ವಿಮಾನ ನಿಲ್ದಾಣದಲ್ಲಿ ಭಾರೀ ಸಂಖ್ಯೆಯಲ್ಲಿ ಅಯ್ಯಪ್ಪ ಭಕ್ತರು ಜಮಾಯಿಸಿ, ಏರ್ಪೋರ್ಟ್ ನಲ್ಲೇ ಅಯ್ಯಪ್ಪನ ಭಜನೆಯನ್ನು ಮಾಡಿದ್ದರು. ಕೊನೆಗೆ, ಏರ್ಪೋರ್ಟಿನಿಂದ ಕದಲಲೂ ಆಗದೇ, ತೃಪ್ತಿ ಅವರನ್ನು ಪ್ರಯಾಸದಿಂದ ಪೊಲೀಸರು ವಾವಸ್ ಕಳುಹಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications