ಶಬರಿಮಲೆ ಭಕ್ತರಿಗೆ ಸಿಹಿ ಸುದ್ದಿ: ಯಾತ್ರೆಗೆ ಹೋಗುವುದು ಇನ್ನು ಸುಲಭ
ತಿರುವನಂತಪುರಂ, ಜನವರಿ 8: ಪ್ರತಿ ವರ್ಷ ಮಕರವಿಳಕ್ಕು ಅವಧಿಯಲ್ಲಿ ದಿನವೂ ಲಕ್ಷಾಂತರ ಭಕ್ತರಿಂದ ಗಿಜಿಗುಡುತ್ತಿದ್ದ ಶಬರಿಮಲೆ ಸ್ವಾಮಿ ಅಯ್ಯಪ್ಪನ ಸನ್ನಿಧಿ ಈ ಬಾರಿ ಹಬ್ಬದ ಸಂಭ್ರಮವಿಲ್ಲದೆ ಕಳೆಗುಂದಿದೆ. ಕೊರೊನಾ ವೈರಸ್ ಸೋಂಕಿನ ನಿರ್ಬಂಧಗಳಿಂದಾಗಿ ಈ ಬಾರಿ ಭಕ್ತರ ಸಂಖ್ಯೆಗೆ ಮಿತಿ ಹೇರಲಾಗಿದೆ. ಪ್ರತಿ ವರ್ಷ ವ್ರತ ಕೈಗೊಂಡು ಅಲ್ಲಿಗೆ ತೆರಳುತ್ತಿದ್ದ ಭಕ್ತರು ಈ ಬಾರಿ ನಿರಾಶೆಗೊಂಡಿದ್ದಾರೆ. ಈ ಬೇಸರದ ನಡುವೆಯೇ ಖುಷಿಯ ಸಂಗತಿಯೊಂದು ದೊರಕಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಬಾರಿ ಶಬರಿಮಲೆ ಯಾತ್ರೆಗೆ ಭಕ್ತರು ರೈಲಿನಲ್ಲಿ ಸಾಗಬಹುದು. ದೂರ ಊರುಗಳಿಂದ ವಾಹನ ಮಾಡಿಕೊಂಡು ಹೋಗುವ ಸಂಕಷ್ಟಗಳು ದೂರವಾಗಲಿದೆ. ಶಬರಿಮಲೆಗೆ ಸುಮಾರು 23 ವರ್ಷಗಳಿಂದ ಬಾಕಿ ಉಳಿದಿದ್ದ ರೈಲ್ವೆ ಯೋಜನೆಯು ಕೊನೆಗೂ ಅನುಮೋದನೆಗೊಂಡಿದೆ.
ಶಬರಿಮಲೆ ರೈಲ್ವೆ ಮಾರ್ಗಕ್ಕೆ ತಗುಲುವ ವೆಚ್ಚದ ಶೇ 50ರಷ್ಟನ್ನು ಭರಿಸಲು ಕೇರಳ ಸರ್ಕಾರ ಒಪ್ಪಿಕೊಂಡಿದೆ. ಈ ಯೋಜನೆಗೆ 2,815 ಕೋಟಿ ರೂ ವೆಚ್ಚ ತಗುಲಲಿದ್ದು, ಅದರಲ್ಲಿ ಅರ್ಧದಷ್ಟು ವೆಚ್ಚವನ್ನು ಕೇರಳ ಭರಿಸಲಿದೆ. ದೇಶದೆಲ್ಲೆಡೆಯಿಂದ ಬರುವ ಲಕ್ಷಾಂತರ ಭಕ್ತರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಮುಂದೆ ಓದಿ...

1997-98ರ ಯೋಜನೆ
ಶಬರಿಮಲೆ ರೈಲು ಯೋಜನೆಯು ಕೇರಳದ ಎರ್ನಾಕುಲಂ ಜಿಲ್ಲೆಯ ಅಂಗಮಲೈ ಮತ್ತು ಕೊಟ್ಟಾಯಂ ಜಿಲ್ಲೆಯ ಎರುಮೇಲಿ ನಡುವೆ ಸುಮಾರು 111 ಕಿಮೀ ಸಂಪರ್ಕ ಕಲ್ಪಿಸಲಿದೆ. ಶಬರಿಮಲೆ ಯಾತ್ರಿಕರ ಮೂಲ ನೆಲೆಯಾದ ಪಂಬಾದಿಂದ ಎರುಮೇಲಿ ರೈಲು ನಿಲ್ದಾಣದಿಂದ 18 ಕಿಮೀ ದೂರದಲ್ಲಿದೆ. ಈ ಯೋಜನೆಯನ್ನು 1997-98ರ ಆಯವ್ಯಯದಲ್ಲಿ 517 ಕೋಟಿ ರೂ ವೆಚ್ಚದಲ್ಲಿ ಘೋಷಿಸಲಾಗಿತ್ತು. ಆದರೆ ಆಗ ಶೇ 50ರಷ್ಟು ವೆಚ್ಚ ಭರಿಸುವ ಷರತ್ತನ್ನು ಕೇರಳ ಸರ್ಕಾರ ಒಪ್ಪಿರಲಿಲ್ಲ.

ವಾಹನಗಳಲ್ಲಿ ದೂರ ಪ್ರಯಾಣಿಸಬೇಕು
ಪ್ರಸ್ತುತ ಶಬರಿಮಲೆ ಭಕ್ತರು ಶಬರಿಮಲೆಗೆ ತೆರಳಲು ಸಾಕಷ್ಟು ದೂರ ಪ್ರಯಾಣಿಸಬೇಕಾಗುತ್ತದೆ. ರೈಲು, ವಿಮಾನಗಳಲ್ಲಿ ಬರುವವರು ಕ್ಯಾಬ್, ಬಸ್ಗಳ ಮೂಲಕ ಪಂಬಾಕ್ಕೆ ಬರಬೇಕು. ಕೊಚ್ಚಿ ಮತ್ತು ತಿರುವನಂಪುರಂ ವಿಮಾನ ನಿಲ್ದಾಣಗಳಿಂದ ಐದಾರು ಗಂಟೆ ಪ್ರಯಾಣಿಸಬೇಕಾಗುತ್ತದೆ. ಕೊಟ್ಟಾಯಂ, ಚೆಂಗನ್ನೂರ್ ರೈಲು ನಿಲ್ದಾಣದಲ್ಲಿ ಇಳಿದರೂ ಪಂಬಾಕ್ಕೆ ಐದು ಗಂಟೆ ಮತ್ತೆ ಪ್ರಯಾಣಿಸಬೇಕು.

2016ರಲ್ಲಿ ಮತ್ತೆ ಜೀವ
ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗೆ 2016ರಲ್ಲಿ ಮತ್ತೆ ಜೀವ ಸಿಕ್ಕಿತ್ತು. ಕೇಂದ್ರ ರೈಲ್ವೆ ಇಲಾಖೆ ಮತ್ತು ಕೇರಳ ಸರ್ಕಾರಗಳು ಲಾಭದಾಯಕ ಯೋಜನೆಗಳನ್ನು ಗುರುತಿಸುವ ಪ್ರಕ್ರಿಯೆಗೆ ಚಾಲನೆ ನೀಡಿತ್ತು. ಅದರಲ್ಲಿ ಅಂಗಮಲೈ-ಎರುಮೇಲಿ ರೈಲು ಯೋಜನೆ ಕೂಡ ಸೇರಿತ್ತು. ಪ್ರಸ್ತುತ ಅದರ ವೆಚ್ಚ 2,187 ಕೋಟಿ ರೂ ಇದ್ದು, ಯೋಜನೆಯಿಂದ ಬರುವ ಲಾಭದ ಸಮಪಾಲು ರೈಲ್ವೆ ಇಲಾಖೆ ಮತ್ತು ರಾಜ್ಯ ಸರ್ಕಾರಗಳ ನಡುವೆ ಹಂಚಿಕೆಯಾಗಲಿದೆ.

ಯೋಜನೆ ವಿಸ್ತರಣೆಗೂ ಅವಕಾಶ
ಈ ರೈಲು ಯೋಜನೆಯ ಮೊದಲ ಹಂತದಲ್ಲಿ ಎರುಮೇಲಿ ಕೊನೆಯ ನಿಲ್ದಾಣವಾಗಿದೆ. ಎರಡನೆಯ ಹಂತದಲ್ಲಿ ರೈಲು ಮಾರ್ಗವು ಕೊಲ್ಲಂ ಜಿಲ್ಲೆಯ ಪುನಲೂರಿನವರೆಗೂ ವಿಸ್ತರಣೆಯಾಗುವ ಸಾಧ್ಯತೆ ಇದೆ. ಅದು ಸಾಧ್ಯವಾದರೆ ತಮಿಳುನಾಡಿನ ಸಂಪರ್ಕ ಕೂಡ ಹತ್ತಿರವಾಗಲಿದೆ. ನಂತರ ಪುನಲೂರಿನಿಂದ ತಿರುವನಂತಪುರಂನ ನೆಮೋಮ್ ವರೆಗೆ ಕೂಡ ರೈಲು ಮಾರ್ಗ ವಿಸ್ತರಿಸಲು ಅವಕಾಶವಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications