ಬಿಜೆಪಿ ಪರ "ಮೆಟ್ರೋ ಮ್ಯಾನ್" ಶ್ರೀಧರನ್ ಮೊದಲ ಮಾತು
ತಿರುವನಂತಪುರಂ, ಫೆಬ್ರವರಿ 20: ಶೀಘ್ರದಲ್ಲೇ ಬಿಜೆಪಿ ಸೇರಲಿರುವ "ಮೆಟ್ರೋ ಮ್ಯಾನ್" ಇ ಶ್ರೀಧರನ್, ಬಿಜೆಪಿ ಪರ ಹಲವು ಮಾತುಗಳನ್ನು ಆಡಿದ್ದಾರೆ. ಬಿಜೆಪಿಯ ಆಲೋಚನೆಗಳಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದಾರೆ.
ಈಚೆಗಷ್ಟೆ 88 ವರ್ಷದ ಶ್ರೀಧರನ್ ಬಿಜೆಪಿ ಅಧಿಕಾರಕ್ಕೆ ತರಲು ನೆರವಾಗುವ ಜತೆ ಪಕ್ಷ ಬಯಸಿದರೆ ಸಿಎಂ ಆಗಲು ಸಿದ್ಧ ಎಂದು ಹೇಳಿದ್ದರು. ಜೊತೆಗೆ ತಾವು ಅಧಿಕಾರಕ್ಕೆ ಬರುತ್ತಿದ್ದಂತೆ ಹಲವು ಮೂಲ ಸೌಕರ್ಯಗಳ ಅಭಿವೃದ್ಧಿ ಕೆಲಸಗಳೆಡೆಗೆ ಗಮನ ನೀಡುವುದಾಗಿ ತಿಳಿಸಿದ್ದರು.
ಸಂದರ್ಶನವೊಂದರಲ್ಲಿ "ಲವ್ ಜಿಹಾದ್" ಕುರಿತು ಮಾತನಾಡಿರುವ ಅವರು, ನಾನು ಲವ್ ಜಿಹಾದ್ ವಿರೋಧಿಸುತ್ತೇನೆ. ಹಿಂದೂ ಯುವತಿಯರನ್ನು ಮದುವೆಯಾಗಿ ಅವರಿಗೆ ವಂಚನೆ ಮಾಡಿರುವ ಹಲವು ಉದಾಹರಣೆಯನ್ನು ಕೇರಳದಲ್ಲಿ ನೋಡಿದ್ದೇನೆ. ಮದುವೆ ನಂತರ ಅವರು ಕಷ್ಟಪಡುವುದನ್ನೂ ಕಂಡಿದ್ದೇನೆ. ಬರೀ ಹಿಂದೂ ಅಲ್ಲದೇ ಮುಸ್ಲಿಂ, ಕ್ರಿಶ್ಚಿಯನ್ ಹುಡುಗಿಯರನ್ನು ಕೂಡ ಮದುವೆ ವಿಷಯದಲ್ಲಿ ಮೋಸಗೊಳಿಸಲಾಗುತ್ತಿದೆ. ಇದನ್ನು ನಾನು ವಿರೋಧಿಸುತ್ತೇನೆ ಎಂದು ಹೇಳಿದ್ದಾರೆ.

ಗೋಮಾಂಸ ನಿಷೇಧ ಸಂಬಂಧ ಬಿಜೆಪಿ ಆಂದೋಲನದ ಕುರಿತು ಅಭಿಪ್ರಾಯ ಹಂಚಿಕೊಂಡ ಅವರು, "ನಾನು ಶುದ್ಧ ಸಸ್ಯಾಹಾರಿ. ಮೊಟ್ಟೆಯನ್ನು ಕೂಡ ತಿನ್ನುವುದಿಲ್ಲ. ಹೀಗಾಗಿ ಮಾಂಸ ತಿನ್ನುವವರೂ ನನಗೆ ಇಷ್ಟವಾಗುವುದಿಲ್ಲ" ಎಂದು ಹೇಳಿದ್ದಾರೆ.
ಕೇರಳದಲ್ಲಿ ಭಾನುವಾರ(ಫೆ.21)ದಂದು ನಡೆಯಲಿರುವ ವಿಜಯ್ ಯಾತ್ರೆಯಲ್ಲಿ ಪಾಲ್ಗೊಳ್ಳಲಿರುವ ಶ್ರೀಧರನ್ ಅವರು ಅಧಿಕೃತವಾಗಿ ಕೇಸರಿ ಪಡೆಯನ್ನು ಫೆಬ್ರವರಿ 25ರಂದು ಸೇರಲಿದ್ದಾರೆ ಎನ್ನಲಾಗಿದೆ. ಮುಂಬರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವುದಾಗಿ ತಿಳಿದುಬಂದಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications