ಶಬರಿಮಲೆಗೆ ಭೇಟಿ; ಆನ್ಲೈನ್ ಬುಕ್ಕಿಂಗ್ ಮಾಡುವುದು ಹೇಗೆ?
ತಿರುವನಂತಪುರಂ, ನವೆಂಬರ್ 17 : ಕೋವಿಡ್ ಭೀತಿಯ ನಡುವೆಯೇ ಕೇರಳದ ಶಬರಿಮಲೆ ದೇವಾಲಯ ಎರಡು ತಿಂಗಳ ವಿಶೇಷ ಪೂಜೆಗಾಗಿ ಬಾಗಿಲು ತೆರೆದಿದೆ. ಭಕ್ತರಿಗೆ ಸಹ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ.
ಭಾನುವಾರವೇ ಶಬರಿಮಲೆ ದೇವಾಲಯದ ಬಾಗಿಲನ್ನು ವಾರ್ಷಿಕ ವಿಶೇಷ ಪೂಜೆಗಾಗಿ ತೆರೆಯಲಾಗಿದೆ. ಸೋಮವಾರದಿಂದ ಭಕ್ತರು ಭೇಟಿ ನೀಡಲು ಅವಕಾಶ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕಿದೆ.
ದೇವರ ದರ್ಶನ ಪಡೆಯುವ ಭಕ್ತರು ಮುಂಜಾನೆ 3 ಗಂಟೆಗೆ ಕಾಲ್ನಡಿಗೆ ಆರಂಭಿಸಬೇಕಿದೆ. ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಇದ್ದ ಭಕ್ತರು ಮಾತ್ರ ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಪೊಲೀಸರು, ದೇವಾಲಯದ ಸಿಬ್ಬಂದಿ ಕೋವಿಡ್ ಮಾರ್ಗಸೂಚಿ ಪಾಲನೆ ಬಗ್ಗೆ ನಿಗಾ ವಹಿಸಲಿದ್ದಾರೆ.

62 ದಿನಗಳ ಕಾಲ ನಡೆಯುವ ವಿಶೇಷ ಪೂಜೆ ಸಮಯದಲ್ಲಿ ಲಕ್ಷಾಂತರ ಭಕ್ತರು ಪ್ರತಿ ವರ್ಷ ಶಬರಿಮಲೆಗೆ ಭೇಟಿ ನೀಡುತ್ತಿದ್ದರು. ಈ ಬಾರಿ 85 ಸಾವಿರ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ ಎಂದು ಆಡಳಿತ ಮಂಡಳಿ ಹೇಳಿದೆ.
ವರ್ಚುವಲ್ ಕ್ಯೂ ಸಿಸ್ಟಂ ಮೂಲಕ ದೇವರ ದರ್ಶನ ಪಡೆಯಲು 1000 ಭಕ್ತರು ಮಾತ್ರ ನೋಂದಣಿ ಮಾಡಿಸಿದ್ದಾರೆ. ಪ್ರತಿದಿನ 1 ಸಾವಿರ ಭಕ್ತರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವಿದೆ. ಶನಿವಾರ ಮತ್ತು ಭಾನುವಾರ 2 ಸಾವಿರ ಪ್ರಯಾಣಿಕರು ಭೇಟಿ ಕೊಡಬಹುದು.
ಶಬರಿಮಲೆ ದೇವಾಲಯದ ಬೇಸ್ ಕ್ಯಾಂಪ್ ತಲುಪುವ 24 ಗಂಟೆಗಳ ಮೊದಲು ಕೋವಿಡ್ ನೆಗೆಟಿವ್ ವರದಿಯನ್ನು ಭಕ್ತರು ಹೊಂದಿರಬೇಕು. ಅಲ್ಲಿ ಮತ್ತೊಮ್ಮೆ ಪರೀಕ್ಷೆ ಮಾಡಲು ಬಯಸಿದರೆ ಅದಕ್ಕೆ ಸಹಾಯಕವಾಗಲು ಪರೀಕ್ಷಾ ಕೇಂದ್ರ ತೆರೆಯಲಾಗಿದೆ.
ಭಕ್ತರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ದೇವಾಲಯದ ಮೆಟ್ಟಿಲನ್ನು ಹತ್ತುವಾಗ ಮಾತ್ರ ಮಾಸ್ಕ್ ತೆಗೆಯುವುದಕ್ಕೆ ವಿನಾಯಿತಿ ನೀಡಲಾಗಿದೆ. ಆನ್ ಲೈನ್ ಟಿಕೆಟ್ ಬುಕ್ ಮಾಡಲು ಭಕ್ತರು ಇಲ್ಲಿ ಕ್ಲಿಕ್ ಮಾಡಬಹುದು.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications