ಕೇರಳದಲ್ಲಿ ಮಾತ್ರವಲ್ಲ, ಇಡೀ ದೇಶದಲ್ಲೇ ಉತ್ತಮ ಸಿಎಂ ಆಗಬಲ್ಲೆ; ಶ್ರೀಧರನ್
ಪಾಲಕ್ಕಾಡ್, ಏಪ್ರಿಲ್ 8: ಕೇರಳದ ವಿಧಾನ ಸಭೆ ಚುನಾವಣೆ ಏಪ್ರಿಲ್ 6ರಂದು ಪೂರ್ಣಗೊಂಡಿದ್ದು, ಈಗ ರಾಜ್ಯದಲ್ಲಿ ಗೆಲುವಿನ ಲೆಕ್ಕಾಚಾರ ಆರಂಭವಾಗಿದೆ.
ಪಾಲಕ್ಕಾಡ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮೆಟ್ರೋ ಮ್ಯಾನ್ ಇ ಶ್ರೀಧರನ್ ತಾವು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಪಿಣರಾಯಿ ಸರ್ಕಾರ ಜಾರಿಗೆ ತಂದಿರುವ ಹಲವು ಯೋಜನೆಗಳನ್ನು ಸರಿಪಡಿಸಲಾಗುವುದು ಎಂದು ಹೇಳಿದರು. ತಮ್ಮನ್ನು ಮುಖ್ಯಮಂತ್ರಿಯಾಗುವಂತೆ ಬಿಜೆಪಿ ಕೇಳಿದರೆ ತಾವು ನಿರಾಕರಿಸುವುದಿಲ್ಲ ಎಂದೂ ಹೇಳಿದ್ದಾರೆ.
"ನಾನು ಪಿಣರಾಯಿ ವಿಜಯನ್ಗಿಂತ ಉತ್ತಮ ಸಿಎಂ ಆಗಬಲ್ಲೆ. ಇನ್ನಾವುದೇ ರಾಜ್ಯದ ಮುಖ್ಯಮಂತ್ರಿಗಳಿಗಿಂತಲೂ ಚೆನ್ನಾಗಿ ಕಾರ್ಯನಿರ್ವಹಿಸಬಲ್ಲೆ. ಇಡೀ ದೇಶದಲ್ಲೇ ಉತ್ತಮ ಸಿಎಂ ಎನಿಸಿಕೊಳ್ಳುತ್ತೇನೆ" ಎಂದು ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ವಿಜಯಾನಂತರದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪಾಲಕ್ಕಾಡ್ನಲ್ಲಿ ಹೆಚ್ಚು ಕಾಲ ನಾನು ಇರಲಿಲ್ಲ. ಆದರೆ ಎಲ್ಲರಿಗೂ ನನ್ನ ಬಗ್ಗೆ ಎಲ್ಲವೂ ತಿಳಿದಿದೆ. ನನ್ನ ಬಗ್ಗೆ ಆರು ಪುಸ್ತಕಗಳಿವೆ. ಹಲವರು ಆ ಪುಸ್ತಕ ಓದಿದ್ದಾರೆ. ನನ್ನ ಬಗ್ಗೆ ಪುಟ್ಟ ಮಕ್ಕಳಿಗೂ ತಿಳಿದಿದೆ. ನನ್ನ ಬಗ್ಗೆ ಅವರಿಗೆಲ್ಲಾ ತುಂಬು ಉತ್ಸಾಹ ಹಾಗೂ ಅಪಾರ ಗೌರವವಿದೆ ಎಂದು ಹೇಳಿದ್ದಾರೆ. ತಮ್ಮ ಚರಿಷ್ಮಾದಿಂದಲಾಲೇ ಸಾಕಷ್ಟು ಮತ ಗಳಿಸಿರುತ್ತೇನೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣಾಪೂರ್ವ ಸಮೀಕ್ಷೆಗಳು, ಬಿಜೆಪಿ ಕೇರಳದಲ್ಲಿ 35 ಕ್ಷೇತ್ರಗಳನ್ನು ಗೆಲ್ಲುವುದಾಗಿ ತಿಳಿಸಿವೆ. 35 ಕ್ಷೇತ್ರಗಳನ್ನು ಗೆದ್ದರೆ ಬಿಜೆಪಿ ಕಿಂಗ್ ಮೇಕರ್ ಆಗಲಿದೆ. ಆಗ ಯಾರು ಹೇಗೆ ಆಡಳಿತ ನಡೆಸಬಹುದು ಎಂಬುದರ ಕುರಿತು ಆಲೋಚನೆ ಮಾಡಬಹುದು ಎಂದಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications