ಕೇರಳದಲ್ಲಿ ಬಿಜೆಪಿ ನಾಯಕ ಬಾಲಶಂಕರ್ಗೆ ಕ್ರಿಶ್ಚಿಯನ್ನರ ಬೆಂಬಲ
ತಿರುವನಂತಪುರಂ, ಮಾರ್ಚ್ 05: ಕೇರಳದಲ್ಲಿ ಬಿಜೆಪಿ ನಾಯಕ ಆರ್ ಬಾಲಶಂಕರ್ಗೆ ಬೆಂಬಲ ನೀಡುವುದಾಗಿ ಕ್ರಿಶ್ಚಿಯನ್ನರು ಘೋಷಿಸಿದ್ದಾರೆ.
ಚಪ್ಪಾಡ್ನಲ್ಲಿರುವ ಮಾಲಂಕಾರ ಆರ್ಥೊಡಾಕ್ಸ್ ಸಿರಿಯನ್ ಚರ್ಚ್ ವಕ್ತಾರ ಫಾದರ್ ಜಾನ್ಸ್ ಅಬ್ರಹಂ ಕೋನಟ್ ಆರ್ ಬಾಲಶಂಕರ್ ಅವರಿಗೆ ಮತ ಹಾಕುವಂತೆ ಒತ್ತಾಯಿಸಿದ್ದಾರೆ.
ಬಾಲಶಂಕರ್ ಅವರು ಕೇರಳ ಆಲಪ್ಪುಳ ಜಿಲ್ಲೆಯಲ್ಲಿರುವ 1 ಸಾವಿರ ವರ್ಷ ಹಳೆಯ ಚರ್ಚ್ನ್ನು ಉಳಿಸಿಕೊಟ್ಟಿದ್ದಾರೆ, ಇಲ್ಲವಾದಲ್ಲಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಸಂದರ್ಭದಲ್ಲಿ ಚರ್ಚ್ ನೆಲಸಮವಾಗಿಬಿಡುತ್ತಿತ್ತು ಎಂದು ಹಳೆದ ದಿನಗಳನ್ನು ಮೆಲುಕು ಹಾಕಿದ್ದಾರೆ.

ಬಾಲಶಂಕರ್ ಇಲ್ಲದಿದ್ದರೆ ಚರ್ಚ್ ಕೂಡ ಇರುತ್ತಿರಲಿಲ್ಲ, ಬಾಲಶಂಕರ್ ಅವರಿಗೆ ಮತ ಹಾಕದಿದ್ದರೆ ಅದು ಕೃತಜ್ಞತೆ ಎನಿಸಿಕೊಳ್ಳುವುದಿಲ್ಲ. ಅವರಿಗೆ ಮತ ಹಾಕೋಣ ಗೆಲುವು ಸೋಲು ದೇವರಿಗೆ ಬಿಡೋಣ ಎಂದು ಚರ್ಚ್ನ ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ.
ಚಪ್ಪಾಡ್ ಚರ್ಚ್ ವಿಷಯದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಿ, ಪುರಾತತ್ವ ಇಲಾಖೆಗೆ ಚರ್ಚ್ ಹಸ್ತಾಂತರಿಸಲಾಯಿತು, ಬಳಿಕ ನೆಲಸಮ ಮಾಡುವ ವಿಚಾರವನ್ನು ಕೈಬಿಡಲಾಗಿತ್ತು ಎಂದರು.
ಬಾಲಶಂಕರ್ ಅವರು ಚೆಂಗನೂರಿನ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಚರ್ಚ್ಗೆ ಯಾವುದೇ ಸಹಾಯ ಮಾಡದೆ ಎಲ್ಡಿಎಫ್ ಹಾಗೂ ಯುಡಿಎಫ್ ಹಿಂದೆ ಸರಿದಿದ್ದರು. ಆಗ ಬಾಲಶಂಕರ್ ಅವರೇ ಮುಂದೆ ನಿಂತು ಚರ್ಚ್ ಉಳಿಸಿಕೊಟ್ಟಿದ್ದರು.
ಕೇರಳದ 14 ಜಿಲ್ಲೆಗಳಲ್ಲಿನ 140 ಕ್ಷೇತ್ರಗಳಿಗೆ ಒಂದೇ ಹಂತದಲ್ಲೇ ಚುನಾವಣೆ ನಡೆಯಲಿದೆ. ಮಾರ್ಚ್ 12ರಂದು ಅಧಿಸೂಚನೆ ಪ್ರಕಟ ಮಾರ್ಚ್ 20ರಂದು ನಾಮಪತ್ರ ಪರಿಶೀಲನೆ ಮಾರ್ಚ್ 22ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಏಪ್ರಿಲ್ 6 ರಂದು ಮತದಾನ ಮೇ 2 ರಂದು ಮತ ಎಣಿಕೆ, ಫಲಿತಾಂಶ ಪ್ರಕಟವಾಗಲಿದೆ.
2016ರಲ್ಲಿ ಯುಡಿಎಫ್ 47 ಸ್ಥಾನ ಗಳಿಸಿತ್ತು, ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಫಲಿತಾಂಶ ನೀಡಿದರೂ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಯುಡಿಎಫ್ ಸಾಧನೆ ಕಳಪೆಯಾಗಿತ್ತು.
ಕಳೆದ ಬಾರಿ 87 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ 22 ಸ್ಥಾನ ಗೆದ್ದಿತ್ತು. ಮುಸ್ಲಿಂ ಲೀಗ್ 24 ಕ್ಷೇತ್ರಗಳಲ್ಲಿ 18 ಕ್ಷೇತ್ರ ತನ್ನದಾಗಿಸಿಕೊಂಡಿತ್ತು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications