ತಲೆಗೆ ಬ್ಯಾಂಡೇಜ್ ಸುತ್ತಿಕೊಂಡೇ ಪ್ರಚಾರಕ್ಕೆ ಬಂದ ತರೂರ್, ಕೊಂಡಾಡಿದ ರಾಹುಲ್
ತಿರುವನಂತಪುರಂ, ಏಪ್ರಿಲ್ 17: ದೇವಾಲಯವೊಂದರಲ್ಲಿ ಅಚಾನಕ್ಕಾಗಿ ಬಿದ್ದು ಗಾಯಮಾಡಿಕೊಂಡಿದ್ದ ಕಾಂಗ್ರೆಸ್ ಮುಖಂಡ ಶಶಿ ತರೂರ್, ತಲೆಗೆ ಬ್ಯಾಂಡೇಜ್ ಸುತ್ತಿಕೊಂಡೇ ಪ್ರಚಾರ ಮಾಡುತ್ತಿರುವುದನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೊಂಡಾಡಿದ್ದಾರೆ.
ಬಿಜೆಪಿ, ಕಾಂಗ್ರೆಸ್, ಸಿಪಿಎಂ ಪ್ರಣಾಳಿಕೆಯ ತುಲನೆ. ಯಾವ ಪಕ್ಷದ ಪ್ರಣಾಳಿಕೆ ಉತ್ತಮವಾಗಿದೆ?
ಅವರ ಉತ್ಸಾಹ ಮತ್ತು ಕಾರ್ಯತತ್ಪರತೆಗೆ ಜೈ ಎಂದಿದ್ದಾರೆ. "ಶಶಿ ತರೂರ್ ಅವರು ಬಿದ್ದು, ಏಟು ಮಾಡಿಕೊಂಡಾಗ ನಾನು ಹೆದರಿದ್ದೆ. ಆದರೆ ಇದೀಗ ಅವರು ಕೆಲಸಕ್ಕೆ ಮರಳಿದ್ದಾರೆ. ಅವರ ಉತ್ಸಾಹ ಮತ್ತು ಕೆಲಸದ ಬಗೆಗಿನ ಶ್ರದ್ಧೆ ಏನು ಎಂಬುದಕ್ಕೆ ಇದೇ ಸಾಕ್ಷಿ. ನಾನು ಕಾಂಗ್ರೆಸ್ ಅಧ್ಯಕ್ಷನಾಗಿ ಹೇಳುತ್ತೇನೆ. ಶಶಿ ತರೂರ್ ಅವರು ಸಂಸತ್ತಿನಲ್ಲಿ ನಿಮ್ಮನ್ನೆಲ್ಲ ಸಮರ್ಥವಾಗಿ ಪ್ರತಿನಿಧಿಸುತ್ತಾರೆ. ಅವರು ಕೇರಳಕ್ಕೆ ಒಂದು ಆಸ್ತಿ" ಎಂದು ರಾಹುಲ್ ಗಾಂಧಿ ಹಾಡಿ ಹೊಗಳಿದ್ದಾರೆ.
ಕೇರಳದ ಗಾಂಧಾರಿ ಅಮನ್ ಕೋವಿಲ್ ದೇವಸ್ಥಾನದಲ್ಲಿ ಅಚಾನಕ್ಕಾಗಿ ಬಿದ್ದ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಅವರ ತಲೆಗೆ ತೀವ್ರವಾಗಿ ಗಾಯವಾಗಿತ್ತು.ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತೆ ನೀಡಲಾಗುತ್ತಿತ್ತು. ತಲೆಗೆ ತೀವ್ರ ಗಾಯವಾಗಿದ್ದು, ವೈದ್ಯರು ಹನ್ನೊಂದು ಹೊಲಿಗೆ ಹಾಕಿದ್ದರು.

ಈ ಎಲ್ಲವುಗಳ ನಡುವೆಯೂ ಪ್ರಚಾರಕ್ಕೆ ಆಗಮಿಸಿ ಅವರು ಜನರ ಗಮನ ಸೆಳೆದರು.
ಮಂಗಳವಾರವಷ್ಟೇ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಶಿ ತರೂರ್ ಅವರನ್ನು ಆಸ್ಪತ್ರೆಯಲ್ಲಿ ಅನಿರೀಕ್ಷಿತವಾಗಿ ಭೇಟಿ ಮಾಡಿದ್ದರು. ಅವರ ಸೌಜನ್ಯಕ್ಕೆ ಕರಗಿದ ಶಶಿ ತರೂರ್, ಭಾರತೀಯ ರಾಜಕಾರಣದಲ್ಲಿ ಇಂಥ ಪ್ರಬುದ್ಧ ನಡೆ ಅಪರೂಪ ಎಂದು ಶ್ಲಾಘಿಸಿದ್ದರು.
ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಶಶಿ ತರೂರ್, ಏಪ್ರಿಲ್ 23 ರಂದು ಚುನಾವಣೆ ಎದುರಿಸಲಿದ್ದಾರೆ. ಮೇ 23 ರಂದು ಫಲಿತಾಂಶ ಹೊರಬೀಳಲಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications