ಕಾಡಿನ ಮೂಲಕ ಉಗ್ರರ ಪ್ರವೇಶ: ಶಬರಿಮಲೆಯಲ್ಲಿ ಗುಪ್ತಚರ ಹೈಅಲರ್ಟ್
ತಿರುವನಂತಪುರಂ ನ 12: ವಿಶ್ವವಿಖ್ಯಾತ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ಅರಣ್ಯದ ಮೂಲಕ ಸಾಗಬೇಕಾಗಿರುವುದರಿಂದ, ಆ ಮೂಲಕವೇ ಉಗ್ರರು ನುಸುಳುವ ಸಾಧ್ಯತೆಯಿದೆ ಎಂದು ಕೇರಳ ಮತ್ತು ಕೇಂದ್ರ ಸರಕಾರಕ್ಕೆ ವರದಿಯನ್ನು ಗುಪ್ತಚರ ಇಲಾಖೆ ನೀಡಿದೆ.
ನವೆಂಬರ್ ಹದಿನಾರರಿಂದ ಜನವರಿ ಇಪ್ಪತ್ತರವರೆಗೆ ಶಬರಿಮಲೆ ದೇವಾಲಯ ಮಂಡಲಪೂಜೆ ಮತ್ತು ಮಕರ ಸಂಕ್ರಾತಿಗಾಗಿ, 66 ದಿನ ಬಾಗಿಲು ತೆರೆದಿರುತ್ತದೆ. ಈ ಅವಧಿಯಲ್ಲಿ ಅತೀವ ಭದ್ರತೆಯನ್ನು ನೀಡುವಂತೆ, ಗುಪ್ತಚರ ಇಲಾಖೆ ಸೂಚಿಸಿದೆ.
ಅರಣ್ಯ ಪ್ರದೇಶದಲ್ಲಿ ಭಕ್ತರು ಬರುವಾಗ ಅವರ ರೂಪದಲ್ಲೇ ಉಗ್ರರು ನುಸುಳುವ ಸಾಧ್ಯತೆಯಿದೆ. ದೇವಾಲಯಕ್ಕೆ ಆಗಮಿಸುವ ವಿದೇಶಿ ಪ್ರವಾಸಿಗರ ಬಳಿಯೂ ಮಾಹಿತಿಯನ್ನು ಸಂಗ್ರಹಿಸಿ, ದೇವಾಲಯದೊಳಗೆ ಬಿಡಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಬಾರಿ, ಶಬರಿಮಲೆ ದೇವಾಲಯದ ಮೇಲೆ, ವಾಯುಸೇನೆ ಮತ್ತು ನೌಕಾಪಡೆಯ ರಕ್ಷಣೆಯೂ ಇರಲಿದೆ. ಜೊತೆಗೆ, ದೇವಾಲಯಕ್ಕೆ ಸಾಮಗ್ರಿಗಳನ್ನು ತೆಗೆದುಕೊಂಡು ಬರುವ ವಾಹನವೂ ವಿಶೇಷ ತಪಾಸಣೆಗೆ ಒಳಪಡಲಿದೆ.
ನವೆಂಬರ್ 16 ರಿಂದ ಡಿಸೆಂಬರ್ 27ರವರೆಗೆ ದೇವಾಲಯ ಮಂಡಲಪೂಜೆಗೆ ತೆರೆಯಲಿದೆ. ಡಿಸೆಂಬರ್ 28, 29ರಂದು ದೇವಾಲಯವನ್ನು ಮುಚ್ಚಲಾಗುವುದು. ನಂತರ, ಡಿಸೆಂಬರ್ 30ರಿಂದ ಜನವರಿ 21ರವರೆಗೆ, ಮಕರ ವಿಳಕ್ಕುಗಾಗಿ ದೇವಾಲಯ ಮತ್ತೆ ತೆರೆಯಲಿದೆ.
ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶಕ್ಕೆ ಹೇರಿದ್ದ ನಿಷೇಧ ತೆರವುಗೊಳಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ಕುರಿತ ತೀರ್ಪನ್ನು ಸುಪ್ರೀಂ ಕೋರ್ಟ್ ಈ ವಾರದಲ್ಲಿ (ನ 12-16) ನೀಡುವ ಸಾಧ್ಯತೆಯಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications